Don't Miss!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Lifestyle ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಐದು ಸ್ನೇಹಿತರ ಭಾವನಾತ್ಮಕ 'ಹೊಂದಿಸಿ ಬರೆಯಿರಿ': ರಿಲೀಸ್ಗೆ ಮುಹೂರ್ತ ಫಿಕ್ಸ್!
ಸ್ಯಾಂಡಲ್ವುಡ್ ನಟಿ ಐಶಾನಿ ಶೆಟ್ಟಿ ಸಿನಿಮಾ ಬಹಳ ದಿನಗಳ ಬಳಿಕ ರಿಲೀಸ್ ಆಗುತ್ತಿದೆ. ಅಂದ್ಹಾಗೆ ಐಶಾನಿ ಶೆಟ್ಟಿ ಅಭಿನಯದ ಈ ಸಿನಿಮಾದ ಹೆಸರು 'ಹೊಂದಿಸಿ ಬರೆಯಿರಿ'. ಪರಿಸ್ಥಿತಿಗಳೊಂದಿಗೆ ಹೊಂದಿಕೊಂಡು ಬದುಕಿನ ಪಯಣ ಸಾಗಬೇಕು ಎನ್ನುವ ಎಳೆಯೇ ಈ ಸಿನಿಮಾದ ಕಥೆ.
ಬೇರೆ ಸ್ಥರದ ಬದುಕಿನ ಸುತ್ತ ಹೆಣೆಯಲಾದ ಕಥಾಹಂದರವೇ 'ಹೊಂದಿಸಿ ಬರೆಯಿರಿ' ಸಿನಿಮಾ. ಈ ಸಿನಿಮಾದಲ್ಲಿ ಐದು ಮಂದಿ ಸ್ನೇಹಿತರ ಬದುಕಿನ ಒಂದೊಂದು ಕಥೆಯಿದೆ. ಭಾವನಾತ್ಮಕ ಸನ್ನಿವೇಶಗಳಿವೆ.
ಈಗಾಗಲೇ 'ಹೊಂದಿಸಿ ಬರೆಯಿರಿ' ಸಿನಿಮಾ ತುಣುಕುಗಳು ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ಅಂದ್ಹಾಗೆ ಈ ಸಿನಿಮಾ ನವೆಂಬರ್ 18ಕ್ಕೆ ರಾಜ್ಯಾದ್ಯಂತ ಚಿತ್ರ ಬಿಡುಗಡೆ ಮಾಡಲು ಮುಹೂರ್ತ ಫಿಕ್ಸ್ ಮಾಡಾಗಿದೆ.
'ಹೊಂದಿಸಿ ಬರೆಯಿರಿ' ಸಿನಿಮಾವನ್ನು ರಾಮೇನಹಳ್ಳಿ ಜಗನ್ನಾಥ್ ನಿರ್ದೇಶನ ಮಾಡಿದ್ದಾರೆ. ಐಶಾನಿ ಜೊತೆ ಸ್ಯಾಂಡಲ್ವುಡ್ನ ಯುವತಾರಾಗಣವೇ ಇದೆ. ಪ್ರವೀಣ್ ತೇಜ್, ಐಶಾನಿ ಶೆಟ್ಟಿ, ಸಂಯುಕ್ತ ಹೊರನಾಡು, ಶ್ರೀ ಮಹದೇವ್, ಭಾವನಾ ರಾವ್, ನವೀನ್ ಶಂಕರ್, ಅರ್ಚನಾ ಜೋಯಿಸ್ ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
'ಹೊಂದಿಸಿ ಬರೆಯಿರಿ' ಸಿನಿಮಾದಲ್ಲಿ ಒಟ್ಟು ಎಂಟು ಹಾಡುಗಳಿದ್ದು ಈಗಾಗಲೇ ಒಂದು ಸಾಂಗ್ ಬಿಡುಗಡೆಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಅಕ್ಟೋಬರ್ನಲ್ಲಿ ಟ್ರೈಲರ್ ರಿಲೀಸ್ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ನಿರ್ದೇಶಕ ಜಗನ್ನಾಥ್ಗೆ ಇದು ಮೊದಲ ಸಿನಿಮಾ. ರಾಕ್ ಲೈನ್ ಪ್ರೊಡಕ್ಷನ್ನಲ್ಲಿ ಕೆಲಸ ಮಾಡಿದ ಅನುಭವ ಇವರಿಗಿದೆ. 'ಹೊಂದಿಸಿ ಬರೆಯಿರಿ' ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ನಿರ್ಮಾಣವನ್ನೂ ಮಾಡಿದ್ದಾರೆ.
ಶಾಂತಿ ಸಾಗರ್ ಹೆಚ್.ಜಿ ಕ್ಯಾಮೆರಾ , ಜೋ ಕೋಸ್ಟ ಸಂಗೀತ ನಿರ್ದೇಶನವಿದೆ. ಕೆ. ಕಲ್ಯಾಣ್, ಹೃದಯಶಿವ ಹಾಗೂ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಚಿತ್ರದ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಟಗರು ಖ್ಯಾತಿಯ ಮಾಸ್ತಿ, ಪ್ರಶಾಂತ್ ರಾಜಪ್ಪ ಹಾಗೂ ನಿರ್ದೇಶಕ ಜಗನ್ನಾಥ್ ಮೂವರೂ ಸಂಭಾಷಣೆ ಬರೆದಿದ್ದಾರೆ. ಸುನೀಲ್ ಪುರಾಣಿಕ್, ಪ್ರವೀಣ್ ಡಿ ರಾವ್ , ಧರ್ಮೇಂದ್ರ ಅರಸ್, ನಂಜುಂಡೇ ಗೌಡ, ಸುಧಾ ನರಸಿಂಹರಾಜು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ.