Don't Miss!
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Sports RCB vs KKR: ಗೇಮ್ ಚೇಂಜರ್ ಆಗಬಹುದು ಈ ಪ್ಲೇಯರ್ಸ್; ಈ ಆಟಗಾರರ ಮೇಲೆ ಕಣ್ಣು
- News Acid Attack: ಆಸ್ತಿ ವಿವಾದ: ಮಗನ ಮೇಲೆ 'ಆಸಿಡ್' ಎರಚಿದ ತಂದೆ
- Automobiles ಜೀವದ ಗೆಳೆಯನಿಗೆ ಸರ್ಪ್ರೈಸ್ ಆಗಿ 'ಬೈಕ್' ಉಡುಗೊರೆ ನೀಡಿದ ವಧು.. ಆತನ ಸಂತೋಷಕ್ಕೆ ಪಾರವೇ ಇರಲಿಲ್ಲ!
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸ ಸಿನಿಮಾ ಶುರು ಮಾಡಿದ ಅಜಯ್ ರಾವ್
ನಟ ಅಜಯ್ ರಾವ್ 25 ಸಿನಿಮಾಗಳನ್ನು ಪೂರ್ಣ ಮಾಡಿದ್ದರು. 'ತಾಯಿಗೆ ತಕ್ಕ ಮಗ' ಅವರ 25ನೇ ಸಿನಿಮಾವಾಗಿದ್ದು, ಆ ಚಿತ್ರದ ಬಳಿಕ ಈಗ ಹೊಸ ಸಿನಿಮಾವನ್ನು ಅವರು ಶುರು ಮಾಡಿದ್ದಾರೆ.
ಅಜಯ್ ರಾವ್ ಹೊಸ ಸಿನಿಮಾ ಶ್ರೀರಾಮ ನವಮಿ ಹಬ್ಬದ ವಿಶೇಷವಾಗಿ ಅನೌನ್ಸ್ ಆಗಿದೆ. ಈ ಸಿನಿಮಾವನ್ನು ಟಿ ಆರ್ ಚಂದ್ರಶೇಖರ್ ನಿರ್ಮಾಣ ಮಾಡುತ್ತಿದ್ದಾರೆ. ಚಂದ್ರಶೇಖರ್ ಮೊದಲ ಬಾರಿಗೆ ಅಜಯ್ ರಾವ್ ಚಿತ್ರಕ್ಕೆ ಹಣ ಹಾಕುತ್ತಿದ್ದಾರೆ.
ಹುಟ್ಟುಹಬ್ಬಕ್ಕೆ ಕೃಷ್ಣ ಅಜಯ್ ರಾವ್ ಹೊಸ ಸಿನಿಮಾ
ಈ ಹಿಂದೆ 'ಚಮಕ್', 'ಅಯೋಗ್ಯ' ಹಾಗೂ 'ಬೀರ್ ಬಲ್' ಸಿನಿಮಾಗಳನ್ನು ಚಂದ್ರಶೇಖರ್ ತಮ್ಮ ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದರು.
ಅಂದಹಾಗೆ, ಈ ಹೊಸ ಸಿನಿಮಾವನ್ನು ಹೊಸ ನಿರ್ದೇಶಕ ಬಿ ತಿಮ್ಮೇಗೌಡ ಜಾಕಿ ಡೈರೆಕ್ಟ್ ಮಾಡುತ್ತಿದ್ದಾರೆ. ಅನೇಕ ವರ್ಷಗಳಿಂದ ಚಿತ್ರರಂಗದಲ್ಲಿ ಅನುಭವ ಪಡೆದಿರುವ ಇವರು ಮೊದಲ ಬಾರಿಗೆ ನಿರ್ದೇಶಕರಾಗುತ್ತಿದ್ದಾರೆ.
ಈ ಚಿತ್ರದ ಟೈಟಲ್ ಸದ್ಯಕ್ಕೆ ಇನ್ನು ಫಿಕ್ಸ್ ಆಗಿಲ್ಲ. ಪ್ರೊಡಕ್ಷನ್ ನಂಬರ್ 7 ಎಂಬ ಹೆಸರಿನಲ್ಲಿ ಚಿತ್ರ ಶುರುವಾಗಿದೆ. ಈ ಸಿನಿಮಾದ ಜೊತೆಗೆ ಮತ್ತೆರಡು ಚಿತ್ರಗಳಲ್ಲಿ ಅವರು ಬ್ಯುಸಿ ಇದ್ದಾರೆ.