twitter
    For Quick Alerts
    ALLOW NOTIFICATIONS  
    For Daily Alerts

    ಅಗಲಿದ ನಟನಿಗೆ ಸಂತಾಪ ಸೂಚಿಸಿದ ಮಹೇಶ್ ಬಾಬು, ಅಲ್ಲು ಅರ್ಜುನ್

    By Naveen
    |

    ಟಾಲಿವುಡ್ ನಟ ಹರಿಕೃಷ್ಣ ರಸ್ತೆ ಅಪಘಾತದಲ್ಲಿ ಮೃತ ಪಟ್ಟಿದ್ದಾರೆ. ಅವರ ಅಭಿಮಾನಿಗಳು ಹಾಗೂ ಇಡೀ ತೆಲುಗು ಚಿತ್ರರಂಗ ಅವರ ಅಗಲಿಕೆಗೆ ಕಣ್ಣೀರು ಹಾಕಿದೆ. ಸಿನಿಮಾರಂಗದ ಪ್ರಮುಖ ನಟರು ಅವರಿಗೆ ಸಂತಾಪ ಸೂಚಿಸಿದ್ದಾರೆ.

    ನಟ ಅಲ್ಲು ಅರ್ಜುನ್ ''ನಾನು ವಿದೇಶದಲ್ಲಿ ಇದ್ದೇನೆ. ಈ ಸುದ್ದಿಯನ್ನು ಕೇಳಿ ನನಗೆ ಆಘಾತವಾಗಿದೆ. ಇಡೀ ನಂದಮೂರಿ ಕುಟುಂಬಕ್ಕೆ ಮತ್ತು ಅವರ ಆಪ್ತರಿಗೆ ನಮ್ಮ ಸಂತಾಪಗಳು. ಅವರ ಆತ್ಮಕ್ಕೆ ಶಾಂತಿ ಸಿಗಲಿ'' ಎಂದು ಟ್ವೀಟ್ ಮಾಡಿದ್ದಾರೆ.

    ನಟ ಮಹೇಶ್ ಬಾಬು ಹರಿಕೃಷ್ಣ ಅವರ ಅಕಾಲಕ ಮರಣದ ಸುದ್ದಿ ಕೇಳಿ ಬಹಳ ದುಖಃವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ಸಂದರ್ಭದಲ್ಲಿ ಅವರ ಕುಟುಂಬಕ್ಕೆ ದುಖಃವನ್ನು ಅರಗಿಸಿಕೊಳ್ಳುವ ಶಕ್ತಿ ದೇವರು ನೀಡಲಿ ಎಂದು ದುಖಃ ಹಂಚಿಕೊಂಡಿದ್ದಾರೆ.

    allu arjun and mahesh babu tweets about nandamuri harikrishna death

    ಅಭಿಮಾನಿಯ ಮದುವೆಯಲ್ಲಿ ಭಾಗವಹಿಸಲು ಇಂದು ಬೆಳಗಿನ ಜಾವ 4.30ರ ಸಮಯದಲ್ಲಿ ಹರಿಕೃಷ್ಣ ಅವರು ಮನೆಯಿಂದ ಹೊರಟಿದ್ದರು. ನೆಲ್ಲೂರು ಜಿಲ್ಲೆಯ ಕಾವಲಿಗೆ ತೆರಳುತ್ತಿದ್ದಾಗ ತೆಲಂಗಾಣದ ನಲ್ಗೊಂಡ ಬಳಿಯ ಅನ್ನೆಪರ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ನಸುಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

    English summary
    Actor Allu Arjun and Mahesh Babu tweets about Nandamuri Harikrishna death. Popular tollywood actor and politician NT Ramarao's son Nandamuri Harikrishna died in an accident on Wednesday near Nalginda, Telangana.
    Wednesday, August 29, 2018, 11:16
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X