Don't Miss!
- News Eedina pre-poll Survey: ವಿಧಾನಸಭೆ ಫಲಿತಾಂಶ ನಿಖರವಾಗಿ ಕೊಟ್ಟ 'ಈದಿನ' ಸಮೀಕ್ಷೆ ಲೋಕಸಭಾ ಚುನಾವಣೆಯಲ್ಲಿ ಜೈ ಎಂದಿದ್ದು ಯಾರಿಗೆ?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Lifestyle ಇದು ಮಾಮೂಲಿ ರೈಸ್ ಅಲ್ಲ..ತೆಂಗಿನಕಾಯಿ ರೈಸ್..! ಮಾಡೋದು ಸುಲಭ.!
- Sports T20 World Cup: ಆರಂಭಿಕ ಸ್ಥಾನಕ್ಕಾಗಿ ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್ ಪೈಪೋಟಿ
- Automobiles 150KM ರೇಂಜ್, ಸುರಕ್ಷತೆಯ ಮೆಟಲ್ ಬಾಡಿಯ ಮಹಿಂದ್ರಾ ಎಲೆಕ್ಟ್ರಿಕ್ ಆಟೋ ಬಿಡುಗಡೆ: ಹೆಚ್ಚು ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸ ಸಿನಿಮಾದಲ್ಲಿ ಸತಿ-ಪತಿ ಐಂದ್ರಿತಾ ರೇ, ದಿಗಂತ್ ಅಭಿನಯ
2009 ರಲ್ಲಿ ತೆರೆಗೆ ಬಂದ 'ಮನಸಾರೆ', 2012 ರಲ್ಲಿ ತೆರೆಗೆ ಬಂದ 'ಪಾರಿಜಾತ' ಚಿತ್ರದಲ್ಲಿ ನಟ ದಿಗಂತ್ ಮತ್ತು ನಟಿ ಐಂದ್ರಿತಾ ರೇ ಒಟ್ಟಾಗಿ ಅಭಿನಯಿಸಿದ್ದರು. ಹಾಗ್ನೋಡಿದ್ರೆ, ಈ ಸಮಯದಲ್ಲೇ ದಿಗಂತ್ ಮತ್ತು ಐಂದ್ರಿತಾ ರೇ ನಡುವೆ ಪ್ರೀತಿ ಮೊಳಕೆಯೊಡೆದಿದ್ದು.
Recommended Video
ಸಿನಿಮಾ ಸೆಟ್ ನಲ್ಲಿ ಪರಿಚಯವಾಗಿ, ಸ್ನೇಹಿತರಾಗಿ, ಪ್ರೇಮಿಗಳಾದ ದಿಗಂತ್ ಮತ್ತು ಐಂದ್ರಿತಾ ರೇ ವರ್ಷದ ಹಿಂದೆ ಮದುವೆಯಾಗಿ ದಂಪತಿಗಳಾಗಿದ್ದಾರೆ. ವೈವಾಹಿಕ ಬದುಕು ಆರಂಭಿಸಿರುವ ದಿಗಂತ್-ಐಂದ್ರಿತಾ ಇದೀಗ ಹೊಸ ಸಿನಿಮಾವೊಂದರಲ್ಲಿ ಒಟ್ಟಾಗಿ ಅಭಿನಯಿಸಲಿದ್ದಾರೆ.
ಸಿನಿ ಪ್ರಿಯರಿಗೆ ಸಿಹಿ ಸುದ್ದಿ ಕೊಟ್ಟ ನಟಿ ಐಂದ್ರಿತಾ ರೇ.!
ವಿನಾಯಕ ಕೋಡ್ಸರ ನಿರ್ದೇಶನದ ಸಿಲ್ಮ್ ಮಂಜು ನಿರ್ಮಾಣದ ಇನ್ನೂ ಹೆಸರಿಡದ ಚಿತ್ರದಲ್ಲಿ ನಟಿಸಲು ದಿಗಂತ್ ಮತ್ತು ಐಂದ್ರಿತಾ ರೇ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಈ ಚಿತ್ರದಲ್ಲಿ ಅಡಿಕೆ ಬೆಳೆಗಾರನಾಗಿ ದಿಗಂತ್ ಕಾಣಿಸಿಕೊಳ್ಳಲಿದ್ದಾರೆ.
ಹಾಸ್ಯ ಪ್ರಧಾನವಾಗಿರುವ ಈ ಚಿತ್ರ ಬಹುತೇಕ ಮಲೆನಾಡಿನಲ್ಲೇ ಚಿತ್ರೀಕರಣಗೊಳ್ಳಲಿದೆ. ದಿಗಂತ್, ಐಂದ್ರಿತಾ ರೇ ಜೊತೆಗೆ ಕಿರುತೆರೆ ನಟಿ ರಂಜನಿ ರಾಘವನ್ ಕೂಡ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ. ಸದ್ಯಕ್ಕೆ ಮುಹೂರ್ತ ಪೂಜೆ ಮುಗಿಸಿರುವ ಈ ಚಿತ್ರದ ಚಿತ್ರೀಕರಣ ಇನ್ನೂ ಕೆಲವೇ ದಿನಗಳಲ್ಲಿ ಶುರುವಾಗಲಿದೆ.