Don't Miss!
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- News ಬೆಂಗಳೂರಿನಲ್ಲಿ ಖಾಲಿ ಚೊಂಬು ಹಿಡಿದು ಕಾಂಗ್ರೆಸ್ ಪ್ರತಿಭಟನೆ
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಟ್ಟಿಮೇಳ.. ಗಟ್ಟಿಮೇಳ : ಗೀತಾಂಜಲಿಗೆ ಅಜಯ್ ಮಾಂಗಲ್ಯ ಧಾರಣೆ
Recommended Video
ನಟ ರವಿಚಂದ್ರನ್ ಪುತ್ರಿ ಗೀತಾಂಜಲಿ ಹಾಗೂ ಅಜಯ್ ವಿವಾಹ ಇಂದು ನೆರವೇರಿದೆ. ಇಂದು ಬೆಳಗ್ಗೆ 10 ರಿಂದ 11 ಗಂಟೆಯವರೆಗಿನ ಶುಭ ವೇಳೆಯಲ್ಲಿ ಮುಹೂರ್ತ ಕಾರ್ಯಕ್ರಮಗಳನ್ನು ಮಾಡಲಾಗಿದೆ.
ರವಿಚಂದ್ರನ್ ಮಗಳ ಅರಿಶಿಣ ಮತ್ತು ಮೆಹಂದಿ ಶಾಸ್ತ್ರದ ಸಂಭ್ರಮ
ಕಟಕ ಲಗ್ನದಲ್ಲಿ ಮಾಂಗಲ್ಯ ಧಾರಣೆ ನಡೆದಿದೆ. ಉದ್ಯಮಿ ಅಜಯ್ ಜೊತೆಗೆ ಗೀತಾಂಜಲಿ ಸಪ್ತಪದಿ ತುಳಿದಿದ್ದಾರೆ. ಅರಮನೆ ಮೈದಾನದ ವೈಟ್ ಪೆಟಲ್ಸ್ ನಲ್ಲಿ ಅದ್ದೂರಿಯಾಗಿ ಮದುವೆ ಕಾರ್ಯಕ್ರಮ ಜರುಗುತ್ತಿದೆ.
ಗಾಜಿನ ರಾಜಹಂಸದ ವೇದಿಕೆಯಲ್ಲಿ ನವ ಜೋಡಿ ಕಂಗೊಳಿಸುತ್ತಿದೆ. ವಿಶೇಷವಾಗಿ ರವಿಚಂದ್ರನ್ ಅವ್ರೇ ವೇದಿಕೆ ಡಿಸೈನ್ ಮಾಡಿದ್ದಾರೆ. ಕೆಂಪು ಬಣ್ಣದ ಸೀರೆಯಲ್ಲಿ ಗೀತಾಂಜಲಿ ಮಿಂಚಿದ್ದಾರೆ. ಇಡೀ ರವಿಚಂದ್ರನ್ ಕುಟುಂಬ, ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಮದುವೆಗೆ ಸಾಕ್ಷಿಯಾಗಿದ್ದಾರೆ.
ಅಂದಹಾಗೆ, ನಿನ್ನೆ ಆರತಕ್ಷತೆ ಕಾರ್ಯಕ್ರಮ ನಡೆದಿದ್ದು, ರಜನಿಕಾಂತ್, ಚಿರಂಜೀವಿ, ಪ್ರಭು, ಅನಂತ್ ನಾಗ್, ಉಪೇಂದ್ರ, ಯಶ್, ರಮೇಶ್ ಅರವಿಂದ್, ಶಿವರಾಜ್ ಕುಮಾರ್, ಶ್ರುತಿ, ಸುಧಾರಾಣಿ, ಗಣೇಶ್, ಪ್ರಿಯಾಂಕ ಉಪೇಂದ್ರ ಸೇರಿದಂತೆ ಸಾಕಷ್ಟು ದಿಗ್ಗಜರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಇನ್ನು ನಾದಬ್ರಹ್ಮ ಹಂಸಲೇಖ ತಂಡದಿಂದ ಸಂಗೀತಗೋಷ್ಟಿ ಕಾರ್ಯಕ್ರಮ ಮದುವೆಯ ಹೈಲೈಟ್ ಗಳಲ್ಲಿ ಒಂದಾಗಿದೆ. ರವಿಚಂದ್ರನ್ ಹಾಡುಗಳ ಸಂಗೀತ ಸುಧೆ ಇಲ್ಲಿ ನಡೆಯಿತು.