Don't Miss!
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- News ಹಿರಿಯೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಆಟೋ ಪಲ್ಟಿ: NHAIನ ಆ ಒಂದು ಯಡವಟ್ಟಿನ ವಿರುದ್ಧ ಭುಗಿಲೆದ್ದ ಆಕ್ರೋಶ
- Technology Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂಬರ ಚಿತ್ರೀಕರಣದಲ್ಲಿ ಸದಾಶಿವಯ್ಯ ದುರಂತ ಸಾವು
ಕಳೆದ ಹತ್ತು ದಿನಗಳಿಂದ ಹೃಷಿಕೇಷದಲ್ಲಿ ಅಂಬರ ಚಿತ್ರೀಕರಣ ನಡೆಯುತ್ತಿತ್ತು. ಚಿತ್ರೀಕರಣಕ್ಕಾಗಿ ಲೊಕೇಷನ್ ನೋಡಲು ಬೋಟ್ ನಲ್ಲಿ ಹೋಗಿದ್ದಾಗ ಆಯತಪ್ಪಿ ಅವರು ನದಿಗೆ ಬಿದ್ದಿದ್ದಾರೆ. ನದಿ ನೀರು ರಭಸವಾಗಿ ಹರಿಯುತ್ತಿದ್ದು ಅವರು ಕೊಚ್ಚಿಹೋಗಿದ್ದಾಗಿ ಚಿತ್ರತಂಡ ತಿಳಿಸಿದೆ.
ಸುಮಾರು ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಈ ಘಟನೆ ನಡೆದಿದೆ. ಅವರು ನದಿಗೆ ಬಿದ್ದ ಕೂಡಲೆ ಅವರನ್ನು ರಕ್ಷಿಸಲು ಚಿತ್ರತಂಡ ಹರಸಾಹಸ ಪಟ್ಟಿದೆಯಾದರೂ ಸಾಧ್ಯವಾಗಿಲ್ಲ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದುವರೆಗೂ ಅವರ ದೇಹ ಪತ್ತೆಯಾಗಿಲ್ಲ.
ಕಳೆದ 20 ವರ್ಷಗಳಿಂದ ಅವರು ಸದಾಶಿವಯ್ಯ ಅವರು ಕಲಾ ನಿರ್ದೇಶನದಲ್ಲಿ ತೊಡಗಿಕೊಂಡಿದ್ದರು. ಶಶಿಧರ ಅಡಪ, ಹೊಸ್ಮನೆ ಮೂರ್ತಿ ಸೇರಿದಂತೆ ಹಲವಾರು ಕಲಾ ನಿರ್ದೇಶಕರ ಬಳಿ ಕೆಲಸ ಮಾಡಿ 400ಕ್ಕೂ ಹೆಚ್ಚು ಚಿತ್ರಗಳಿಗೆ ಕೆಲಸ ಮಾಡಿದ್ದಾರೆ.
ಸೇನ್ ಪ್ರಕಾಶ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ 'ಅಂಬರ'ಕ್ಕೆ ನಾಗರಾಜ್ ಕೋಟೆ ಸಂಭಾಷಣೆ ಬರೆದಿದ್ದಾರೆ. ಅಭಿಮಾನ್ ರಾಯ್ ಸಂಗೀತ ನಿರ್ದೇಶನ, ಸಿನಿಟೆಕ್ ಸೂರಿ ಛಾಯಾಗ್ರಹಣ, ರವಿಕುಮಾರ್ ಸಂಕಲನ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ, ಯೋಗರಾಜ್ ಭರಣಿ ಸಹ ನಿರ್ದೇಶನ, ಅನಿಲ್ ಕುಮಾರ್ ನಿರ್ಮಾಣ ನಿರ್ವಹಣೆಯಿರುವ ಈ ಚಿತ್ರಕ್ಕೆ ರಾಜು ಸಹ ನಿರ್ಮಾಪಕರಾಗಿದ್ದಾರೆ. (ಏಜೆನ್ಸೀಸ್)