Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಪಘಾತಕ್ಕೀಡಾದ ಗಾಯಾಳುಗಳಿಗೆ ಚಿಕಿತ್ಸೆ ನೀಡಿ ಗಮನ ಸೆಳೆದ ಅಜಯ್ ರಾವ್
ರಸ್ತೆ ಅಪಘಾತಕ್ಕೀಡಾದ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡುವ ಮೂಲಕ ಕನ್ನಡ ನಟ ಅಜಯ್ ರಾವ್ ಮಾನವೀಯತೆ ಮೆರೆದಿದ್ದಾರೆ.
ವಿಜಯನಗರ ಜಿಲ್ಲೆಯ ಕೂಡ್ಗಿಗಿ ತಾಲೂಕಿನ ಕಾನಾಹೊಸಳ್ಳಿ ಗ್ರಾಮದ ಹೊರವಲಯದಲ್ಲಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಕಾರು ಅಪಘಾತಕ್ಕೆ ಒಳಪಟ್ಟಿದೆ. ಮೈಸೂರಿನಿಂದ ಹೊಸಪೇಟೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ನಿಯಂತ್ರಣದ ತಪ್ಪಿದ ಕಾರು ಪಲ್ಟಿಯಾಗಿದೆ.
'ಲವ್ ಯು ರಚ್ಚು' ಅವಘಡ: ಆರೋಪಗಳಿಗೆಲ್ಲ ಅಜಯ್ ರಾವ್ ಉತ್ತರ
ಇದೇ ವೇಳೆ ಹೊಸಪೇಟೆಯಿಂದ ಬೆಂಗಳೂರಿನ ಕಡೆ ಹೊರಟಿದ್ದ ನಟ ಅಜಯ್ ರಾವ್, ಈ ಅಪಘಾತವನ್ನು ಗಮನಿಸಿ ಕಾರು ನಿಲ್ಲಿಸಿದ್ದಾರೆ. ಈ ವೇಳೆ ಗಾಯಗೊಂಡವರಿಗೆ ತಮ್ಮ ಕಾರಿನಲ್ಲಿದ್ದ ಪ್ರಥಮ ಚಿಕಿತ್ಸೆಯ ಕಿಟ್ ತೆಗೆದುಕೊಂಡು ಬಂದು ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ. ಅಷ್ಟೊತ್ತಿಗೆ ಸಾರ್ವಜನಿಕರು ಹಾಗೂ ಪಿಎಸ್ಐ ಗಾಯಾಳುಗಳ ಸಹಾಯಕ್ಕೆ ಧಾವಿಸಿದ್ದಾರೆ.
ನಟ ಅಜಯ್ ರಾವ್ ಅವರ ಈ ಕೆಲಸಕ್ಕೆ ಸ್ಥಳಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಲವ್ ಯೂ ರಚ್ಚು ಘಟನೆ
ಕಳೆದ ತಿಂಗಳು ಅಜಯ್ ರಾವ್ ಮತ್ತು ರಚಿತಾ ರಾಮ್ ನಟನೆ 'ಲವ್ ಯೂ ರಚ್ಚು' ಸಿನಿಮಾ ಚಿತ್ರೀಕರಣ ವೇಳೆ ಹೈ ಟೆನ್ಷನ್ ವೈರ್ ತಗುಲಿ ಸಾಹಸ ಕಲಾವಿದನೊಬ್ಬ ಮೃತಪಟ್ಟಿದ್ದ. ಈ ವೇಳೆ ಶೂಟಿಂಗ್ ಸ್ಥಳದಲ್ಲೇ ಇದ್ದರೂ ಗಾಯಾಳು ಸಹಾಯಕ್ಕೆ ಅಜಯ್ ರಾವ್ ಬರಲಿಲ್ಲ ಎಂದು ಮತ್ತೊಬ್ಬ ಕಲಾವಿದ ದೂರಿದ್ದರು. ಆದರೆ ಆ ಸಾಹಸ ಕಲಾವಿದನ ಆರೋಪ ನಿರಾಕರಿಸಿದ ಅಜಯ್ ರಾವ್, 'ತೋರ್ಪಡಿಕೆ ಮಾಡುವುದು ನನ್ನ ವ್ಯಕ್ತಿತ್ವವಲ್ಲ, ನಾನು ಏನು ಮಾಡಬೇಕು ಅದು ಮಾಡುತ್ತೇನೆ' ಎಂದಿದ್ದರು. ಈ ಕೇಸ್ ಸಂಬಂಧ ಪೊಲೀಸರ ಮುಂದೆ ಹಾಜರಾಗಿ ವಿಚಾರಣೆ ಸಹ ಎದುರಿಸಿದ್ದರು.
ಹೆದರಿ ಜಾಮೀನಿಗೆ ಅರ್ಜಿ ಸಲ್ಲಿಸಿರಲಿಲ್ಲ: ಅಸಲಿ ಕಾರಣ ಹೇಳಿದ ಅಜಯ್ ರಾವ್
'ಕೃಷ್ಣ ಟಾಕೀಸ್' ಸಿನಿಮಾ ಕೊನೆಯದಾಗಿ ತೆರೆಕಂಡಿತ್ತು. ಸಂಜನಾ ಆನಂದ್ ಮತ್ತು ಅಜಯ್ ರಾವ್ ನಟನೆಯ 'ಶೋಕಿವಾಲ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. 'ಲವ್ ಯೂ ರಚ್ಚು' ಸಿನಿಮಾ ಶೂಟಿಂಗ್ ಹಂತದಲ್ಲಿದೆ.