Don't Miss!
- Sports ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಕೆಎಲ್ ರಾಹುಲ್ಗೆ ಸ್ಥಾನ?; ರಾಬಿನ್ ಉತ್ತಪ್ಪ ಹೇಳಿದ್ದೇನು?
- News karnataka Rain: ಬೆಂಗಳೂರಿನಲ್ಲಿ ಏ.23ರವರೆಗೆ ಮಳೆ- ಬೆಳಗಾವಿ ಮಂದಿಗೆ ಕುಂದಾ ಕೊಟ್ಟ ವರುಣ ಧಾರವಾಡ ಮಂದಿಗಿಂದು ಪೇಡಾ ಕೊಡ್ತಾನಾ?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕುಮಾರಸ್ವಾಮಿ ಹೀಯಾಳಿಸಿ ಮಾತನಾಡುವುದು ಸರಿಯಲ್ಲ: ಸುಮಲತಾ ಪರ ಉಮಾಶ್ರೀ ಬ್ಯಾಟಿಂಗ್
ನಟಿ, ಸಂಸದೆ ಸುಮಲತಾ ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನಡುವಿನ ಜಟಾಪಟಿಗೆ ಇನ್ನು ಬ್ರೇಕ್ ಬಿದ್ದಿಲ್ಲ. ಡ್ಯಾಮ್ ಮತ್ತು ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿ ಎತ್ತಿರುವ ಸುಮಲತಾ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಿಡಿದೆದ್ದಿದ್ದಾರೆ. ಇಬ್ಬರ ನಡುವಿನ ವಾಗ್ವಾದ ಬೇರೆ ಬೇರೆ ತಿರುವುಗಳನ್ನು ಪಡೆದುಕೊಳ್ಳುತ್ತಿದೆ.
ಇಬ್ಬರ ನಡುವಿನ ರಾಜಕೀಯ ಗುದ್ದಾಟ ಈಗ ಅಂಬರೀಶ್ ಮತ್ತು ಕುಮಾರಸ್ವಾಮಿ ಅಭಿಮಾನಿಗಳ ನಡುವಿನ ಕಿತ್ತಾಟಕ್ಕೆ ಕಾರಣವಾಗಿದೆ. ಈಗಾಗಲೇ ಈ ಬಗ್ಗೆ ಅನೇಕ ರಾಜಕೀಯ ವ್ಯಕ್ತಿಗಳು ಪ್ರತಿಕ್ರಿಯೆ ನೀಡಿದ್ದಾರೆ. ಇದೀಗ ನಟಿ, ಮಾಜಿ ಸಚಿವೆ ಉಮಾಶ್ರೀ ಮಾತನಾಡಿ ಕುಮಾರಸ್ವಾಮಿ ಹೀಗೆ ಹೀಯಾಳಿಸಿ ಮಾತನಾಡುವುದು ಸರಿಯಲ್ಲ ಎಂದು ಹೇಳುವ ಮೂಲಕ ಸುಮಲತಾ ಪರ ಬ್ಯಾಟ್ ಬೀಸಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಮಾಜಿ ಸಚಿವೆ ಉಮಾಶ್ರೀ, "ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಈ ರೀತಿ ಹಿಯಾಳಿಸಿ ಮಾತನಾಡುವುದ, ಬೇರೆ ರೀತಿಯಲ್ಲಿ ಬಿಂಬಿಸುವುದು ಸರಿಯಲ್ಲ. ಮಹಿಳೆ ಎನ್ನುವುದನ್ನು ಪಕ್ಕಕ್ಕೆ ಇಡಿ. ಅವರ ಹೇಳಿಕೆಗಳನ್ನು ಸರ್ಕಾರ ಗಮನಿಸುತ್ತೆ. ಕನ್ನಂಬಾಡಿ ಕಟ್ಟೆಗೆ ಏನಾದರು ಆಗುತ್ತೋ ಎನ್ನುವ ಆತಂಕ ಇರಬಹುದೇನು. ಜನಗಳೇ ಬಂದು ಬೇಡಿಕೆ ಸಲ್ಲಿಸಿರಬಹುದು" ಎಂದು ಸುಮಲತಾ ಪರ ಮಾತನಾಡಿದ್ದಾರೆ.
Recommended Video
"ಸರ್ಕಾರ ಇದರ ಕಡೆ ಗಮನ ಹರಿಸಬೇಕು. ಅದಕ್ಕೆ ಕಮಿಟಿ ಮಾಡಿ ವರದಿ ತರಿಸಿಕೊಳ್ಳಬೇಕು. ಆ ಕಡೆ ಗಮನ ಹರಿಸುವುದು ಸರ್ಕಾರದ ಕೆಲಸ. ಮಾಜಿ ಮುಖ್ಯಮಂತ್ರಿಗಳು ಇದನ್ನು ಪರಿಶೀಲನೆ ಮಾಡಿ ಅಂತ ಸರ್ಕಾರಕ್ಕೆ ಹೇಳುವ ಕೆಲಸ ಮಾಡಬೇಕು. ಅದು ಬಿಟ್ಟು ಈ ರೀತಿ ನಡೆದುಕೊಳ್ಳುವುದು ಅಂತ ಘನತೆವೆತ್ತ ವ್ಯಕ್ತಿಗೆ ಶೋಭೆ ತರುವುದಿಲ್ಲ" ಎಂದಿದ್ದಾರೆ.