Don't Miss!
- News ಕುಡಿಯುವ ನೀರಿಲ್ಲದೇ ಜನ ಬೆಂಗಳೂರಿಗೆ ಬಾಯ್ ಹೇಳುತ್ತಿದ್ದಾರೆ: ಆರ್.ಅಶೋಕ್
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅತ್ಯಾಚಾರಿಗಳಿಗೆ ಎಚ್ಚರಿಕೆ ನೀಡುವ 'ಅಸುರ ಸಂಹಾರ'
ಅತ್ಯಾಚಾರದ ನೈಜ ಘಟನೆಯನ್ನಾಧರಿಸಿ ತಯಾರು ಮಾಡಿರುವ ಚಿತ್ರ 'ಅಸುರ ಸಂಹಾರ'. ಇತ್ತೀಚಿಗೆ ಬೆಂಗಳೂರಿನ ವಿಬ್ ಗಯಾರ್ ಶಾಲೆಯಲ್ಲಿ ನಡೆದ ಅತ್ಯಾಚಾರ ಘಟನೆಯೇ ಈ ಚಿತ್ರದ ಕಥಾವಸ್ತು.
ಕಳೆದ ಹತ್ತು ವರ್ಷಗಳಿಂದ ಕಿರುತೆರೆಯಲ್ಲಿ ಗುರುತಿಸಿಕೊಂಡಿರುವ ಪ್ರದೀಪ್ ಅರಸ್ ಆಕ್ಷನ್ ಕಟ್ ಹೇಳಿರುವ ಚಿತ್ರ ಇದು. ಸ್ನೇಹಿತ ಹರ್ಷ್ ಅರಸು (ಹರಿ ಪ್ರಸಾದ್) ಚಿತ್ರಕ್ಕೆ ಬಂಡವಾಳ ಹಾಕಿ ನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ನಾಯಕ ಕಮ್ ನಿರ್ಮಾಪಕ ಹರ್ಷ್ ಗೆ ಸಿನಿಮಾ ಮಾಡಬೇಕೆನ್ನುವ ಕನಸು. ಚಿತ್ರದಲ್ಲಿ ಅಣ್ಣ, ತಂಗಿಯನ್ನು ಹೇಗೆ ಕಾಪಾಡುತ್ತಾನೆ ಎನ್ನುವುದೇ ತಿರುಳು. ಲೋಕಿ ಸಂಗೀತದಲ್ಲಿ ಎರಡು ಹಾಡುಗಳು ಮೂಡಿ ಬಂದಿವೆ. ಅದರಲ್ಲಿ ಒಂದು ಹಾಡನ್ನು ಮೆಹಬೂಬ್ ಹಾಡಿದ್ದಾರೆ.
ಚಿತ್ರವನ್ನು ಅರಸೀಕೆರೆ, ಬೀರೂರು, ಶ್ರವಣ ಬೆಳಗೊಳ, ಮಂಗಳೂರು ಸೇರಿದಂತೆ ವಿವಿದೆಡೆ ನಲವತ್ತು ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ. ಈ ಚಿತ್ರದಲ್ಲಿ ಬಹಳ ದಿನಗಳ ನಂತರ ಹಿರಿಯ ನಟ ಧರ್ಮ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು,
ಪ್ರವೀಣ್ ಶೆಟ್ಟಿ ಛಾಯಾಗ್ರಹಣ ಚಿತ್ರಕ್ಕಿದೆ. ಪಾಲಿಕೆಯ ಸದಸ್ಯ ಶಿವಕುಮಾರ್ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿ ಚಿತ್ರಕ್ಕೆ ಮತ್ತು ತಂಡಕ್ಕೆ ಶುಭ ಹಾರೈಸಿದರು. ನಾಯಕಿಯಾಗಿ ಹರ್ಷಲ ಹನಿ ಕಾಣಿಸಿಕೊಂಡಿದ್ದಾರೆ.