Don't Miss!
- News ಚಿನ್ನದ ಬೆಲೆಯಲ್ಲಿ ಭರ್ಜರಿ ಏರಿಕೆ, ಕಾರಣ ಏನು?
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟಿ ಐಂದ್ರಿತಾ ರೇ, 'ಮೇಲುಕೋಟೆ ಮಂಜ' ಮತ್ತು ಸಂಭಾವನೆ ಕಿರಿಕ್
'ನಿರುತ್ತರ' ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ''ಕನ್ನಡ ಚಿತ್ರರಂಗದಲ್ಲಿ ನಾಯಕಿಯರ ಸಂಭಾವನೆ ಹಾಗೂ ಸ್ಥಾನಮಾನ'' ಕುರಿತು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದ ನಟಿ ಐಂದ್ರಿತಾ ರೇ ಈಗ ಮತ್ತೊಮ್ಮೆ ಸಂಭಾವನೆ ವಿಚಾರದಲ್ಲಿಯೇ ವಿವಾದದ ಕೇಂದ್ರಬಿಂದು ಆಗಿದ್ದಾರೆ.
ನಟ ಜಗ್ಗೇಶ್ ಹಾಗೂ ನಟಿ ಐಂದ್ರಿತಾ ರೇ ಅಭಿನಯದ 'ಮೇಲುಕೋಟೆ ಮಂಜ' ಚಿತ್ರದ ಬಿಡುಗಡೆಗೆ ದಿನಗಣನೆ ಶುರು ಆಗಿದೆ. ಹೀಗಿದ್ದರೂ, ಚಿತ್ರದ ಪ್ರಚಾರ ಕಾರ್ಯದಲ್ಲಿ ನಟಿ ಐಂದ್ರಿತಾ ರೇ ಭಾಗಿ ಆಗುತ್ತಿಲ್ಲ.[ಜಗ್ಗೇಶ್ ಸಾರಥ್ಯದ 'ಮೇಲುಕೋಟೆ ಮಂಜ' ಬರ್ತಾವ್ನೆ !]
ಪ್ರಚಾರಕ್ಕೆ ಬರಲು 5 ಲಕ್ಷ ರೂಪಾಯಿ ಕೊಡುವಂತೆ ನಿರ್ಮಾಪಕರ ಬಳಿ ನಟಿ ಐಂದ್ರಿತಾ ರೇ ಬೇಡಿಕೆ ಇಟ್ಟಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಐಂದ್ರಿತಾ ಸ್ಪಷ್ಟನೆ ನೀಡಿರುವುದು ಹೀಗೆ....
|
ಸುಳ್ಳು ಸುದ್ದಿ.!
''ಪ್ರಚಾರ ಕಾರ್ಯಕ್ಕೆ ಪ್ರತ್ಯೇಕ 5 ಲಕ್ಷ ರೂಪಾಯಿ ಕೇಳಿದ್ದೇನೆ'' ಎಂಬ ಸುದ್ದಿ ಶುದ್ಧ ಸುಳ್ಳು ಅಂತ ನಟಿ ಐಂದ್ರಿತಾ ರೇ ಟ್ವೀಟ್ ಮಾಡಿದ್ದಾರೆ.
5 ಲಕ್ಷ ಬಾಕಿ ಇತ್ತು.!
''ಸಂಭಾವನೆಯಲ್ಲಿ ನನಗೆ ಬರಬೇಕಾದ 5 ಲಕ್ಷ ರೂಪಾಯಿ ಇನ್ನೂ ಬಂದಿಲ್ಲ. ಅದನ್ನ ಬಿಟ್ಟು ಎಕ್ಸ್ ಟ್ರಾ ಕೇಳಿಲ್ಲ'' ಅಂತ ನಟಿ ಐಂದ್ರಿತಾ ರೇ ಸ್ಪಷ್ಟ ಪಡಿಸಿದ್ದಾರೆ.[ಸ್ಯಾಂಡಲ್ ವುಡ್ ಕಹಿಸತ್ಯಗಳನ್ನು ಬಿಚ್ಚಿಟ್ಟ ಐಂದ್ರಿತಾ ರೇ]
ವಾಟ್ಸ್ ಆಪ್ ಸಂಭಾಷಣೆ
2014, ಡಿಸೆಂಬರ್ 23 ರಂದು ನಟ, ನಿರ್ದೇಶಕ ಜಗ್ಗೇಶ್ ಜೊತೆ ನಟಿ ಐಂದ್ರಿತಾ ರೇ ನಡೆಸಿರುವ ವಾಟ್ಸ್ ಆಪ್ ಸಂಭಾಷಣೆ ಕೂಡ ಈಗ ಜಗಜ್ಜಾಹೀರಾಗಿದೆ.
5 ಲಕ್ಷ ಕೊಡುವವರೆಗೂ ಚಿತ್ರ ಬಿಡುಗಡೆಗೆ ಬಿಡುವುದಿಲ್ಲ
''5 ಲಕ್ಷ ಸ್ಮಾಲ್ ಅಮೌಂಟ್ ಅಲ್ಲ. ಅದನ್ನ ಕೊಡುವವರೆಗೂ ಚಿತ್ರ ಬಿಡುಗಡೆಗೆ ಅವಕಾಶ ನೀಡುವುದಿಲ್ಲ'' ಅಂತ ಅಂದೇ ಜಗ್ಗೇಶ್ ರವರ ಬಳಿ ಐಂದ್ರಿತಾ ರೇ ಹೇಳಿದ್ದರು. ಅದಕ್ಕೆ ಸಾಕ್ಷಿ ಈ ವಾಟ್ಸ್ ಆಪ್ ಸಂಭಾಷಣೆ.
'ಮೇಲುಕೋಟೆ ಮಂಜ'ನ ಕುರಿತು....
ನವರಸ ನಾಯಕ ಜಗ್ಗೇಶ್ ನಟಿಸಿ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಸಿನಿಮಾ 'ಮೇಲುಕೋಟೆ ಮಂಜ'. ಇದೇ ಮೊದಲ ಬಾರಿಗೆ ಐಂದ್ರಿತಾ ರೇ-ಜಗ್ಗೇಶ್ ಕಾಂಬಿನೇಷನ್ ಇರುವ ಚಿತ್ರ ಇದು. ಫೆಬ್ರವರಿ 10 ರಂದು 'ಮೇಲುಕೋಟೆ ಮಂಜ' ಬಿಡುಗಡೆ ಆಗಲಿದೆ.