Just In
Don't Miss!
- News
ಸಂಸತ್ ಕಟ್ಟಡದ ಮಹಾತ್ಮ ಗಾಂಧಿ ಪ್ರತಿಮೆ ತರಾತುರಿಯಲ್ಲಿ ಸ್ಥಳಾಂತರ
- Sports
ಐಎಸ್ಎಲ್: ಬೆಂಗಳೂರಿಗೆ ಸೋಲಿನ ಆಘಾತ ನೀಡಿದ ಕೇರಳ ಬ್ಲಾಸ್ಟರ್ಸ್
- Education
WAPCOS Recruitment 2021: 11 ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Finance
ಇಪ್ಪತ್ತು ದಿನದಲ್ಲಿ 47 ಪರ್ಸೆಂಟ್ ನಷ್ಟು ಏರಿಕೆ ಕಂಡ ಟಾಟಾ ಮೋಟಾರ್ಸ್ ಷೇರು
- Automobiles
ಡ್ಯುಯಲ್ ಟೋನ್ ಬಣ್ಣದ ಆಯ್ಕೆಯೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ಸಿಟ್ರನ್ ಸಿ5 ಏರ್ಕ್ರಾಸ್ ಕಾರು
- Lifestyle
ಯಾವಾಗ ಸಂಗಾತಿಗೆ ಮೋಸ ಮಾಡಿ ಅನೈತಿಕ ಸಂಬಂಧ ಬೆಳೆಸುತ್ತಾರೆ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮುನ್ನಾಭಾಯ್ ಭೇಟಿ ಮಾಡಿದ ಸಂತಸ ಹಂಚಿಕೊಂಡ 'ಕೆಜಿಎಫ್'ನ ರೀನಾ
ಸ್ಯಾಂಡಲ್ ವುಡ್ ನ ಬಹುನೀಕ್ಷೆಯ ಕೆಜಿಎಫ್ ಚಾಪ್ಟರ್-2 ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಇಡೀ ಭಾರತೀಯ ಚಿತ್ರರಂಗವೆ ಕಾತುರದಿಂದ ಕಾಯುತ್ತಿರುವ ಕೆಜಿಎಫ್-2ಗೆ ಈಗಾಗಲೆ ಬಾಲಿವುಡ್ ನ ಖಳನಾಯಕ್ ಎಂಟ್ರಿ ಕೊಟ್ಟಿದ್ದಾರೆ.
ಅಧೀರನ ಎಂಟ್ರಿಯಿಂದ ಕೆಜಿಎಫ್-2 ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ. ಚಿತ್ರೀಕರಣದಲ್ಲಿ ಸಂಜಯ್ ದತ್ ಭಾಗಿಯಾಗಿರುವ ಬಗ್ಗೆ ಚಿತ್ರತಂಡ ಹೇಳಿಕೊಂಡಿತ್ತು. ಅಲ್ಲದೆ ಚಿತ್ರೀಕರಣಕ್ಕೆ ಎಂಟ್ರಿ ಕೊಟ್ಟ ಸಂಜು ಬಾಬಾನ ಜೊತೆ ಚಿತ್ರತಂಡ ಫೋಟೋ ಕ್ಲಿಕ್ಕಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದರು.
ರಾಕಿ ಭಾಯ್ ಜೊತೆ 'ಅಧೀರ' ಸಂಜಯ್ ದತ್ ಪ್ರತ್ಯಕ್ಷ
ರಾಕಿ ಭಾಯ್ ವಿರುದ್ಧ ಮುನ್ನಾಭಾಯ್ ಕಾದಾಟ ನೋಡಲು ಅಭಿಮಾನಿಗಳು ಕಾತುರರಾಗಿದ್ದಾರೆ. ಇತ್ತೀಚಿಗಷ್ಟೆ ಚಿತ್ರೀಕರಣ ಸೆಟ್ ನಲ್ಲಿ ಯಶ್ ಮತ್ತು ಸಂಜಯ್ ದತ್ ಮೊದಲ ಬಾರಿಗೆ ಒಟ್ಟಿಗೆ ಕಾಣಿಸಿಕೊಂಡಿದ್ದ ಫೋಟೋ ಕೂಡ ವೈರಲ್ ಆಗಿತ್ತು. ಆದ್ರೀಗ ನಟಿ ಶ್ರೀನಿಧಿ ಶೆಟ್ಟಿ ಸಂಜಯ್ ದತ್ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದಾರೆ.
ಜೊತೆಗೆ ಕ್ಯಾಪ್ಷನ್ ಕೂಡ ಹಾಕಿದ್ದಾರೆ. "ಕೊನೆಗೂ ಅಧೀರಾ ಜೊತೆ. ತೆರೆ ಮೇಲೆ ಮಾನ್ ಸ್ಟರ್, ಆದ್ರೆ ವೈಯಕ್ತಿಕವಾಗಿ ತುಂಬ ಸ್ವೀಟೆಸ್ಟ್ ವ್ಯಕ್ತಿ" ಎಂದು ಬರೆದುಕೊಂಡಿದ್ದಾರೆ.
ಕೆಜಿಎಫ್ ಮೊದಲ ಭಾಗದಲ್ಲಿ ಆಧೀರಾನ ಬಗ್ಗೆ ಹೇಳದ ಚಿತ್ರತಂಡ, ಎರಡನೇ ಭಾಗದಲ್ಲಿ ಅಧೀರಾನ ಸಂಪೂರ್ಣ ಇತಿಹಾಸ ತೆರೆದುಕೊಳ್ಳಲಿದೆ. ಚಿತ್ರಕ್ಕೆ ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿದ್ದು, ವಿಜಯ್ ಕಿರಗಂದೂರ್ ನಿರ್ಮಿಸುತ್ತಿದ್ದಾರೆ. ರವಿ ಬಸ್ರೂರು ಸಂಗೀತ, ಭುವನ್ ಗೌಡ ಛಾಯಾಗ್ರಹಣವಿದೆ. ಮುಂದಿನ ವರ್ಷದ ಮಧ್ಯದಲ್ಲಿ ಸಿನಿಮಾ ತೆರೆಗೆ ಬರುವ ಸಾಧ್ಯತೆ ಇದೆ.