Don't Miss!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- News ಅಮಿತ್ ಶಾ ಓರ್ವ ಗೂಂಡಾ, ರೌಡಿ.! ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ
- Automobiles Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಟಗರು' ಕಾರ್ಯಕ್ರಮಕ್ಕೆ ಬಂದಿದ್ದ ಅಲ್ಲು ಅರ್ಜುನ್ ಸಹೋದರನ ಆಸೆ ಏನು?
Recommended Video
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ 'ಟಗರು' ಚಿತ್ರದ ಟೀಸರ್ ನಿನ್ನೆ ಬಿಡುಗಡೆಯಾಯಿತು. 'ಟಗರು' ಟೀಸರ್ ರಿಲೀಸ್ ಮಾಡಲು ಭಾರತದ ಮಾಜಿ ಕ್ರಿಕೆಟ್ ಆಟಗಾರ ಜಿ.ಆರ್ ವಿಶ್ವನಾಥ್, ನಟ ರಕ್ಷಿತ್ ಶೆಟ್ಟಿ ಹಾಗೂ ತೆಲುಗು ನಟ ಅಲ್ಲು ಸಿರೀಶ್ ಅತಿಥಿಗಳಾಗಿ ಆಗಮಿಸಿದ್ದರು.
'ಟಗರು' ಚಿತ್ರದ ಬಗ್ಗೆ ಮಾತನಾಡಿದ ಅಲ್ಲು ಅರ್ಜುನ್ ಸಹೋದರ ಅಲ್ಲು ಸಿರೀಶ್ ವೇದಿಕೆಯಲ್ಲಿ ಶಿವಣ್ಣನ ಜೊತೆ ಹೆಜ್ಜೆ ಹಾಕಿ ಅಭಿಮಾನಿಗಳನ್ನ ರಂಜಿಸಿದರು. ತದ ನಂತರ ಕನ್ನಡದಲ್ಲೇ ಮಾತನಾಡಿದ ತೆಲಗು ನಟ ಸ್ಯಾಂಡಲ್ ವುಡ್ ನಲ್ಲಿ ತಮಗಿರುವ ಆಸೆಯೊಂದನ್ನ ವ್ಯಕ್ತಪಡಿಸಿದರು. ಈ ಆಸೆ ಕೇಳಿ ಅಭಿಮಾನಿಗಳು ಫುಲ್ ಖುಷ ಆದರು. ಏನದು? ಮುಂದೆ ಓದಿ......
ಕನ್ನಡದಲ್ಲಿ ಸಿನಿಮಾ ಮಾಡುವ ಆಸೆ
ತೆಲುಗು ಚಿತ್ರರಂಗದ ಖ್ಯಾತ ನಟ ಅಲ್ಲು ಅರ್ಜುನ್ ಅವರ ಸಹೋದರ ಅಲ್ಲು ಸಿರೀಶ್ ಕನ್ನಡದಲ್ಲಿ ಸಿನಿಮಾ ಮಾಡುವ ಆಸೆಯನ್ನ ಟಗರು ವೇದಿಕೆಯಲ್ಲಿ ವ್ಯಕ್ತಪಡಿಸಿದರು.
ಹುಷಾರು... ಈ 'ಟಗರು'ಗೆ ಮೈ ತುಂಬ ಸಿಕ್ಕಾಪಟ್ಟೆ ಪೋಗರು
ಯಾರ ಜೊತೆ ಅಭಿನಯಿಸಬೇಕಂತೆ?
ಕನ್ನಡದಲ್ಲಿ ಸಿನಿಮಾ ಮಾಡುವುದಾದರೇ, ಅದು ಶಿವರಾಜ್ ಕುಮಾರ್ ಮತ್ತು ಪುನೀತ್ ರಾಜ್ ಕುಮಾರ್ ಅವರ ಜೊತೆಯಲ್ಲೇ ತಮ್ಮ ಡೆಬ್ಯೂ ಮಾಡಬೇಕೆಂದು ನಟ ಸಿರೀಶ್ ಹೆಮ್ಮೆಯಿಂದ ಹೇಳಿಕೊಂಡರು.
ಪುಟ್ಟ ಪೋರನಿಗೆ ತಲೆಬಾಗಿದ 'ಅಣ್ಣಾವ್ರ' ಮಕ್ಕಳು
ಮೂರು ಭಾಷೆಯಲ್ಲಿ ಅಭಿನಯಿಸಿರುವ ಸಿರೀಶ್
ಈಗಾಗಲೇ ತೆಲುಗು, ತಮಿಳು ಹಾಗೂ ಮಲಯಾಳಂ ನಲ್ಲಿ ಮೋಹನ್ ಲಾಲ್ ಜೊತೆ ನಟಿಸಿರುವ ಅಲ್ಲು ಸಿರೀಶ್ ಅವರಿಗೆ ಕನ್ನಡದಲ್ಲಿ ಅಭಿನಯಿಸುವ ಮನಸ್ಸು ಹೊಂದಿದ್ದಾರೆ. ಬಹುಶಃ ಸಿರೀಶ್ ಅವರ ಈ ಕೋರಿಕೆ ಆದಷ್ಟೂ ಬೇಗ ಈಡೇರಿದರೂ ಆಶ್ಚರ್ಯವಿಲ್ಲ.
ದುನಿಯಾ ಸೂರಿಗೆ ಪವರ್ ಸ್ಟಾರ್ ಕೊಟ್ಟರು ಬಂಪರ್ ಗಿಫ್ಟ್.!
ಶಿವಣ್ಣ ಜೊತೆ ಹುಲಿ ಡ್ಯಾನ್ಸ್
ಇನ್ನು ಅಭಿಮಾನಿಗಳ ಒತ್ತಾಯದ ಮೆರೆಗೆ ವೇದಿಕೆಯಲ್ಲಿ ಶಿವರಾಜ್ ಕುಮಾರ್ ಹುಲಿ ಡ್ಯಾನ್ಸ್ ಮಾಡಿದರು. ಶಿವಣ್ಣಗೆ ನಟ ಅಲ್ಲು ಸಿರೀಶ್ ಮತ್ತು ರಕ್ಷಿತ್ ಶೆಟ್ಟಿ ಕೂಡ ಸಾಥ್ ಕೊಟ್ಟಿದ್ದು ವಿಶೇಷವಾಗಿತ್ತು.