Don't Miss!
- News ‘ದೇವೇಗೌಡ್ರು ಕೋಲಾರದಲ್ಲಿ ಕುಟುಂಬದವರಿಗೆ ಬಿಟ್ಟು ಕಾರ್ಯಕರ್ತರಿಗೆ ಟಿಕೆಟ್ ಯಾಕೆ ಕೊಟ್ರು ಗೊತ್ತಾ?’
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ 'ಒಡೆಯ' ಮುಹೂರ್ತಕ್ಕೆ ಬರುವ ಗಣ್ಯರಿವರು
Recommended Video
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಒಡೆಯ' ಸಿನಿಮಾ ಮುಹೂರ್ತಕ್ಕೆ ಭರ್ಜರಿ ತಯಾರಿ ನಡೆದಿದೆ. ಡಿ ಬಾಸ್ ಅಭಿನಯದ 52ನೇ ಸಿನಿಮಾ ಇದಾಗಿದ್ದು ಚಿತ್ರ ಸೆಟ್ಟೇರುವ ಮುಂಚೆಯೇ ಹಲವು ವಿಚಾರಗಳಿಂದ ಸುದ್ದಿಯಲ್ಲಿದೆ.
'ಬುಲ್ ಬುಲ್' ಸಿನಿಮಾದ ನಂತರ ನಿರ್ದೇಶಕ ಎಂ ಡಿ ಶ್ರೀಧರ್ ಮತ್ತೆ ದರ್ಶನ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಆಪ್ತರು ಹಾಗೂ ನಿರ್ಮಾಪಕರಾದ ಸಂದೇಶ್ ನಾಗರಾಜ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.
ಆಗಸ್ಟ್ 16 ರಂದು ಸಿನಿಮಾ ಮೈಸೂರಿನಲ್ಲಿ ಸೆಟ್ಟೇರುತ್ತಿದೆ. ನಿರ್ಮಾಪಕ ಸಂದೇಶ್ ನಾಗರಾಜ್ ಅವರ ಹುಟ್ಟುಹಬ್ಬದಂದೇ ಸಿನಿಮಾ ಮುಹೂರ್ತ ಮಾಡಲು ಸಿದ್ದತೆ ಮಾಡಿಕೊಂಡಿದ್ದು ಸತ್ಯನಾರಾಯಣ ಪೂಜೆ ಮೂಲಕ ಸಿನಿಮಾ ಮುಹೂರ್ತಕ್ಕೆ ಚಾಲನೆ ನೀಡಲಾಗುತ್ತಿದೆ.
'ಒಡೆಯ' ಚಿತ್ರದ ಮುಹೂರ್ತ ಸಮಾರಂಭಕ್ಕೆ ಗಣ್ಯರಾಗಿ ರೆಬೆಲ್ ಸ್ಟಾರ್ ಅಂಬರೀಶ್ ಮತ್ತು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆಗಮಿಸುತ್ತಿದ್ದಾರೆ. ಈಗಾಗಲೇ ಚಿತ್ರದ ಮುಹೂರ್ತ ಸಮಾರಂಭದ ಆಹ್ವಾನ ಪತ್ರಿಕೆ ಪ್ರಿಂಟ್ ಆಗಿದ್ದು ಸಮಾಜಿಕ ಜಾಲತಾಣದಲ್ಲಿ ಆಮಂತ್ರಣ ಪತ್ರಿಕೆ ವೈರಲ್ ಆಗಿದೆ.