Don't Miss!
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿನ್ನದ ಹುಡುಗನಿಗೆ ಆಕ್ಷನ್-ಕಟ್ ಹೇಳ್ತಾರಂತೆ, ರಮೇಶ್ ಅರವಿಂದ್.!
ಬಹುಭಾಷಾ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರು ತೆಲುಗಿನ ಸೂಪರ್ ಹಿಟ್ 'ಭಲೇ ಭಲೇ ಮಗಾಡಿವೋಯ್', ಚಿತ್ರವನ್ನು ಕನ್ನಡಕ್ಕೆ ತರುತ್ತಿರುವ ವಿಷಯವನ್ನು ನಾವು ನಿಮಗೆ ಈ ಮೊದಲು ಇದೇ ಫಿಲ್ಮಿಬೀಟಲ್ಲಿ ಹೇಳಿದ್ವಿ ತಾನೇ.
ಈ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಮತ್ತು ತೆಲುಗಿನ ಸ್ಟೈಲಿಷ್ ಸ್ಟಾರ್ ಅಲ್ಲು ಅರ್ಜುನ್ ಹಾಗೂ ರಾಕ್ ಲೈನ್ ವೆಂಟಕೇಶ್ ಅವರು ಜೊತೆಯಾಗಿ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ ಎಂಬುದು ಈಗಿರುವ ಸದ್ಯದ ಸುದ್ದಿ.
ಅಂದಹಾಗೆ ಈ ಚಿತ್ರಕ್ಕೆ ನಿರ್ದೇಶಕರು ಯಾರು ಎಂಬುದರ ಬಗ್ಗೆ ಈ ಮೊದಲು ಭಾರಿ ಚರ್ಚೆ ಏರ್ಪಟ್ಟಿತ್ತು. ಇದೀಗ ಆ ಚರ್ಚೆಗೆ ಫುಲ್ ಸ್ಟಾಪ್ ಬಿದ್ದಿದ್ದು, ನಟ-ನಿರ್ದೇಶಕ ರಮೇಶ್ ಅರವಿಂದ್ ಅವರು ಗೋಲ್ಡನ್ ಸ್ಟಾರ್ ಗಣೇಶ್ ಗೆ ಆಕ್ಷನ್-ಕಟ್ ಹೇಳಲು ತಯಾರಾಗಿದ್ದಾರೆ.
ತಮಿಳು ನಟ ಕಮಲ್ ಹಾಸನ್ ಅವರಿಗೆ 'ಉತ್ತಮ್ ವಿಲನ್' ಸಿನಿಮಾ ಮಾಡಿದ ನಂತರ ಇದೀಗ ಮತ್ತೆ ಕನ್ನಡದಲ್ಲಿ ನಿರ್ದೇಶಕರ ಪಟ್ಟ ಹೊತ್ತುಕೊಳ್ಳಲು ನಟ ರಮೇಶ್ ಅರವಿಂದ್ ಅವರು ಒಪ್ಪಿಕೊಂಡಿದ್ದಾರೆ.[ಗೋಲ್ಡನ್ ಸ್ಟಾರ್ ಗಣಿಗೆ 'ಭಲೇ ಭಲೇ' ಎಂದ ರಾಕ್ ಲೈನ್!]
ಇನ್ನು ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರು 'ಲಿಂಗಾ' ಚಿತ್ರದ ಅನೇಕ ವಿವಾದಗಳನ್ನು ಹಿಮ್ಮೆಟ್ಟಿ 'ಭಜರಂಗಿ ಭಾಯಿಜಾನ್' ಸಿನಿಮಾದ ಯಶಸ್ಸು ಕಂಡು ಮತ್ತೆ ಕನ್ನಡಕ್ಕೆ ತೆಲುಗು ಚಿತ್ರ 'ಭಲೇ ಭಲೇ ಮಗಾಡಿವೋಯ್' ಚಿತ್ರದ ರಿಮೇಕ್ ಹಕ್ಕನ್ನು ಕೈಯಲ್ಲಿ ಹಿಡಿದು ಬಂದಿದ್ದಾರೆ.
ಸದ್ಯಕ್ಕೆ ರಮೇಶ್ ಅರವಿಂದ್ ಅವರು 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದ ಎರಡನೇ ಆವೃತ್ತಿಗೆ ತಯಾರಾಗುತ್ತಿದ್ದು, ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರು ನಿರ್ದೇಶಕ ಶಶಾಂಕ್ ಆಕ್ಷನ್-ಕಟ್ ಹೇಳುತ್ತಿರುವ 'ಮುಂಗಾರು ಮಳೆ 2' ಚಿತ್ರದ ಶೂಟಿಂಗ್ ಗಾಗಿ ರಾಜಸ್ಥಾನಕ್ಕೆ ಹಾರಿದ್ದಾರೆ.
ಒಟ್ನಲ್ಲಿ ಎಲ್ಲವೂ ಅಂದುಕೊಂಡಂತೆ ನಡೆದರೆ ಮುಂದಿನ ವರ್ಷಕ್ಕೆ ಇವರೆಲ್ಲರ ಮುಂದಾಳತ್ವದಲ್ಲಿ ಈ ಸಿನಿಮಾ ಭರ್ಜರಿಯಾಗಿ ಸೆಟ್ಟೇರಲಿದೆ.