Just In
Don't Miss!
- News
ಬೇಗೂರಿನ ಅಪಾರ್ಟ್ಮೆಂಟ್ ಬಳಿ ಚಿರತೆ, ಬೆಂಗಳೂರಿಗರೇ ಎಚ್ಚರ
- Finance
"ಟಿಕ್ ಟಾಕ್ ಸೇರಿ ಚೀನಾದ ಕೆಲವು ಆಪ್ ಗಳಿಗೆ ಭಾರತದಲ್ಲಿ ಶಾಶ್ವತ ನಿಷೇಧ"
- Sports
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಪ್ರೇಕ್ಷಕರಿಗೆ ಅವಕಾಶ ನೀಡಲು ಬಿಸಿಸಿಐ ಉತ್ಸಾಹ
- Automobiles
ಕರೋಕ್ ಎಸ್ಯುವಿಯನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸಲಿದೆ ಸ್ಕೋಡಾ
- Lifestyle
ವಾರ ಭವಿಷ್ಯ: 12 ರಾಶಿಗಳ ರಾಶಿ ಫಲ ಹೇಗಿದೆ ನೋಡಿ
- Education
NIT Recruitment 2021: ರಿಸರ್ಚ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಅಂಬರ ಚಿತ್ರೀಕರಣದಲ್ಲಿ ಸದಾಶಿವಯ್ಯ ದುರಂತ ಸಾವು
ಕಳೆದ ಹತ್ತು ದಿನಗಳಿಂದ ಹೃಷಿಕೇಷದಲ್ಲಿ ಅಂಬರ ಚಿತ್ರೀಕರಣ ನಡೆಯುತ್ತಿತ್ತು. ಚಿತ್ರೀಕರಣಕ್ಕಾಗಿ ಲೊಕೇಷನ್ ನೋಡಲು ಬೋಟ್ ನಲ್ಲಿ ಹೋಗಿದ್ದಾಗ ಆಯತಪ್ಪಿ ಅವರು ನದಿಗೆ ಬಿದ್ದಿದ್ದಾರೆ. ನದಿ ನೀರು ರಭಸವಾಗಿ ಹರಿಯುತ್ತಿದ್ದು ಅವರು ಕೊಚ್ಚಿಹೋಗಿದ್ದಾಗಿ ಚಿತ್ರತಂಡ ತಿಳಿಸಿದೆ.
ಸುಮಾರು ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಈ ಘಟನೆ ನಡೆದಿದೆ. ಅವರು ನದಿಗೆ ಬಿದ್ದ ಕೂಡಲೆ ಅವರನ್ನು ರಕ್ಷಿಸಲು ಚಿತ್ರತಂಡ ಹರಸಾಹಸ ಪಟ್ಟಿದೆಯಾದರೂ ಸಾಧ್ಯವಾಗಿಲ್ಲ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದುವರೆಗೂ ಅವರ ದೇಹ ಪತ್ತೆಯಾಗಿಲ್ಲ.
ಕಳೆದ 20 ವರ್ಷಗಳಿಂದ ಅವರು ಸದಾಶಿವಯ್ಯ ಅವರು ಕಲಾ ನಿರ್ದೇಶನದಲ್ಲಿ ತೊಡಗಿಕೊಂಡಿದ್ದರು. ಶಶಿಧರ ಅಡಪ, ಹೊಸ್ಮನೆ ಮೂರ್ತಿ ಸೇರಿದಂತೆ ಹಲವಾರು ಕಲಾ ನಿರ್ದೇಶಕರ ಬಳಿ ಕೆಲಸ ಮಾಡಿ 400ಕ್ಕೂ ಹೆಚ್ಚು ಚಿತ್ರಗಳಿಗೆ ಕೆಲಸ ಮಾಡಿದ್ದಾರೆ.
ಸೇನ್ ಪ್ರಕಾಶ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ 'ಅಂಬರ'ಕ್ಕೆ ನಾಗರಾಜ್ ಕೋಟೆ ಸಂಭಾಷಣೆ ಬರೆದಿದ್ದಾರೆ. ಅಭಿಮಾನ್ ರಾಯ್ ಸಂಗೀತ ನಿರ್ದೇಶನ, ಸಿನಿಟೆಕ್ ಸೂರಿ ಛಾಯಾಗ್ರಹಣ, ರವಿಕುಮಾರ್ ಸಂಕಲನ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ, ಯೋಗರಾಜ್ ಭರಣಿ ಸಹ ನಿರ್ದೇಶನ, ಅನಿಲ್ ಕುಮಾರ್ ನಿರ್ಮಾಣ ನಿರ್ವಹಣೆಯಿರುವ ಈ ಚಿತ್ರಕ್ಕೆ ರಾಜು ಸಹ ನಿರ್ಮಾಪಕರಾಗಿದ್ದಾರೆ. (ಏಜೆನ್ಸೀಸ್)