Don't Miss!
- News ಬೆಳಗಾವಿಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಲಕ್ಷ್ಮಿ ಹೆಬ್ಬಾಳ್ಕರ್ಗೆ ಸಮನ್ಸ್ ಜಾರಿ
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- Finance ಇನ್ಮುಂದೆ ದುಬಾರಿಯಾಗಲಿದೆ ಎಸ್ಬಿಐ ಡೆಬಿಟ್, ಕ್ರೆಡಿಟ್ ಕಾರ್ಡ್ ನಿರ್ವಹಣಾ ಶುಲ್ಕ
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ರಾಬರ್ಟ್' ಪೋಸ್ಟರ್ ಅನಾವರಣಗೊಳಿಸಿದ ಕೃಷಿ ಸಚಿವ ಬಿಸಿ ಪಾಟೀಲ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾ ರಿಲೀಸ್ಗೆ ಸಿದ್ದವಾಗಿದ್ದು, ಸ್ಯಾಂಡಲ್ವುಡ್ ಮತ್ತು ಟಾಲಿವುಡ್ನಲ್ಲಿ ಸದ್ದು ಮಾಡ್ತಿದೆ. ತರುಣ್ ಸುಧೀರ್ ನಿರ್ದೇಶನ ಹಾಗೂ ಉಮಾಪತಿ ಶ್ರೀನಿವಾಸ್ ಗೌಡ ನಿರ್ಮಾಣ ಮಾಡಿರುವ ಈ ಚಿತ್ರ ಮಾರ್ಚ್ 11 ರಂದು ತೆರೆಗೆ ಬರ್ತಿದೆ.
ರಾಬರ್ಟ್ ಚಿತ್ರ ಮಾರ್ಚ್ ತಿಂಗಳಲ್ಲಿ ರಿಲೀಸ್ ಆಗುತ್ತಿರುವ ಹಿನ್ನೆಲೆ ಪೋಸ್ಟರ್ ಬಿಡುಗಡೆ ಮಾಡಿದ ಬಿಸಿ ಪಾಟೀಲ್ ಚಿತ್ರವು 100 ದಿನ ಯಶಸ್ವಿಯಾಗಿ ಪೂರೈಸಲಿ ಎಂದು ಶುಭಕೋರಿದ್ದಾರೆ.
ಕರ್ನಾಟಕದಲ್ಲಿ 'ವೀಕೆಂಡ್ ಅಗ್ರಿಕಲ್ಚರ್': ಕೃಷಿ ಇಲಾಖೆಗೆ ಜೊತೆಯಾದ ದಾಸ
ಹಿರೇಕೆರೂರಿನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ(ರಿ) ವತಿಯಿಂದ ಕೃಷಿ ಸಚಿವರಾದ ಬಿಸಿ ಪಾಟೀಲ್ ಅವರು ಹಾಗೂ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾದ ಯುಬಿ ಬಣಕಾರ್ ಅವರನ್ನು ಭೇಟಿ ಮಾಡಲಾಗಿದೆ.
ಈ ವೇಳೆ ರಾಬರ್ಟ್ ಚಿತ್ರದ ಪೋಸ್ಟರ್ಸ ಗಳನ್ನೂ ಬಿಡುಗಡೆ ಮಾಡಿ ಚಿತ್ರವು ಯಶಸ್ವಿಯಾಗಲಿ 100 ದಿನ ಪೂರೈಸಲಿ ಎಂದು ಬಿಸಿ ಪಾಟೀಲ್ ಶುಭಾಶಯ ಕೋರಿದ್ದಾರೆ.
ಸಂಭಾವನೆ ಪಡೆಯದೆ ಕೃಷಿ ಇಲಾಖೆಗೆ ರಾಯಭಾರಿಯಾದ ದರ್ಶನ್
ನಟ ದರ್ಶನ್ ಅವರ ಜೊತೆ ಬಿಸಿ ಪಾಟೀಲ್ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಕೃಷಿ ಇಲಾಖೆಗೆ ದರ್ಶನ್ ಅವರನ್ನು ರಾಯಭಾರಿಯನ್ನಾಗಿ ನೇಮಕಗೊಳಿಸಿದ್ದಾರೆ. ಈ ಹಿನ್ನೆಲೆ ಮೈಸೂರಿನಲ್ಲಿರುವ ದರ್ಶನ್ ಅವರ ಫಾರ್ಮ್ಹೌಸ್ಗೆ ಬಿಸಿ ಪಾಟೀಲ್ ಭೇಟಿ ನೀಡಿದ್ದರು.
Recommended Video