Don't Miss!
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಣ್ಣ ಹಚ್ಚಿದ 'ಮನ ಮೆಚ್ಚಿದ ಹುಡುಗಿ' ಸುಧಾರಾಣಿ ಪುತ್ರಿ ನಿಧಿ
ನಟ-ನಟಿಯರ ಮಕ್ಕಳು ಬಣ್ಣ ಹಚ್ಚುವುದರಲ್ಲಿ ಹೊಸ ವಿಷಯ ಏನಿಲ್ಲ. ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ರಕ್ಷಿತಾ, ದರ್ಶನ್, ವಿನಯ್ ರಾಜ್ ಕುಮಾರ್ ಹಾಗೂ ಲೇಟೆಸ್ಟ್ ಆಗಿ ಜೈಜಗದೀಶ್ ಮೂವರು ಪುತ್ರಿಯರು...ಹೀಗೆ ಅಪ್ಪ-ಅಮ್ಮ ನಡೆದು ಬಂದ ಹಾದಿಯಲ್ಲೇ ಮಕ್ಕಳು ಸಾಗಿದಂತೆ ನಟಿ ಸುಧಾರಾಣಿ ಪುತ್ರಿ ನಿಧಿ ಕೂಡ ಬಣ್ಣದ ಪ್ರಪಂಚಕ್ಕೆ ಅಡಿಯಿಟ್ಟಿದ್ದಾರೆ.
ಹಾಗಂತ ನಿಧಿ ಸಿನಿಮಾದಲ್ಲಿ ಅಭಿನಯಿಸುತ್ತಿಲ್ಲ. ಬದಲಾಗಿ, ಮೈಸೂರು ಟಾರ್ಪಲಿನ್ಸ್ ಜಾಹೀರಾತಿನಲ್ಲಿ ರೂಪದರ್ಶಿಯಾಗಿ ಮಿಂಚಿದ್ದಾರೆ. [ಕನ್ನಡ ನಟಿ ಸುಧಾರಾಣಿ ಪತಿ ಬೇರಾರೂ ಅಲ್ಲ, 'ಇವರೇ'.!]
ಹಾಗ್ನೋಡಿದ್ರೆ, ನಿಧಿ ಮೊಟ್ಟ ಮೊದಲ ಬಾರಿಗೆ ಬಣ್ಣ ಹಚ್ಚಿದ್ದು ಏಳನೇ ವಯಸ್ಸಿನಲ್ಲಿ. ಆಗಲೇ, ಅಮ್ಮ ಸುಧಾರಾಣಿ ಜೊತೆ ಚಿತ್ರವೊಂದರಲ್ಲಿ ನಿಧಿ ಆಕ್ಟ್ ಮಾಡಿದ್ದರು. ಆದರೆ ಕಾರಣಾಂತರಗಳಿಂದ ಆ ಸಿನಿಮಾ ಅರ್ಧಕ್ಕೆ ನಿಂತುಹೋಯ್ತು. [ಸುಧಾರಾಣಿ ವೈಯುಕ್ತಿಕ ಜೀವನದ ಬಗ್ಗೆ ಯಾರಿಗೂ ಗೊತ್ತಿಲ್ಲದ ಕಠೋರ ಸತ್ಯ!]
ಅದಾದ ಬಳಿಕ, ಓದಿನಲ್ಲೇ ಆಸಕ್ತಿ ತೋರಿದ್ದ ನಿಧಿ ಈಗ ಜಾಹಿರಾತಿನಲ್ಲಿ ಮಿನುಗಿದ್ದಾರೆ. ಸದ್ಯಕ್ಕಿನ್ನೂ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ನಿಧಿಗೆ ವಿದ್ಯಾಭ್ಯಾಸದ ಬಗ್ಗೆ ಹೆಚ್ಚು ಗಮನ. ಓದು ಮುಗಿದ ಬಳಿಕ ನಟನೆ ಬಗ್ಗೆ ಮಾತು ಎನ್ನುತ್ತಾರೆ.