Just In
Don't Miss!
- Automobiles
ಆಕ್ಸೆಸ್ 125 ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದ ಸುಜುಕಿ ಮೋಟಾರ್ಸೈಕಲ್
- News
ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್!
- Sports
ಆಸ್ಟ್ರೇಲಿಯಾ ತಂಡದ ಬದ್ಧತೆ ಹಾಗೂ ಪೈನ್ ನಾಯಕತ್ವವನ್ನು ಪ್ರಶ್ನಿಸಿದ ಮಾಜಿ ಆಸಿಸ್ ಕ್ರಿಕೆಟಿಗ
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸಹಾಯಕ ನಿರ್ದೇಶಕ ಸದಾಶಿವಯ್ಯ ಮೃತದೇಹ ಪತ್ತೆ
ಅಂಬರ ಚಿತ್ರೀಕರಣಕ್ಕಾಗಿ ಲೊಕೇಷನ್ ನೋಡಲು ಬೋಟ್ ನಲ್ಲಿ ಹೋಗಿದ್ದಾಗ ಸದಾಶಿವಯ್ಯ ಆಯತಪ್ಪಿ ಗಂಗಾನದಿಗೆ ಬಿದ್ದಿದ್ದರು. ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಅವರು ಕೊಚ್ಚಿಕೊಂಡು ಹೋಗಿದ್ದರು. ಈ ಘಟನೆಯನ್ನು ನಟ ಯೋಗೀಶ್ ಕಣ್ಣಾರೆ ಕಂಡಿದ್ದರು ಸಹ.
ಬಳಿಕ ಅವರ ದೇಹಕ್ಕಾಗಿ ತೀವ್ರ ಹುಡುಕಾಟ ನಡೆಸಲಾಯಿತು. ಆದರೆ ಅವರ ದೇಹ ಪತ್ತೆಯಾಗಿರಲಿಲ್ಲ. ಕಡೆಗೆ ಚಿತ್ರದ ನಿರ್ಮಾಪಕರು 11 ದಿನಗಳ ಬಳಿಕ ಸದಾಶಿವಯ್ಯ ಅಂತಿಮಕ್ರಿಯೆಗಳನ್ನು ಅವರ ಕುಟುಂಬಿಕರೊಂದಿಗೆ ನೇರವೇರಿಸಿದರು. ಈಗ ಅಂದರೆ 19 ದಿನಗಳ ಬಳಿಕ ಸದಾಶಿವಯ್ಯ ಅವರ ಮೃತದೇಹ ಪತ್ತೆಯಾಗಿದೆ ಎಂದು ಚಿತ್ರತಂಡಕ್ಕೆ ಕರೆಬಂದಿದೆ.
ಸಾಮಾನ್ಯವಾಗಿ ಗಂಗಾನದಿಯಲ್ಲಿ ಕೊಚ್ಚಿಹೋದವರ ಕಳೆಬರ ಸಿಗುವುದು ಬಹಳ ಅಪರೂಪ. ಈಗ ಸದಾಶಿವಯ್ಯ ಅವರ ಕಳೆಬರ ಸಿಕ್ಕಿದ್ದು ಅವರ ಕುಟುಂಬಿಕರು ಹಾಗೂ ಚಿತ್ರತಂಡ ಹರಿದ್ವಾರಕ್ಕೆ ಪಯಣ ಬೆಳೆಸುತ್ತಿದೆ. ಅಲ್ಲೇ ಅವರ ಅಂತಿಮ ಸಂಸ್ಕಾರ ನೆರವೇರಲಿದೆ.
ಕಳೆದ 20 ವರ್ಷಗಳಿಂದ ಸದಾಶಿವಯ್ಯ ಅವರು ಕಲಾ ನಿರ್ದೇಶನದಲ್ಲಿ ತೊಡಗಿಕೊಂಡಿದ್ದರು. ಶಶಿಧರ ಅಡಪ, ಹೊಸ್ಮನೆ ಮೂರ್ತಿ ಸೇರಿದಂತೆ ಹಲವಾರು ಕಲಾ ನಿರ್ದೇಶಕರ ಬಳಿ ಕೆಲಸ ಮಾಡಿ 400ಕ್ಕೂ ಹೆಚ್ಚು ಚಿತ್ರಗಳಿಗೆ ಕೆಲಸ ಮಾಡಿದ್ದಾರೆ. (ಏಜೆನ್ಸೀಸ್)