Don't Miss!
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- News ಐತಿಹಾಸಿಕ ಪ್ರಸಿದ್ಧ ವದ್ದಿಕೆರೆ ಸಿದ್ದಪ್ಪನ ಬಗ್ಗೆ ನಿಮಗೆಷ್ಟು ಗೊತ್ತು?-ಇಲ್ಲಿದೆ ಸಂಪೂರ್ಣ ವಿವರ
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮರಣಶಯ್ಯೆಯಲ್ಲಿ 'ಭೀಷ್ಮ' ಅಂಬಿ: 'ಕುರುಕ್ಷೇತ್ರ' ಚಿತ್ರದ ವಿಡಿಯೋ ಲೀಕ್.!
ನಿಮಗೆಲ್ಲಾ ಗೊತ್ತಿರುವ ಹಾಗೆ, ರೆಬೆಲ್ ಸ್ಟಾರ್ ಅಂಬರೀಶ್ 'ಕುರುಕ್ಷೇತ್ರ' ಚಿತ್ರದಲ್ಲಿ ಅಭಿನಯಿಸಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ 50ನೇ ಸಿನಿಮಾ 'ಕುರುಕ್ಷೇತ್ರ'ದಲ್ಲಿ ಅಂಬರೀಶ್ 'ಭೀಷ್ಮ'ನ ಪಾತ್ರ ನಿರ್ವಹಿಸಿದ್ದಾರೆ.
ಕಳೆದ ವರ್ಷವೇ 'ಕುರುಕ್ಷೇತ್ರ' ಚಿತ್ರದಲ್ಲಿನ ಅಂಬರೀಶ್ ಭಾಗದ ಚಿತ್ರೀಕರಣ ಪೂರ್ಣಗೊಂಡಿತ್ತು. 'ಭೀಷ್ಮ'ನ ಪಾತ್ರಕ್ಕೆ ಅಂಬರೀಶ್ ಡಬ್ಬಿಂಗ್ ಕೂಡ ಮುಗಿಸಿದ್ದರು. 'ಕುರುಕ್ಷೇತ್ರ' ಚಿತ್ರ ಇನ್ನೂ ಬಿಡುಗಡೆ ಆಗಿಲ್ಲ. ಸದ್ಯ 'ಕುರುಕ್ಷೇತ್ರ' ಸಿನಿಮಾ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ.
ಇಚ್ಛಾಮರಣಿಯಾದ ಭೀಷ್ಮ 'ಮಹಾಭಾರತ'ದಲ್ಲಿ ಅತ್ಯಂತ ಪ್ರಭಾವಿ. 'ದೇವವ್ರತ', 'ಗಾಂಗೇಯ', 'ಪಿತಾಮಹ' ಅಂತೆಲ್ಲಾ ಕರೆಯಿಸಿಕೊಳ್ಳುತ್ತಿದ್ದ ಭೀಷ್ಮ 'ಮಹಾಭಾರತ' ಯುದ್ಧದ ನಂತರ ತನ್ನ ಇಚ್ಛೆಯಂತೆ ಮರಣ ಹೊಂದುತ್ತಾನೆ.
ಇಂತಹ ಪಾತ್ರ ಪೋಷಿಸಿರುವ ಅಂಬರೀಶ್ 'ಕುರುಕ್ಷೇತ್ರ' ಚಿತ್ರದಲ್ಲಿ ಭೀಷ್ಮನಂತೆ ಮರಣಶಯ್ಯೆಯಲ್ಲಿ ಮಲಗಿರುವ ವಿಡಿಯೋವೊಂದು ಲೀಕ್ ಆಗಿದೆ. ಮುಂದೆ ಓದಿರಿ...
ಮರಣಶಯ್ಯೆಯಲ್ಲಿ 'ಭೀಷ್ಮ' ಅಂಬಿ
ಒಂದು ಕಡೆ ಅಂಬರೀಶ್ ರವರ ಅಂತಿಮ ಯಾತ್ರೆ ನಡೆಯುತ್ತಿದೆ. ಇನ್ನೂ ಕೆಲವೇ ಕ್ಷಣಗಳಲ್ಲಿ ಅಂಬರೀಶ್ ರವರ ಅಂತ್ಯಕ್ರಿಯೆ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನಡೆಯಲಿದೆ. ಹೀಗಿರುವಾಗಲೇ, 'ಕುರುಕ್ಷೇತ್ರ' ಚಿತ್ರದಲ್ಲಿ ಅಂಬರೀಶ್, ಭೀಷ್ಮನ ಪಾತ್ರಧಾರಿಯಾಗಿ ಮರಣಶಯ್ಯೆಯಲ್ಲಿ ಮಲಗಿರುವ ವಿಡಿಯೋ 'ಕುರುಕ್ಷೇತ್ರ' ಚಿತ್ರ ತಂಡದಿಂದಲೇ ಲೀಕ್ ಆಗಿದೆ.
ಅಪ್ಪ ಅಂಬಿಯಂತೆ ಮಾನವೀಯತೆ ಮೆರೆದ ಮಗ ಅಭಿಶೇಕ್
'ಕುರುಕ್ಷೇತ್ರ' ಚಿತ್ರದಲ್ಲಿ ಭೀಷ್ಮನ ಸಾವಿನ ದೃಶ್ಯ
ಸತ್ಯವತಿ ಕಡೆಯಿಂದ ಇಚ್ಛಾಮರಣ ಹೊಂದುವ ವರ ಪಡೆದಿದ್ದ ಭೀಷ್ಮ 'ಮಹಾಭಾರತ'ದ ಯುದ್ಧ ಸಮಾಪ್ತಿಯಾದ ಬಳಿಕ ಜೀವವನ್ನು ಅಂತ್ಯಗೊಳಿಸಲು ಮನಸ್ಸು ಮಾಡುತ್ತಾರೆ. ಇದೇ ಸನ್ನಿವೇಶ 'ಕುರುಕ್ಷೇತ್ರ' ಚಿತ್ರದಲ್ಲಿ ಇದೆ.
ಬೆಂಗಳೂರಿಗೆ ಬಂದ ಡಿ ಬಾಸ್: 'ಅಂಬಿ' ದರ್ಶನಕ್ಕೆ ದಾಸ ಪಟ್ಟ ಕಷ್ಟ ಯಾರಿಗೂ ಗೊತ್ತಿಲ್ಲ.!
ಅಭಿಮಾನಿಗಳ ಕಣ್ಣಾಲಿಗಳು ಒದ್ದೆ ಆಗದೇ ಇರಲ್ಲ.!
ಅಂಬರೀಶ್ ಅಭಿನಯದ 'ಕುರುಕ್ಷೇತ್ರ' ಚಿತ್ರ ಇನ್ನೂ ಬಿಡುಗಡೆ ಆಗಿಲ್ಲ. 'ಕುರುಕ್ಷೇತ್ರ' ಚಿತ್ರ ಬಿಡುಗಡೆ ಆದಾಗ, ಮರಣಶಯ್ಯೆಯಲ್ಲಿ ಭೀಷ್ಮ ಮಲಗಿರುವ ದೃಶ್ಯವನ್ನು ಕಂಡು ಅಂಬಿ ಅಭಿಮಾನಿಗಳ ಕಣ್ಣಾಲಿಗಳು ಒದ್ದೆ ಆಗದೇ ಇರಲ್ಲ.
ಅಂಬರೀಶ್ ಬಗ್ಗೆ ಕಿಚ್ಚ ಸುದೀಪ್ ಬರೆದ ಭಾವಪೂರ್ಣ ಪತ್ರ ಇಲ್ಲಿದೆ
ಪಾತ್ರಗಳ ಮೂಲಕ ಅಂಬಿ ಜೀವಂತ
ಕಾಲನ ಕರೆಗೆ ಓಗೊಟ್ಟು ಅಂಬರೀಶ್ ಇಹಲೋಕ ತ್ಯಜಿಸಿದ್ದಾರೆ. ಇನ್ನೂ ಕೆಲವೇ ಕ್ಷಣಗಳಲ್ಲಿ ಪಂಚಭೂತಗಳಲ್ಲಿ ಅಂಬರೀಶ್ ಲೀನವಾಗಲಿದ್ದಾರೆ. ಅಂಬರೀಶ್ ಇಂದು ನಮ್ಮೊಂದಿಗೆ ಇಲ್ಲದಿದ್ದರೂ, ಅವರು ಮಾಡಿರುವ ನೂರಾರು ಪಾತ್ರಗಳ ಮೂಲಕ 'ರೆಬೆಲ್ ಸ್ಟಾರ್' ಸದಾ ಜೀವಂತ.