Don't Miss!
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Finance ನಾಳೆ ಬೆಂಗಳೂರಿನಲ್ಲಿ ಚಿಕನ್, ಮಟನ್ ಮಾರಾಟಕ್ಕೆ ನಿಷೇಧ
- News 5 ವರ್ಷಗಳಲ್ಲಿ ಕರ್ನಾಟಕ ಸಂಸದರ ಸಾಧನೆ ಏನು? ಅಧ್ಯಯನ ಹೇಳೋದೇನು?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊರೊನಾ ಜಾಗೃತಿಗೆ ಅಣ್ಣಾವ್ರ ಹಾಡು ಬಳಸಿದ ವೈದ್ಯಕೀಯ ವಿದ್ಯಾರ್ಥಿಗಳು
ಇಂದು ಡಾ.ರಾಜ್ಕುಮಾರ್ ಹುಟ್ಟುಹಬ್ಬ. ರಾಜ್ಯದಾದ್ಯಂತ ಕೊರೊನಾದ ವಿಷಮ ಪರಿಸ್ಥಿತಿ ಇದೆ. ಈ ಸಂಕಷ್ಟದ ಸಮಯದಲ್ಲೂ ಅಣ್ಣಾವ್ರರನ್ನು ಅನುಕೂಲಾನುಸಾರ ನೆನಪಿಸಿಕೊಳ್ಳುತ್ತಿದ್ದಾರೆ. ಗೌರವ ಸಲ್ಲಿಸುತ್ತಿದ್ದಾರೆ ಅವರ ಅಭಿಮಾನಿಗಳು.
ಡಾ.ರಾಜ್ಕುಮಾರ್ ಹುಟ್ಟುಹಬ್ಬವಾದ ಇಂದು ಮೈಸೂರಿನ ವೈದ್ಯಕೀಯ ವಿದ್ಯಾರ್ಥಿಗಳು ಭಿನ್ನವಾಗಿ ರಾಜ್ಕುಮಾರ್ ಅವರನ್ನು ನೆನಪಿಸಿಕೊಂಡಿದ್ದಾರೆ. ರಾಜ್ಕುಮಾರ್ ಅವರ ಹಾಡನ್ನು ಬಳಸಿಕೊಂಡು ಕೊರೊನಾ ಕುರಿತು ಜಾಗೃತಿ ಮೂಡಿಸುವ ಕಾರ್ಯವನ್ನು ವಿದ್ಯಾರ್ಥಿಗಳು ಮಾಡಿದ್ದಾರೆ.
ಮೈಸೂರಿನ ವಾಕ್ ಮತ್ತು ಶ್ರವಣ ಸಂಬಂಧಿ ವೈದ್ಯಕೀಯ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ರಾಜ್ಕುಮಾರ್ ಅವರ 'ಪ್ರೇಮದ ಕಾಣಿಕೆ' ಸಿನಿಮಾದ ''ಬಾನಿಗೊಂದು ಎಲ್ಲೆ ಎಲ್ಲಿದೆ, ನಿನ್ನಾಸೆಗೆಲ್ಲಿ ಕೊನೆಯಿದೆ'' ಹಾಡಿನ ಸಾಹಿತ್ಯವನ್ನು ಬದಲಾಯಿಸಿ ಕೊರೊನಾ ಜಾಗೃತಿ ಗೀತೆಯನ್ನಾಗಿ ಮಾಡಿ ಹಾಡಿಗೆ ನರ್ತಿಸಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಹಾಡಿನ ಸಾಹಿತ್ಯ ಇಂತಿದೆ.
''ಕೊರೊನಾಗೊಂದು ಎಲ್ಲೆ ಎಲ್ಲಿದೆ
ಈ ಕೇಸಸ್ಗೆಲ್ಲಿ ಕೊನೆ ಎಲ್ಲಿದೆ
ಏಕೆ ಹೊರಗೆ ಹೋಗುವೆ
ಮನೇಲಿರು, ಮನೇಲಿರು''
''ಸಿನಿಮಾ ಹಾಲು, ಶಾಪಿಂಗ್ ಮಾಲು ಏಕೆ ಸುತ್ತುವೆ
ಟ್ರಿಪ್ಪು, ಹರಟೆ, ಪಾರ್ಟಿ ಅಂತ ಏಕೆ ಅಲೆಯುವೆ
ಹ್ಯಾಂಗೌಟು, ಟಿಂಡರ್ ಡೇಟು ಆಮೇಲ್ ಟೈಮಿದೆ
ಈಗ ಮನೇಲಿರುವುದು ಅವಶ್ಯವಾಗಿದೆ
ಕೈ ತೊಳೆಯಿರಿ, ಮಾಸ್ಕ್ ಧರಿಸಿರಿ
ಅದೇನೇ ಆಗಲಿ ದೂರದಲ್ಲಿರಿ''
Recommended Video
ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಕೊರೊನಾ ಕಿಟ್ ಹಾಕಿಕೊಂಡು ಹಾಡಿಗೆ ಅಭಿನಯಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.