Don't Miss!
- News Rain Alert: ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ: ಈ ಜಿಲ್ಲೆಗಳಲ್ಲಿ ಭಾರಿ ಬಿಸಿಲು
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಣ್ಣ ಹಚ್ಚಿದ 'ಮನ ಮೆಚ್ಚಿದ ಹುಡುಗಿ' ಸುಧಾರಾಣಿ ಪುತ್ರಿ ನಿಧಿ
ನಟ-ನಟಿಯರ ಮಕ್ಕಳು ಬಣ್ಣ ಹಚ್ಚುವುದರಲ್ಲಿ ಹೊಸ ವಿಷಯ ಏನಿಲ್ಲ. ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ರಕ್ಷಿತಾ, ದರ್ಶನ್, ವಿನಯ್ ರಾಜ್ ಕುಮಾರ್ ಹಾಗೂ ಲೇಟೆಸ್ಟ್ ಆಗಿ ಜೈಜಗದೀಶ್ ಮೂವರು ಪುತ್ರಿಯರು...ಹೀಗೆ ಅಪ್ಪ-ಅಮ್ಮ ನಡೆದು ಬಂದ ಹಾದಿಯಲ್ಲೇ ಮಕ್ಕಳು ಸಾಗಿದಂತೆ ನಟಿ ಸುಧಾರಾಣಿ ಪುತ್ರಿ ನಿಧಿ ಕೂಡ ಬಣ್ಣದ ಪ್ರಪಂಚಕ್ಕೆ ಅಡಿಯಿಟ್ಟಿದ್ದಾರೆ.
ಹಾಗಂತ ನಿಧಿ ಸಿನಿಮಾದಲ್ಲಿ ಅಭಿನಯಿಸುತ್ತಿಲ್ಲ. ಬದಲಾಗಿ, ಮೈಸೂರು ಟಾರ್ಪಲಿನ್ಸ್ ಜಾಹೀರಾತಿನಲ್ಲಿ ರೂಪದರ್ಶಿಯಾಗಿ ಮಿಂಚಿದ್ದಾರೆ. [ಕನ್ನಡ ನಟಿ ಸುಧಾರಾಣಿ ಪತಿ ಬೇರಾರೂ ಅಲ್ಲ, 'ಇವರೇ'.!]
ಹಾಗ್ನೋಡಿದ್ರೆ, ನಿಧಿ ಮೊಟ್ಟ ಮೊದಲ ಬಾರಿಗೆ ಬಣ್ಣ ಹಚ್ಚಿದ್ದು ಏಳನೇ ವಯಸ್ಸಿನಲ್ಲಿ. ಆಗಲೇ, ಅಮ್ಮ ಸುಧಾರಾಣಿ ಜೊತೆ ಚಿತ್ರವೊಂದರಲ್ಲಿ ನಿಧಿ ಆಕ್ಟ್ ಮಾಡಿದ್ದರು. ಆದರೆ ಕಾರಣಾಂತರಗಳಿಂದ ಆ ಸಿನಿಮಾ ಅರ್ಧಕ್ಕೆ ನಿಂತುಹೋಯ್ತು. [ಸುಧಾರಾಣಿ ವೈಯುಕ್ತಿಕ ಜೀವನದ ಬಗ್ಗೆ ಯಾರಿಗೂ ಗೊತ್ತಿಲ್ಲದ ಕಠೋರ ಸತ್ಯ!]
ಅದಾದ ಬಳಿಕ, ಓದಿನಲ್ಲೇ ಆಸಕ್ತಿ ತೋರಿದ್ದ ನಿಧಿ ಈಗ ಜಾಹಿರಾತಿನಲ್ಲಿ ಮಿನುಗಿದ್ದಾರೆ. ಸದ್ಯಕ್ಕಿನ್ನೂ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ನಿಧಿಗೆ ವಿದ್ಯಾಭ್ಯಾಸದ ಬಗ್ಗೆ ಹೆಚ್ಚು ಗಮನ. ಓದು ಮುಗಿದ ಬಳಿಕ ನಟನೆ ಬಗ್ಗೆ ಮಾತು ಎನ್ನುತ್ತಾರೆ.