Don't Miss!
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- News Lok Sabha Election 2024: ಈ 6 ಜಿಲ್ಲೆಗಳಲ್ಲಿ 0% ಮತದಾನ-ಎಲ್ಲಿ ಹಾಗೂ ಕಾರಣ ಏನು?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾರು ಅಪಘಾತದ ಬಗ್ಗೆ ನಟಿ ಉಮಾಶ್ರೀ ಪ್ರತಿಕ್ರಿಯೆ
ಕಾರು ಅಪಘಾತದ ಬಗ್ಗೆ ಸ್ಯಾಂಡಲ್ ವುಡ್ ನ ಹಿರಿಯ ನಟಿ ಹಾಗೂ ರಾಜಕಾರಣಿ ಉಮಾಶ್ರೀ ಪ್ರತಿಕ್ರಿಯೆ ನೀಡಿ, 'ನನ್ನ ವಾಹನ ಜಖಂಗೊಂಡಿರೋದಕ್ಕೆ ಬೇಸರವಿಲ್ಲ. ಆದರೆ ಈ ಅಪಘಾತದಲ್ಲಿ ಇಬ್ಬರ ಪ್ರಾಣ ಹೋಯಿತಲ್ಲಾ ಅದರಿಂದ ತುಂಬಾ ನೋವಾಗ್ತಿದೆ' ಎಂದು ಹೇಳಿದ್ದಾರೆ.
ನಿನ್ನೆ (ನವೆಂಬರ್ 20) ತಡರಾತ್ರಿ ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಬಳಿ ನಡೆದ ರಸ್ತೆ ಅಪಘಾತದಲ್ಲಿ ವಿಜಯಪುರ ಜಿಲ್ಲಾ ಸರ್ಜನ್ ಡಾ.ಶರಣಪ್ಪ ಕಟ್ಟಿ ಅವರ ಪತ್ನಿ ಶೋಭಾ (ಶಾರದಾ) ಕಟ್ಟಿ ಹಾಗೂ ಹಾಗೂ ಚಾಲಕ ಸಂದೀಪ್ ವಿಭೂತಿ ಮಠ ಸಾವಿಗೀಡಾಗಿದ್ದಾರೆ.
ನಟಿ ಉಮಾಶ್ರೀಯವರ ಕಾರು ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು
ಇದೇ ಘಟನೆಯಲ್ಲಿ ನವಲಗುಂದ ಹೆಲ್ತ್ ಆಫೀಸರ್ ಆಗಿದ್ದ ಡಾ.ಶರಣಪ್ಪ ಕಟ್ಟಿ ಅವರ ಪುತ್ರಿ ಡಾ.ಸ್ಮಿತಾ ಕಟ್ಟಿ ಕೂಡಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಷ್ಟೇ ಅಲ್ಲ, ಉಮಾಶ್ರೀಯವರ ಇನ್ನೋವಾ ಕಾರು ಚಾಲಕ ಶಿವಕುಮಾರ ಬಿಡನಾಳ ಗಾಯಗೊಂಡಿದ್ದಾರೆ.
ಘಟನೆ ನಡೆದ ಬೆನ್ನಲ್ಲೇ ನಟಿ ಉಮಾಶ್ರೀ ತೇರದಾಳಕ್ಕೆ ಹೋಗಲು ಆಗಮಿಸಿದ್ದು ಈ ಸಮಯದಲ್ಲಿ ಮಾತನಾಡಿ ಘಟನೆಯ ಬಗ್ಗೆ ತೀವ್ರ ಬೇಸರವ್ಯಕ್ತ ಪಡಿಸಿದರು. 'ಕೊಪ್ಪಳ ಮೂಲದ ಚಾಲಕ ಇಲ್ಲಿಗೆ ಬಂದಿದ್ದು ಯಾಕೆ ಎಂಬುದು ಗೊತ್ತಿಲ್ಲ. ಆತನನ್ನ ನನ್ನ ಕಾರ್ಯಕರ್ತರೇ ಪರಿಚಯಿಸಿ ಕಳಿಸಿದ್ದರು. ಇಡೀ ಘಟನೆಯಿಂದ ನಾನು ನೊಂದಿದ್ದೇನೆ' ಎಂದರು.
Recommended Video
ಉಮಾಶ್ರೀ ಅವರನ್ನು ಬಿಟ್ಟು ಕಾರು ಚಾಲಕ ತನ್ನೂರಿಗೆ ಹೊರಟಿದ್ದರು. ಓವರ್ ಟೇಕ್ ಮಾಡುವ ಭರದಲ್ಲಿ ಎದುರಿಗೆ ಬಂದ ಬಲೆನೋ ಕಾರಿನ ನಡುವೆ ಡಿಕ್ಕಿಯಾಗಿದೆ. ಅಪಘಾತದ ಬಗ್ಗೆ ಗ್ರಾಮೀಣ ಠಾಣೆಯ ಇನ್ಸಪೆಕ್ಟರ್ ರಮೇಶ್ ಗೋಕಾಕ ಅವರಿಂದ ಮಾಹಿತಿ ಪಡೆದ ಉಮಾಶ್ರೀಯವರು, ಮುಂದಿನ ಕಾನೂನು ಕ್ರಮದ ಬಗ್ಗೆಯೂ ತಿಳಿದುಕೊಂಡರು.