Don't Miss!
- Finance ಎಂಡಿಎಚ್ ಮತ್ತು ಎವರೆಸ್ಟ್ ಸೇರಿದಂತೆ ಎಲ್ಲಾ ಬ್ರಾಂಡ್ ಮಸಾಲೆಗಳ ಮಾದರಿಗಳ ಪರೀಕ್ಷೆಗೆ ಮುಂದಾದ FSSAI
- News ಮತದಾನದ ದಿನ ಬೆಳಗ್ಗೆ ಸಿಗಲ್ಲ ಬಾಡಿಗೆ ವಾಹನಗಳು!
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಹಾಯಕ ನಿರ್ದೇಶಕ ಸದಾಶಿವಯ್ಯ ಮೃತದೇಹ ಪತ್ತೆ
ಅಂಬರ ಚಿತ್ರೀಕರಣಕ್ಕಾಗಿ ಲೊಕೇಷನ್ ನೋಡಲು ಬೋಟ್ ನಲ್ಲಿ ಹೋಗಿದ್ದಾಗ ಸದಾಶಿವಯ್ಯ ಆಯತಪ್ಪಿ ಗಂಗಾನದಿಗೆ ಬಿದ್ದಿದ್ದರು. ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಅವರು ಕೊಚ್ಚಿಕೊಂಡು ಹೋಗಿದ್ದರು. ಈ ಘಟನೆಯನ್ನು ನಟ ಯೋಗೀಶ್ ಕಣ್ಣಾರೆ ಕಂಡಿದ್ದರು ಸಹ.
ಬಳಿಕ ಅವರ ದೇಹಕ್ಕಾಗಿ ತೀವ್ರ ಹುಡುಕಾಟ ನಡೆಸಲಾಯಿತು. ಆದರೆ ಅವರ ದೇಹ ಪತ್ತೆಯಾಗಿರಲಿಲ್ಲ. ಕಡೆಗೆ ಚಿತ್ರದ ನಿರ್ಮಾಪಕರು 11 ದಿನಗಳ ಬಳಿಕ ಸದಾಶಿವಯ್ಯ ಅಂತಿಮಕ್ರಿಯೆಗಳನ್ನು ಅವರ ಕುಟುಂಬಿಕರೊಂದಿಗೆ ನೇರವೇರಿಸಿದರು. ಈಗ ಅಂದರೆ 19 ದಿನಗಳ ಬಳಿಕ ಸದಾಶಿವಯ್ಯ ಅವರ ಮೃತದೇಹ ಪತ್ತೆಯಾಗಿದೆ ಎಂದು ಚಿತ್ರತಂಡಕ್ಕೆ ಕರೆಬಂದಿದೆ.
ಸಾಮಾನ್ಯವಾಗಿ ಗಂಗಾನದಿಯಲ್ಲಿ ಕೊಚ್ಚಿಹೋದವರ ಕಳೆಬರ ಸಿಗುವುದು ಬಹಳ ಅಪರೂಪ. ಈಗ ಸದಾಶಿವಯ್ಯ ಅವರ ಕಳೆಬರ ಸಿಕ್ಕಿದ್ದು ಅವರ ಕುಟುಂಬಿಕರು ಹಾಗೂ ಚಿತ್ರತಂಡ ಹರಿದ್ವಾರಕ್ಕೆ ಪಯಣ ಬೆಳೆಸುತ್ತಿದೆ. ಅಲ್ಲೇ ಅವರ ಅಂತಿಮ ಸಂಸ್ಕಾರ ನೆರವೇರಲಿದೆ.
ಕಳೆದ 20 ವರ್ಷಗಳಿಂದ ಸದಾಶಿವಯ್ಯ ಅವರು ಕಲಾ ನಿರ್ದೇಶನದಲ್ಲಿ ತೊಡಗಿಕೊಂಡಿದ್ದರು. ಶಶಿಧರ ಅಡಪ, ಹೊಸ್ಮನೆ ಮೂರ್ತಿ ಸೇರಿದಂತೆ ಹಲವಾರು ಕಲಾ ನಿರ್ದೇಶಕರ ಬಳಿ ಕೆಲಸ ಮಾಡಿ 400ಕ್ಕೂ ಹೆಚ್ಚು ಚಿತ್ರಗಳಿಗೆ ಕೆಲಸ ಮಾಡಿದ್ದಾರೆ. (ಏಜೆನ್ಸೀಸ್)