Don't Miss!
- News Mallikarjun Kharge: ಕಲಬುರಗಿ ಲೋಕಸಭಾ ಕ್ಷೇತ್ರ; ಅಳಿಯನ ಕಾಳಗದಲ್ಲಿ ಮಲ್ಲಿಕಾರ್ಜುನ ಖರ್ಗೆ ಪ್ರತಿಷ್ಠೆ
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Automobiles ಮೇಡ್ ಇನ್ ಇಂಡಿಯಾ ಈ ಕಾರಿಗೆ ಜಪಾನ್ನಲ್ಲಿ ಭಾರೀ ಬೇಡಿಕೆ: ವಿಶ್ವಗುರು ಭಾರತಕ್ಕೆ ಎಲ್ಲವೂ ಸಾಧ್ಯ!
- Lifestyle ವಿಕಲಚೇತನರಿಗೆ ಸ್ಕೂಟಿ ಗಿಫ್ಟ್..! ಮನೆ ಕಟ್ಟಿಕೊಡುವ ಭರವಸೆ ನೀಡಿದ ನಟ ಲಾರೆನ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಚಿತ್ರರಂಗಕ್ಕೆ ಇರುವುದು ಒಬ್ಬರೇ ಶ್ರೀ ದೇವಿ' ಎಂದ ನಟ ಯಶ್
ಶ್ರೀದೇವಿ ಅವರ ನಿಧನದ ವಾರ್ತೆ ಎಲ್ಲರಿಗೂ ಶಾಕಿಂಗ್ ಸುದ್ದಿಯಾಗಿದೆ. ಇಷ್ಟು ಬೇಗ ಶ್ರೀದೇವಿ ಎಲ್ಲರನ್ನು ಬಿಟ್ಟು ಹೋಗುತ್ತಾರೆ ಎಂದು ಯಾರು ಊಹೆ ಮಾಡಿರಲಿಲ್ಲ. ಇನ್ನೂ ಶ್ರೀದೇವಿ ಅವರ ಸಾವಿನ ಬಗ್ಗೆ ಮಾತನಾಡಿದ ನಟ ಯಶ್ ಈ ವಿಷಯವನ್ನು ನಂಬಲು ಆಗುತ್ತಿಲ್ಲ ಅಂತ ಹೇಳಿದ್ದಾರೆ.
ಮಾಧ್ಯಮದ ಜೊತೆಗೆ ಮಾತನಾಡಿರುವ ಯಶ್ ''ಇಂದು ಬೆಳಗಿನ ಜಾವ 4 ಗಂಟೆಗೆ ವಿಷಯ ತಿಳಿಯಿತು. ನಂಬಲು ಆಗಲಿಲ್ಲ. ಈಗಲೂ ಆ ಸುದ್ದಿ ನಿಜ ಎಂದು ಅನಿಸುತ್ತಿಲ್ಲ. ಯಾಕಂದ್ರೆ ಅವರು ನೋಡಿದರೆ ಯಾವಾಗಲೂ ತುಂಬ ಫಿಟ್ ಆಗಿ ಇದ್ದರು. ಅಂತಹ ಮಹಾನ್ ನಟಿ ಇಷ್ಟು ಬೇಗ ಸಾಯುತ್ತಾರೆ ಎಂದು ಯಾರು ಅಂದುಕೊಂಡಿರಲಿಲ್ಲ. ಅವರನ್ನು ನಾವು ಕಳೆದುಕೊಂಡಿದ್ದೇವೆ. ಅವರ ಆತ್ಮಕ್ಕೆ ದೇವರು ಶಾಂತಿ ನೀಡಲಿ. ಚಿತ್ರರಂಗಕ್ಕೆ ಇರುವುದು ಒಬ್ಬರೇ ಶ್ರೀದೇವಿ'' ಎಂದು ಯಶ್ ಹೇಳಿದ್ದಾರೆ.
ಶ್ರೀದೇವಿ ಅಗಲಿಕೆ : ನೋವಿನಲ್ಲಿ ನಟ ಶಿವರಾಜ್ ಕುಮಾರ್ ಮಾತು
ಇನ್ನು ನಟ ಶಿವಣ್ಣ ಕೂಡ ಮಾತನಾಡಿ ''ಅವರು ಇಲ್ಲ ಅಂತ ಕೇಳುವುದಕ್ಕೆ ತುಂಬ ನೋವಾಗುತ್ತದೆ. ಈ ಹಿಂದೆ ಶ್ರೀ ದೇವಿ ಅವರನ್ನು ಎರಡು ಬಾರಿ ಶಿವಣ್ಣ ಭೇಟಿ ಮಾಡಿದೆ. ಅವರು ಇಲ್ಲ ಎನ್ನುವ ಸುದ್ದಿಯನ್ನು ಜೀರ್ಣ ಮಾಡಿಕೊಳ್ಳಲು ಆಗುತ್ತಿಲ್ಲ.'' ಎಂದು ಹೇಳಿದ್ದಾರೆ.
ಅಂದಹಾಗೆ, ಬಾಲಿವುಡ್ ನ ಹಿರಿಯ ನಟಿ ಶ್ರೀದೇವಿ(54) ಹೃದಯಾಘಾತದಿಂದ ದುಬೈನಲ್ಲಿ ಶನಿವಾರ ರಾತ್ರಿ ನಿಧನರಾಗಿದ್ದಾರೆ. ಶ್ರೀದೇವಿ ತಮ್ಮ ಪತಿ ಬೋನಿ ಕಪೂರ್ ಮತ್ತು ಪುತ್ರಿ ಖುಷಿ ಜೊತೆ ದುಬೈಗೆ ಹಾರಿದ್ದರು. ದುಬೈನಲ್ಲಿ ಮೋಹಿತ್ ಮಾರ್ವಾ ವಿವಾಹ ಮಹೋತ್ಸವ ಇದ್ದ ಕಾರಣ ಇಡೀ ಕಪೂರ್ ಫ್ಯಾಮಿಲಿ ಅಲ್ಲಿಗೆ ತೆರಳಿತ್ತು. ಈ ವೇಳೆ ಈ ಘಟನೆ ನಡೆದಿದೆ.