Don't Miss!
- Sports
ರಿಷಭ್ ಪಂತ್ ಆರೋಗ್ಯದಲ್ಲಿ ಭಾರೀ ಚೇತರಿಕೆ: ಈ ವಾರವೇ ಆಸ್ಪತ್ರೆಯಿಂದ ಡಿಶ್ಚಾರ್ಜ್ ಸಾಧ್ಯತೆ
- News
Mangaluru cooker blast: ಸುಟ್ಟಗಾಯಗಳಿಂದ ಚೇತರಿಸಿಕೊಂಡ ಆರೋಪಿಯನ್ನು ವಶಕ್ಕೆ ಪಡೆಯಲಿರುವ ಎನ್ಐಎ
- Finance
ಹೊಸ ಆಫರ್: ಗೃಹ ಸಾಲದ ಬಡ್ಡಿದರ ಇಳಿಸಿದ ಎಸ್ಬಿಐ!
- Lifestyle
Horoscope Today 30 Jan 2023: ಸೋಮವಾರ: ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Technology
ಬಜೆಟ್ ಬೆಲೆಯಲ್ಲಿ ಈ ಸ್ಮಾರ್ಟ್ಫೋನ್ಗಳು ಬೆಸ್ಟ್ ಎನಿಸಿಲಿವೆ! ಜಬರ್ದಸ್ತ್ ಫೀಚರ್ಸ್!
- Automobiles
ಬೆಲೆ ಏರಿಕೆ ಪಡೆದುಕೊಂಡ ಪರ್ಫಾಮೆನ್ಸ್ ಕಾರು ಪ್ರಿಯರ ಮೆಚ್ಚಿನ ಹ್ಯುಂಡೈ ಐ20 ಎನ್ ಲೈನ್
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ತುಳು ಧ್ವಜ ಅಪಮಾನಿಸಿದ ವ್ಯಕ್ತಿ: ಸಿಡಿದೆದ್ದ ನಟಿ ಅದ್ವಿತಿ ಶೆಟ್ಟಿ
ಕರ್ನಾಟಕದ ಪ್ರಾದೇಶಿಕ ಭಾಷೆಗಳಲ್ಲಿ ತುಳು ಭಾಷೆಯೂ ಒಂದು. ಕರಾವಳಿ ಭಾಗದಲ್ಲಿ ತುಳು ಭಾಷೆ ಮಾತನಾಡುವರ ಸಂಖ್ಯೆ ಹೆಚ್ಚಿದೆ. ಕರಾವಳಿಯ ಕೆಲವು ಜಿಲ್ಲೆಗಳನ್ನು ಸೇರಿಸಿ ಪ್ರತ್ಯೇಕ ರಾಜ್ಯ ಮಾಡಬೇಕು ಎಂಬ ಹೋರಾಟ, ಅಭಿಯಾನವೂ ಆಗಾಗ ನಡೆಯುತ್ತಲೇ ಇದೆ.
ಇಲ್ಲೊಬ್ಬ ವ್ಯಕ್ತಿ ತುಳು ಧ್ವಜ ಹೋಲುವಂತೆ ಚಪ್ಪಲಿ ವಿನ್ಯಾಸಗೊಳಿಸಿ, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾನೆ. ಇದನ್ನ ಗಮನಿಸಿ ನಟಿ ಅದ್ವಿತಿ ಶೆಟ್ಟಿ ವಿರೋಧಿಸಿದ್ದಾರೆ.
ಕರ್ನಾಟಕ ರಾಜ್ಯ ವಿಭಜನೆಗೂ ಶುರುವಾಯಿತು ಕೂಗು
'ಪ್ರತಿಯೊಂದು ಮಾತೃಭಾಷೆಯನ್ನು ಗೌರವಿಸಬೇಕು. ಅಪಮಾನ ಮಾಡುವಂತಹ ಕೆಲಸ ಮಾಡಬಾರದು' ಎಂದು ನಟಿ ಅದ್ವಿತಿ ಶೆಟ್ಟಿ ಆಕ್ರೋಶ ಹೊರಹಾಕಿದ್ದಾರೆ.
'ಇದನ್ನು ಸಹಿಸಲು ಸಾಧ್ಯವಿಲ್ಲ. ನನ್ನ ಮಾತೃಭಾಷೆ ತುಳು. ನಾನೊಬ್ಬ ತುಳುವ ಎಂದು ಹೇಳಿಕೊಳ್ಳಲು ನನಗೆ ಹಮ್ಮೆ ಇದೆ. ನಿಜಕ್ಕೂ ಇದು ನೋವು ಉಂಟು ಮಾಡಿದೆ. ನಮ್ಮ ಸುತ್ತಲೂ ಇಂತಹ ವಿಷಯಗಳು ನಡೆಯುತ್ತಿದೆ. ಇಂತಹ ದ್ವೇಷವನ್ನು ಏಕೆ ಹರಡಿಸಬೇಕು, ಏಕೆ ಮಾತನಾಡಬೇಕು' ಎಂದು ನಟಿ ಅದ್ವಿತಿ ಶೆಟ್ಟಿ ಇನ್ಸ್ಟಾಗ್ರಾಂನಲ್ಲಿ ಬೇಸರ ವ್ಯಕ್ತಪಡಿಸಿದರು.
'ಕನ್ನಡ ಭಾಷೆಯನ್ನು ಇಷ್ಟ ಪಡುವಷ್ಟೇ ತುಳು ಭಾಷೆಯನ್ನು ಇಷ್ಟ ಪಡುತ್ತೇನೆ. ದಯವಿಟ್ಟು ಈ ಆರೋಪಿಗಳನ್ನು ಪತ್ತೆ ಹಚ್ಚಿ' ಎಂದು ವಿನಂತಿಸಿದ್ದಾರೆ.

Recommended Video
'ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ' ಚಿತ್ರದ ಮೂಲಕ ಖ್ಯಾತಿ ಗಳಿಸಿಕೊಂಡ ಅದ್ವಿತಿ ಶೆಟ್ಟಿ ನಂತರ ಹಲವು ಸಿನಿಮಾಗಳಲ್ಲಿ ನಟಿಸಿದರು. ಪ್ರಸ್ತುತ, ಕಾರ್ತಿಕ್ ಜಯರಾಂ ಅಭಿನಯಿಸುತ್ತಿರುವ ಐರಾವನ್ ಚಿತ್ರದಲ್ಲಿ ಅದ್ವಿತಿ ಶೆಟ್ಟಿ ಕಾಣಿಸಿಕೊಂಡಿದ್ದಾರೆ.