Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯೋಧ ಗುರು ಕುಟುಂಬದ ನೆರವಿಗೆ ಬಂದ ಸುಮಲತಾ
ಪುಲ್ವಾಮಾ ದಾಳಿಯಿಂದ ಬಲಿಯಾದ ಯೋಧರಲ್ಲಿ ಕರ್ನಾಟಕದ ಗುರು ಕೂಡ ಒಬ್ಬರು. ಈ ವೀರ ಭಾರತೀಯ ಪುತ್ರನ ಅಂತಿಮ ಸಂಸ್ಕಾರ ಇದೀಗ ನಡೆಯುತ್ತಿದೆ.
ಯೋಧ ಗುರು ಕುಟುಂಬಕ್ಕೆ ಅರ್ಧ ಎಕರೆ ಜಮೀನು ಕೊಟ್ಟ ಸುಮಲತಾ ಅಂಬರೀಶ್
ಮಂಡ್ಯದ ಯೋಧ ಗುರು ಕುಟುಂಬದ ನೆರವಿಗೆ ನಟಿ ಸುಮಲತಾ ಬಂದಿದ್ದಾರೆ. ಗುರು ಕುಟುಂಬಕ್ಕೆ ಅರ್ಧ ಎಕರೆ ಜಮೀನು ನೀಡುವುದಾಗಿ ಸುಮಲತಾ ಹೇಳಿದ್ದಾರೆ. ಗುರು ಅವರ ಕುಟುಂಬದ ಬಳಿ ಯಾವುದೇ ಜಮೀನು ಇರಲಿಲ್ಲ. ಹೀಗಾಗಿ ಅಂತಿಮ ಸಂಸ್ಕಾರ ಎಲ್ಲಿ ನಡೆಯುವುದು ಎಂಬ ಗೊಂದಲ ಇತ್ತು. ಈ ವೇಳೆ ಸುಮಲತಾ ಅಂತ್ಯ ಸಂಸ್ಕಾರಕ್ಕೆ ತಾವೇ ಭೂಮಿ ನೀಡುವುದಾಗಿ ತಿಳಿಸಿದ್ದರು.
ಉಡುಪಿಯಲ್ಲಿ ಯೋಧರ ತ್ಯಾಗ ನೆನೆದ ನಟ ಪುನೀತ್
ಬಳಿಕ ಜಿಲ್ಲಾಡಳಿತ ಸರ್ಕಾರಿ ಜಮೀಮಿನಲ್ಲಿ ಅಂತ್ಯ ಸಂಸ್ಕಾರದ ವ್ಯವಸ್ಥೆ ಮಾಡಿದೆ. ಆದರೆ, ತಮ್ಮ ಮಾತಿನಂತೆ ನಡೆದುಕೊಳ್ಳುವುದಾಗಿ ಹೇಳಿದ ಸುಮಲತಾ ಅರ್ಧ ಎಕರೆ ಜಾಗವನ್ನು ಗುರು ಕುಟುಂಬಕ್ಕೆ ನೀಡುವುದಾಗಿ ಪ್ರಕಟಿಸಿದರು.
ಅಂಬರೀಶ್ ಅವರ ಹುಟ್ಟೂರಾದ ದೊಡ್ಡರಸಿನಕೆರೆಯಲ್ಲಿ ಇರುವ ಜಮೀನಿನಲ್ಲಿ ಅರ್ಧ ಎಕರೆ ಜಮೀನನ್ನು ಯೋಧ ಗುರು ಅವರ ಕುಟುಂಬಕ್ಕೆ ನೀಡಲಾಗುತ್ತಿದೆ. ಮಂಡ್ಯದ ಸೊಸೆಯಾಗಿ ಇದು ನನ್ನ ಕರ್ತವ್ಯ ಎಂದು ಸುಮಲತಾ ಅವರು ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.
Just heard the news & was pained to hear the confusion regarding place for his last rites . On behalf of Ambreesh , myself & Abishek would humbly like to offer 1/2 acre belonging to us in Doddarisanakere for his last rites and samadhi .
— sumalatha ambareesh 🇮🇳 (@sumalathaA) February 16, 2019
ಸದ್ಯ, ಸುಮಲತಾ ತಮ್ಮ ಪುತ್ರ ಅಭಿಷೇಕ್ ನಟನೆಯ 'ಅಮರ್' ಚಿತ್ರದ ಚಿತ್ರೀಕರಣಕ್ಕಾಗಿ ಮಲೇಷ್ಯಾದಲ್ಲಿ ಇದ್ದು, ವಾಪಸ್ ಬಂದ ಬಳಿಕವೇ ಗುರು ಕುಟುಂಬದ ಹೆಸರಿಗೆ ಜಮೀನು ರಿಜಿಸ್ಟರ್ ಮಾಡಿಸಲಿದ್ದಾರಂತೆ.