Don't Miss!
- News ಆಕ್ಸಿಸ್ ಬ್ಯಾಂಕ್ಗೆ ಬರೋಬ್ಬರಿ 7,129 ಕೋಟಿ ರೂಪಾಯಿ ಲಾಭ!
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತುಳು ಧ್ವಜ ಅಪಮಾನಿಸಿದ ವ್ಯಕ್ತಿ: ಸಿಡಿದೆದ್ದ ನಟಿ ಅದ್ವಿತಿ ಶೆಟ್ಟಿ
ಕರ್ನಾಟಕದ ಪ್ರಾದೇಶಿಕ ಭಾಷೆಗಳಲ್ಲಿ ತುಳು ಭಾಷೆಯೂ ಒಂದು. ಕರಾವಳಿ ಭಾಗದಲ್ಲಿ ತುಳು ಭಾಷೆ ಮಾತನಾಡುವರ ಸಂಖ್ಯೆ ಹೆಚ್ಚಿದೆ. ಕರಾವಳಿಯ ಕೆಲವು ಜಿಲ್ಲೆಗಳನ್ನು ಸೇರಿಸಿ ಪ್ರತ್ಯೇಕ ರಾಜ್ಯ ಮಾಡಬೇಕು ಎಂಬ ಹೋರಾಟ, ಅಭಿಯಾನವೂ ಆಗಾಗ ನಡೆಯುತ್ತಲೇ ಇದೆ.
ಇಲ್ಲೊಬ್ಬ ವ್ಯಕ್ತಿ ತುಳು ಧ್ವಜ ಹೋಲುವಂತೆ ಚಪ್ಪಲಿ ವಿನ್ಯಾಸಗೊಳಿಸಿ, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾನೆ. ಇದನ್ನ ಗಮನಿಸಿ ನಟಿ ಅದ್ವಿತಿ ಶೆಟ್ಟಿ ವಿರೋಧಿಸಿದ್ದಾರೆ.
ಕರ್ನಾಟಕ ರಾಜ್ಯ ವಿಭಜನೆಗೂ ಶುರುವಾಯಿತು ಕೂಗು
'ಪ್ರತಿಯೊಂದು ಮಾತೃಭಾಷೆಯನ್ನು ಗೌರವಿಸಬೇಕು. ಅಪಮಾನ ಮಾಡುವಂತಹ ಕೆಲಸ ಮಾಡಬಾರದು' ಎಂದು ನಟಿ ಅದ್ವಿತಿ ಶೆಟ್ಟಿ ಆಕ್ರೋಶ ಹೊರಹಾಕಿದ್ದಾರೆ.
'ಇದನ್ನು ಸಹಿಸಲು ಸಾಧ್ಯವಿಲ್ಲ. ನನ್ನ ಮಾತೃಭಾಷೆ ತುಳು. ನಾನೊಬ್ಬ ತುಳುವ ಎಂದು ಹೇಳಿಕೊಳ್ಳಲು ನನಗೆ ಹಮ್ಮೆ ಇದೆ. ನಿಜಕ್ಕೂ ಇದು ನೋವು ಉಂಟು ಮಾಡಿದೆ. ನಮ್ಮ ಸುತ್ತಲೂ ಇಂತಹ ವಿಷಯಗಳು ನಡೆಯುತ್ತಿದೆ. ಇಂತಹ ದ್ವೇಷವನ್ನು ಏಕೆ ಹರಡಿಸಬೇಕು, ಏಕೆ ಮಾತನಾಡಬೇಕು' ಎಂದು ನಟಿ ಅದ್ವಿತಿ ಶೆಟ್ಟಿ ಇನ್ಸ್ಟಾಗ್ರಾಂನಲ್ಲಿ ಬೇಸರ ವ್ಯಕ್ತಪಡಿಸಿದರು.
'ಕನ್ನಡ ಭಾಷೆಯನ್ನು ಇಷ್ಟ ಪಡುವಷ್ಟೇ ತುಳು ಭಾಷೆಯನ್ನು ಇಷ್ಟ ಪಡುತ್ತೇನೆ. ದಯವಿಟ್ಟು ಈ ಆರೋಪಿಗಳನ್ನು ಪತ್ತೆ ಹಚ್ಚಿ' ಎಂದು ವಿನಂತಿಸಿದ್ದಾರೆ.
Recommended Video
'ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ' ಚಿತ್ರದ ಮೂಲಕ ಖ್ಯಾತಿ ಗಳಿಸಿಕೊಂಡ ಅದ್ವಿತಿ ಶೆಟ್ಟಿ ನಂತರ ಹಲವು ಸಿನಿಮಾಗಳಲ್ಲಿ ನಟಿಸಿದರು. ಪ್ರಸ್ತುತ, ಕಾರ್ತಿಕ್ ಜಯರಾಂ ಅಭಿನಯಿಸುತ್ತಿರುವ ಐರಾವನ್ ಚಿತ್ರದಲ್ಲಿ ಅದ್ವಿತಿ ಶೆಟ್ಟಿ ಕಾಣಿಸಿಕೊಂಡಿದ್ದಾರೆ.