Don't Miss!
- News Lok Sabha Election 2024: ಬೆಂಗಳೂರು ಉತ್ತರದಲ್ಲಿ ಬಿಜೆಪಿಯದ್ದೇ ಪ್ರಾಬಲ್ಯ! ಶೋಭಾ ಎದುರು ‘ಕೈ’ ಅಸ್ತ್ರ ವರ್ಕೌಟ್ ಆಗುತ್ತಾ?
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
9 ಗಂಟೆಗೆ ಅಂಬಿ ಮೃತ ದೇಹ ಬೆಂಗಳೂರಿಗೆ : ಮಧ್ಯಾಹ್ನದ ವೇಳೆಗೆ ಅಂತ್ಯಕ್ರಿಯೆ
ನಟ ಅಂಬರೀಶ್ ಅವರ ಪಾರ್ಥಿವ ಶರೀರದ ದರ್ಶನಕ್ಕೆ ಮಂಡ್ಯದಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಇಡೀ ರಾತ್ರಿ ಜನ ಸಾಗರ ಹರಿದು ಬಂದು ತಮ್ಮ ಪ್ರೀತಿಯ ನಾಯಕನ ಅಂತಿಮ ದರ್ಶನ ಪಡೆದರು. ಬೆಳಗ್ಗೆ ಆದರೂ ಜನರ ದಂಡು ಮುಗಿಯಲಿಲ್ಲ. ಆ ಮಟ್ಟಿನ ಜನರು ಅಂಬಿಯನ್ನು ಕೊನೆಯ ಬಾರಿ ನೋಡಲು ಬಂದಿದ್ದರು.
ಮಂಡ್ಯದಿಂದ 9 ಗಂಟೆ ಸುಮಾರಿಗೆ ಅಂಬರೀಶ್ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ತರಲಾಗುವುದು. ಅಲ್ಲಿಂದ ಸೇನಾ ಹೆಲಿಕಾಫ್ಟರ್ ಮೂಲಕ ಮೃತದೇಹ ಎಚ್ ಎ ಎಲ್ ಏರ್ ಪೋರ್ಟ್ ತಲುಪುತ್ತದೆ. ಬಳಿಕ ಕಂಠೀರವ ಕ್ರೀಡಾಂಗಣಕ್ಕೆ ಅದನ್ನು ರವಾನೆ ಮಾಡಲಾಗುವುದು.
ನಂತರ ಮೆರವಣಿಗೆ ಮೂಲಕ ಕಂಠೀರವ ಸ್ಟೂಡಿಯೋಗೆ ತೆಗೆದುಕೊಂಡು ಹೋಗಿ ಅಲ್ಲಿಯೇ ಅಂತ್ಯಕ್ರಿಯೆ ನಡೆಯಲಿದೆ. ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಲಾಗುವುದಿಲ್ಲ. ಕಂಠೀರವ ಕ್ರೀಡಾಂಗಣದಿಂದ ಕಂಠೀರವ ಸ್ಟೂಡಿಯೋಗೆ ಮೆರವಣಿಗೆ ಮೂಲಕ ಪಾರ್ಥಿವ ಶರೀರ ತರಲಾಗುವುದು.
ಕಂಠೀರವ ಸ್ಟೂಡಿಯೋ ಇಂದು ಮಧ್ಯಾಹ್ನನ ವೇಳೆಗೆ ಅಂತ್ಯಕ್ರಿಯೆ ನಡೆಸಲಾಗುವುದು. ಈಗಾಗಲೇ ಎಲ್ಲ ತಯಾರಿಗಳು ನಡೆದಿದ್ದು, ಒಕ್ಕಲಿಗ ಸಂಪ್ರದಾಯದಂತೆ ಅಗ್ನಿ ಸ್ವರ್ಶ ಮಾಡಲಾಗುವುದು.