Just In
Don't Miss!
- Finance
ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ, ಮೆಣಸು, ಕಾಫೀ ಜ. 19ರ ದರ
- News
ಭಾರತದ ಗೆಲುವನ್ನು ಕಾಂಗ್ರೆಸ್ ಪ್ರದರ್ಶನಕ್ಕೆ ಹೋಲಿಸಿದ ಸಂಜಯ್ ಝಾ
- Sports
ಐಸಿಸಿ ಟೆಸ್ಟ್ ಚಾಂಪಿಯನ್ಶಿಪ್: ಅಗ್ರ ಸ್ಥಾನಕ್ಕೇರಿದ ಟೀಮ್ ಇಂಡಿಯಾ
- Automobiles
ವಾಣಿಜ್ಯ ವಾಹನಗಳ ಖರೀದಿಗಾಗಿ ಹಲವು ಆಕರ್ಷಕ ಸಾಲಸೌಲಭ್ಯಗಳಿಗೆ ಚಾಲನೆ ನೀಡಿದ ಟಾಟಾ
- Education
SBI PO Mains Admit Card 2021: ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ?
- Lifestyle
ಜ. 25ಕ್ಕೆ ಕುಂಭ ರಾಶಿಗೆ ಬುಧನ ಸಂಚಾರ: 12 ರಾಶಿಗಳ ಮೇಲೆ ಇದರ ಪ್ರಭಾವವೇನು?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
'ಟಗರು' ಕಾರ್ಯಕ್ರಮಕ್ಕೆ ಬಂದಿದ್ದ ಅಲ್ಲು ಅರ್ಜುನ್ ಸಹೋದರನ ಆಸೆ ಏನು?

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ 'ಟಗರು' ಚಿತ್ರದ ಟೀಸರ್ ನಿನ್ನೆ ಬಿಡುಗಡೆಯಾಯಿತು. 'ಟಗರು' ಟೀಸರ್ ರಿಲೀಸ್ ಮಾಡಲು ಭಾರತದ ಮಾಜಿ ಕ್ರಿಕೆಟ್ ಆಟಗಾರ ಜಿ.ಆರ್ ವಿಶ್ವನಾಥ್, ನಟ ರಕ್ಷಿತ್ ಶೆಟ್ಟಿ ಹಾಗೂ ತೆಲುಗು ನಟ ಅಲ್ಲು ಸಿರೀಶ್ ಅತಿಥಿಗಳಾಗಿ ಆಗಮಿಸಿದ್ದರು.
'ಟಗರು' ಚಿತ್ರದ ಬಗ್ಗೆ ಮಾತನಾಡಿದ ಅಲ್ಲು ಅರ್ಜುನ್ ಸಹೋದರ ಅಲ್ಲು ಸಿರೀಶ್ ವೇದಿಕೆಯಲ್ಲಿ ಶಿವಣ್ಣನ ಜೊತೆ ಹೆಜ್ಜೆ ಹಾಕಿ ಅಭಿಮಾನಿಗಳನ್ನ ರಂಜಿಸಿದರು. ತದ ನಂತರ ಕನ್ನಡದಲ್ಲೇ ಮಾತನಾಡಿದ ತೆಲಗು ನಟ ಸ್ಯಾಂಡಲ್ ವುಡ್ ನಲ್ಲಿ ತಮಗಿರುವ ಆಸೆಯೊಂದನ್ನ ವ್ಯಕ್ತಪಡಿಸಿದರು. ಈ ಆಸೆ ಕೇಳಿ ಅಭಿಮಾನಿಗಳು ಫುಲ್ ಖುಷ ಆದರು. ಏನದು? ಮುಂದೆ ಓದಿ......

ಕನ್ನಡದಲ್ಲಿ ಸಿನಿಮಾ ಮಾಡುವ ಆಸೆ
ತೆಲುಗು ಚಿತ್ರರಂಗದ ಖ್ಯಾತ ನಟ ಅಲ್ಲು ಅರ್ಜುನ್ ಅವರ ಸಹೋದರ ಅಲ್ಲು ಸಿರೀಶ್ ಕನ್ನಡದಲ್ಲಿ ಸಿನಿಮಾ ಮಾಡುವ ಆಸೆಯನ್ನ ಟಗರು ವೇದಿಕೆಯಲ್ಲಿ ವ್ಯಕ್ತಪಡಿಸಿದರು.
ಹುಷಾರು... ಈ 'ಟಗರು'ಗೆ ಮೈ ತುಂಬ ಸಿಕ್ಕಾಪಟ್ಟೆ ಪೋಗರು

ಯಾರ ಜೊತೆ ಅಭಿನಯಿಸಬೇಕಂತೆ?
ಕನ್ನಡದಲ್ಲಿ ಸಿನಿಮಾ ಮಾಡುವುದಾದರೇ, ಅದು ಶಿವರಾಜ್ ಕುಮಾರ್ ಮತ್ತು ಪುನೀತ್ ರಾಜ್ ಕುಮಾರ್ ಅವರ ಜೊತೆಯಲ್ಲೇ ತಮ್ಮ ಡೆಬ್ಯೂ ಮಾಡಬೇಕೆಂದು ನಟ ಸಿರೀಶ್ ಹೆಮ್ಮೆಯಿಂದ ಹೇಳಿಕೊಂಡರು.
ಪುಟ್ಟ ಪೋರನಿಗೆ ತಲೆಬಾಗಿದ 'ಅಣ್ಣಾವ್ರ' ಮಕ್ಕಳು

ಮೂರು ಭಾಷೆಯಲ್ಲಿ ಅಭಿನಯಿಸಿರುವ ಸಿರೀಶ್
ಈಗಾಗಲೇ ತೆಲುಗು, ತಮಿಳು ಹಾಗೂ ಮಲಯಾಳಂ ನಲ್ಲಿ ಮೋಹನ್ ಲಾಲ್ ಜೊತೆ ನಟಿಸಿರುವ ಅಲ್ಲು ಸಿರೀಶ್ ಅವರಿಗೆ ಕನ್ನಡದಲ್ಲಿ ಅಭಿನಯಿಸುವ ಮನಸ್ಸು ಹೊಂದಿದ್ದಾರೆ. ಬಹುಶಃ ಸಿರೀಶ್ ಅವರ ಈ ಕೋರಿಕೆ ಆದಷ್ಟೂ ಬೇಗ ಈಡೇರಿದರೂ ಆಶ್ಚರ್ಯವಿಲ್ಲ.
ದುನಿಯಾ ಸೂರಿಗೆ ಪವರ್ ಸ್ಟಾರ್ ಕೊಟ್ಟರು ಬಂಪರ್ ಗಿಫ್ಟ್.!

ಶಿವಣ್ಣ ಜೊತೆ ಹುಲಿ ಡ್ಯಾನ್ಸ್
ಇನ್ನು ಅಭಿಮಾನಿಗಳ ಒತ್ತಾಯದ ಮೆರೆಗೆ ವೇದಿಕೆಯಲ್ಲಿ ಶಿವರಾಜ್ ಕುಮಾರ್ ಹುಲಿ ಡ್ಯಾನ್ಸ್ ಮಾಡಿದರು. ಶಿವಣ್ಣಗೆ ನಟ ಅಲ್ಲು ಸಿರೀಶ್ ಮತ್ತು ರಕ್ಷಿತ್ ಶೆಟ್ಟಿ ಕೂಡ ಸಾಥ್ ಕೊಟ್ಟಿದ್ದು ವಿಶೇಷವಾಗಿತ್ತು.