Don't Miss!
- Automobiles Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಡೆಡ್ಲಿ' ಆದಿತ್ಯರ 'ಬೆಂಗಳೂರು ಅಂಡರ್ ವರ್ಲ್ಡ್'ಗೆ ದರ್ಶನ್ ಸಾಥ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು 'ಡೆಡ್ಲಿ' ಖ್ಯಾತಿಯ ನಟ ಆದಿತ್ಯ ಸಿಂಗ್ ಅವರು ಆತ್ಮೀಯ ಸ್ನೇಹಿತರಾಗಿದ್ದು, ಇವರು 'ಸ್ನೇಹನಾ ಪ್ರೀತಿನಾ' ಎಂಬ ಚಿತ್ರದಲ್ಲಿ ಒಂದಾಗಿದ್ದರು. ತದನಂತರ ಇವರು ಯಾವುದೇ ಸಿನಿಮಾದಲ್ಲಿ ಒಂದಾಗಿರಲಿಲ್ಲ.
ಇದೀಗ ಮತ್ತೆ ದರ್ಶನ್ ಮತ್ತು ಆದಿತ್ಯ ಅವರು ಒಂದಾಗಿದ್ದಾರೆ. ಈ ಬಾರಿ ಸಿನಿಮಾದಲ್ಲಿ ಒಂದಾಗದಿದ್ದರೂ ಕೂಡ, ಆದಿತ್ಯ ಅವರ ಹೊಸ ಚಿತ್ರ 'ಬೆಂಗಳೂರು ಅಂಡರ್ ವರ್ಲ್ಡ್' ಚಿತ್ರಕ್ಕೆ ದರ್ಶನ್ ಅವರು ಕ್ಲಾಪ್ ಮಾಡಿ ಮತ್ತೆ ತಮ್ಮ ಹಳೇ ಸ್ನೇಹವನ್ನು ಚಿಗುರಿಸಿದ್ದಾರೆ.['ಬೆಂಗಳೂರು ಅಂಡರ್ ವರ್ಲ್ಡ್' ಗೆ ಕಾಲಿಟ್ಟ 'ಡೆಡ್ಲಿ' ಆದಿತ್ಯ]
'ರೆಬೆಲ್' ಚಿತ್ರದ ನಂತರ ಆದಿತ್ಯ ಅವರು ಕನ್ನಡ ಚಿತ್ರರಂಗದಲ್ಲಿ ಮಾಯಾವಾಗಿದ್ದರು. ತದನಂತರ ಅವರು ತಮಿಳು ಚಿತ್ರದಲ್ಲಿ ನೆಗೆಟಿವ್ ರೋಲ್ ನಲ್ಲಿ ಮಿಂಚಿದ್ದರು. ಇದೀಗ 'ಡೆಡ್ಲಿ ಸೋಮ' ಮತ್ತು 'ಎದೆಗಾರಿಕೆ' ಚಿತ್ರದ ನಂತರ ಮತ್ತೆ ಭೂಗತ ಲೋಕದ ಚಿತ್ರಗಳಲ್ಲಿ ನಟಿಸಲು ಆಸಕ್ತಿ ತೋರಿದ್ದಾರೆ.
ನಿರ್ದೇಶಕ ಪಿ.ಎನ್ ಸತ್ಯ ಅವರು ಈ ಚಿತ್ರಕ್ಕೆ ಆಕ್ಷನ್-ಕಟ್ ಹೇಳುತ್ತಿದ್ದು, ನಿರ್ಮಾಪಕರಾದ ಸುಧಾಕರ್ ಮತ್ತು ಆನಂದ್ ಅವರು ಬಂಡವಾಳ ಹೂಡುತ್ತಿದ್ದಾರೆ. ಈಗಾಗಲೇ ಸಿನಿಮಾ ಮುಹೂರ್ತ ನೆರವೇರಿಸಿಕೊಂಡು ಸೆಟ್ಟೇರಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಶೂಟಿಂಗ್ ಆರಂಭವಾಗಲಿದೆ.[ಯಶ್ ಸಿನಿಮಾದಿಂದ 'ಡೆಡ್ಲಿ' ಆದಿತ್ಯ ಔಟ್ ಆಗಿದ್ದೇಕೆ?]
ಬೆಂಗಳೂರಿನ ಭೂಗತ ಲೋಕದ ಒಳ ಸುಳಿಗಳ ಬಗ್ಗೆ 'ಬೆಂಗಳೂರು ಅಂಡರ್ ವರ್ಲ್ಡ್' ಚಿತ್ರದಲ್ಲಿ ಹಂತ-ಹಂತವಾಗಿ ಬಿಡಿಸಿ ಹೇಳುವ ಪ್ರಯತ್ನವನ್ನು ನಿರ್ದೇಶಕರು ಮಾಡುತ್ತಿದ್ದಾರೆ. ಮೂಹೂರ್ತದ ಫೋಟೋ ಗ್ಯಾಲರಿ ನೋಡಿ ಸ್ಲೈಡುಗಳಲ್ಲಿ...