Don't Miss!
- Sports
ರಿಷಭ್ ಪಂತ್ ಆರೋಗ್ಯದಲ್ಲಿ ಭಾರೀ ಚೇತರಿಕೆ: ಈ ವಾರವೇ ಆಸ್ಪತ್ರೆಯಿಂದ ಡಿಶ್ಚಾರ್ಜ್ ಸಾಧ್ಯತೆ
- News
Mangaluru cooker blast: ಸುಟ್ಟಗಾಯಗಳಿಂದ ಚೇತರಿಸಿಕೊಂಡ ಆರೋಪಿಯನ್ನು ವಶಕ್ಕೆ ಪಡೆಯಲಿರುವ ಎನ್ಐಎ
- Finance
ಹೊಸ ಆಫರ್: ಗೃಹ ಸಾಲದ ಬಡ್ಡಿದರ ಇಳಿಸಿದ ಎಸ್ಬಿಐ!
- Lifestyle
Horoscope Today 30 Jan 2023: ಸೋಮವಾರ: ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Technology
ಬಜೆಟ್ ಬೆಲೆಯಲ್ಲಿ ಈ ಸ್ಮಾರ್ಟ್ಫೋನ್ಗಳು ಬೆಸ್ಟ್ ಎನಿಸಿಲಿವೆ! ಜಬರ್ದಸ್ತ್ ಫೀಚರ್ಸ್!
- Automobiles
ಬೆಲೆ ಏರಿಕೆ ಪಡೆದುಕೊಂಡ ಪರ್ಫಾಮೆನ್ಸ್ ಕಾರು ಪ್ರಿಯರ ಮೆಚ್ಚಿನ ಹ್ಯುಂಡೈ ಐ20 ಎನ್ ಲೈನ್
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಮುಂದಿನ ತಿಂಗಳು ಬಿಡುಗಡೆ ಆಗಲಿದೆ ಅಜೇಯ್ ರಾವ್ ನಟನೆಯ 'ಧೈರ್ಯಂ'
'ಕೃಷ್ಣ' ಅಜೇಯ್ ರಾವ್ ಅಭಿನಯದ 'ಧೈರ್ಯಂ' ಚಿತ್ರ ಮುಂದಿನ ತಿಂಗಳು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಶಿವತೇಜಸ್ ನಿರ್ದೇಶನದ ಎರಡನೇ ಚಿತ್ರ ಇದಾಗಿದ್ದು, ಸಿನಿಮಾದಲ್ಲಿ ಅಜೇಯ್ ರಾವ್ ಆಕ್ಷನ್ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ.
ಮೈಂಡ್ ಗೇಮ್ ಮೂಲಕ ಪ್ರೇಕ್ಷಕರಿಗೆ ಬದುಕಿನ ಕಷ್ಟಗಳನ್ನು ಹೇಗೆ ಎದುರಿಸಬೇಕೆಂದು ಧೈರ್ಯ ತುಂಬುವ ಪಾತ್ರಕ್ಕೆ ಅಜೇಯ್ ರಾವ್ ಬಣ್ಣ ಹಚ್ಚಿದ್ದಾರೆ. ಪೊಲೀಸ್ ಅಧಿಕಾರಿ ಪಾತ್ರದಲ್ಲಿ ರವಿಶಂಕರ್, ಟಿವಿ ನಿರೂಪಕಿ ಆಗಿ ಅಧಿತಿ ಪ್ರಭುದೇವ್ ಅಭಿನಯಿಸಿದ್ದಾರೆ.
ರೋಚಕವಾಗಿ ಮೂಡಿಬಂದಿರುವ 'ಧೈರ್ಯಂ' ಟ್ರೈಲರ್ ಗೆ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಥ್ರಿಲ್
ನೀಡುವ
ಅಜೇಯ್
ರಾವ್
ಅಭಿನಯದ
'ಧೈರ್ಯಂ'
ಟ್ರೈಲರ್,
ನೀವೂ
ನೋಡಿ..
ವೃತ್ತಿಯಲ್ಲಿ ವೈದ್ಯರಾದ ಡಾ.ರಾಜು 'ಧೈರ್ಯಂ' ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಶೇಖರ್ ಚಂದ್ರ ಛಾಯಾಗ್ರಹಣ, ಏಮಿಲ್ ಸಂಗೀತ ಈ ಚಿತ್ರಕ್ಕಿದೆ.
ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನೆಲ್ಲ ಮುಗಿಸಿರುವ 'ಧೈರ್ಯಂ', ಸೆನ್ಸಾರ್ ಅಂಗಳದಿಂದ ಪಾಸ್ ಆಗುತ್ತಿದ್ದಂತೆಯೇ ನಿಮ್ಮ ಮುಂದೆ ಬರಲಿದೆ.