ವಸತಿ ಸಚಿವ ಅಂಬರೀಶ್ ಗೆ ಹೆಚ್ಚುವರಿ ಹೊಣೆ

ಅಂಬರೀಶ್ ಈಗಾಗಲೇ ವಸತಿ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅದರ ಜೊತೆಗೆ ಅವರಿಗೆ ಕೊಳಗೇರಿ ಅಭಿವೃದ್ಧಿ ಮಂಡಳಿ ಸ್ಥಾನ ನೀಡಿರುವುದು ಹೆಚ್ಚುವರಿ ಜವಾಬ್ದಾರಿ ನೀಡಿದಂತಾಗಿದೆ.
ಬಿಜೆಪಿ ಸರ್ಕಾರ ಅವಧಿಯಲ್ಲಿ ಜೆ.ನರಸಿಂಹಸ್ವಾಮಿ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ನೇಮಕವಾಗಿದ್ದರು. ಅವರ ಜಾಗಕ್ಕೆ ಶಾಸಕ ಹಾಗೂ ವಸತಿ ಸಚಿವ ಅಂಬರೀಶ್ ಅವರನ್ನು ಸರ್ಕಾರ ನೇಮಕ ಮಾಡಿದೆ.
ಗುರುವಾರ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಅಂಬರೀಶ್ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯವನ್ನು ಕೊಳೆಗೇರಿ ಮುಕ್ತವಾಗಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ ಎಂದರು.
ಕೊಳಗೇರಿ ನಿವಾಸಿಗಳು ಇರುವ ಸ್ಥಳದಲ್ಲಿಯೇ ಅವರಿಗೆ ಮನೆಗಳನ್ನು ನಿರ್ಮಿಸಿಕೊಡಲಾಗುತ್ತದೆ. ಅವರನ್ನು ಒಕ್ಕಲೆಬ್ಬಿಸಲಾಗುವುದಿಲ್ಲ ಎಂದು ಅಂಬರೀಶ್ ಭರವಸೆ ನೀಡಿದರು.
ರಾಜ್ಯದ ಕೊಳಗೇರಿಗಳಲ್ಲಿ ಉನ್ನತ ಗುಣಮಟ್ಟದ ಮನೆಗಳನ್ನು ನಿರ್ಮಿಸಲು ಸರ್ಕಾರ ಯೋಜನೆ ತಯಾರಿಸುತ್ತಿದೆ. ಇದಕ್ಕಾಗಿ 2 ಸಾವಿರ ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ ಎಂದು ಹೇಳಿದರು.


Click it and Unblock the Notifications











