Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಗನನ್ನು ಕಂಡ ಅಂಬರೀಶ್ ಕಣ್ಣಲ್ಲಿ ಹೊಸ ಮಿಂಚು
ಕಳೆದ ಒಂದು ವಾರದಿಂದ ಬೆಂಗಳೂರು ಮಿಲ್ಲರ್ಸ್ ರಸ್ತೆಯ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಬರೀಶ್ ಅವರ ಆರೋಗ್ಯ ದಿನದಿಂದ ದಿನಕ್ಕೆ ಸುಧಾರಿಸುತ್ತಿದೆ. ಶ್ವಾಸಕೋಶದ ಸೋಂಕಿನಿಂದ ಅವರು ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದೇ ಮೊದಲ ಬಾರಿಗೆ ಅಂಬರೀಶ್ ಅವರ ಪುತ್ರ ಅಭಿಷೇಕ್ ಗೌಡ ಅವರು ವಿಕ್ರಂ ಆಸ್ಪತ್ರೆ ವೈದ್ಯರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡು ಅಂಬಿ ಆರೋಗ್ಯದ ಬಗ್ಗೆ ವಿವರ ನೀಡಿದರು. ಅಭಿಷೇಕ್ ಮಾತನಾಡುತ್ತಾ, "ಅಪ್ಪಾಜಿ ಆರೋಗ್ಯದಲ್ಲಿ ಗಣನೀಯ ಚೇತರಿಕೆ ಕಂಡುಬಂದಿದೆ. ಅವರು ನನ್ನನ್ನು ಗುರುತಿಸಿದರು. ನನಗೆ ತುಂಬಾ ಖುಷಿಯಾಯಿತು" ಎಂದರು. [ಅಂಬರೀಶ್ ಬಗ್ಗೆ ನಿಮಗೆ ಗೊತ್ತಿಲ್ಲದ ಸಂಗತಿಗಳು]
ಅಂಬರೀಶ್ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಶ್ವಾಸಕೋಶ, ಮೂತ್ರಪಿಂಡಗಳ ಸಮಸ್ಯೆಯನ್ನು ಎದುರಿಸುತ್ತಿರುವ ಕಾರಣ ದೇಶದ ತಜ್ಞ ವೈದ್ಯರ ಸಲಹೆ ಸೂಚನೆಗಳನ್ನು ಪಾಲಿಸುತ್ತಿದ್ದೇವೆ. ಆರಂಭದ ದಿನಗಳಿಗೆ ಹೋಲಿಸಿದರೆ ಅವರ ಆರೋಗ್ಯ ಈಗ ಸಾಕಷ್ಟು ಸುಧಾರಿಸಿದೆ ಎಂದು ವಿಕ್ರಂ ಆಸ್ಪತ್ರೆಯ ಶ್ವಾಸಕೋಶ ತಜ್ಞ ಡಾ.ಕೆ.ಎಸ್.ಸತೀಶ್ ವಿವರ ನೀಡಿದರು.
ಅವರು ಈಗ ಎಲ್ಲವನ್ನೂ ಗುರುತಿಸುತ್ತಿದ್ದು ಸಂಜ್ಞೆಯ ಮೂಲಕ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಅವರ ಅಭಿಮಾನಿಗಳು ಗಾಬರಿಬೀಳುವ ಅಗತ್ಯವಿಲ್ಲ ಎಂದು ವೈದ್ಯರು ಮತ್ತೊಮ್ಮೆ ಸಮಾಧಾನಚಿತ್ತರಾಗಿ ಉತ್ತರಿಸಿದರು. (ಏಜೆನ್ಸೀಸ್)