Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ಅಂಬರೀಶ್ ಪುಣ್ಯಸ್ಮರಣೆ: ಇಂದು ರೆಬಲ್ ಸ್ಟಾರ್ ಅವರನ್ನು ನೆನಪಿಸಿಕೊಳ್ಳಲೇಬೇಕಾದ ದಿನ
ನಟ ರೆಬಲ್ ಸ್ಟಾರ್ ಅಂಬರೀಶ್ ನಮ್ಮನ್ನೆಲ್ಲ ಅಗಲಿ ಇಂದಿಗೆ (ನವೆಂಬರ್ 24) ಎರಡು ವರ್ಷ ಕಳೆದು ಹೋಯಿತು. ಇಂದು ಅಂಬರೀಶ್ ಅವರ 2ನೇ ವರ್ಷದ ಪುಣ್ಯ ತಿಥಿ. ಇಂದಿಗೆ ಸರಿಯಾಗಿ ಎರಡು ವರ್ಷಗಳ ಹಿಂದೆ ಅಂದರೆ ನವೆಂಬರ್ 24, 2018ರಲ್ಲಿ ನಟ ರೆಬಲ್ ಸ್ಟಾರ್ ಅಂಬರೀಶ್ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಬಿಟ್ಟು ಬಾರದ ಲೋಕಕ್ಕೆ ಪಯಣ ಬೆಳೆಸಿದ್ದರು.
ಇಂದು ಇಡೀ ಚಿತ್ರರಂಗ, ಅಪಾರ ಸಂಖ್ಯೆಯ ಅಭಿಮಾನಿಗಳು ಮತ್ತೊಮ್ಮೆ ಪ್ರೀತಿಯ ಅಂಬಿಯನ್ನು ಸ್ಮರಿಸಿಕೊಳ್ಳುವ ದಿನ. ಕೊರೊನಾ ಕಾರಣದಿಂದ ಇಂದು ಯಾವುದೇ ಕಾರ್ಯಕ್ರಮ ಹಮ್ಮಿಕೊಂಡಿಲ್ಲ. ಆದರೆ ಕುಟುಂಬದವರು ಮತ್ತು ತೀರ ಆಪ್ತರು ಅಂಬರೀಶ್ ಸಮಾದಿಗೆ ಭೇಟಿ ಪೂಜೆ ಸಲ್ಲಿಸಲಿದ್ದಾರೆ.
ಮಂಡ್ಯದ ಗಂಡಿಗೆ ಮದ್ದೂರಿನಲ್ಲಿ ಗುಡಿ ಕಟ್ಟಿದ ಅಭಿಮಾನಿಗಳು
ಕಳೆದ ವರ್ಷ ವರ್ಷದ ಪುಣ್ಯ ಸ್ಮರಣೆಗೆ 'ಸ್ನೇಹ ಸಾಗರ, ಪ್ರೀತಿ ಅಜರಾಮರ' ಎನ್ನುವ ಹೆಸರಿನಲ್ಲಿ ಅಂಬರೀಶ್ ಪುಣ್ಯತಿಥಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಬಾರಿ ಅಂಬಿ ಪುಣ್ಯತಿಥಿಗೆ ಕೊರೊನಾ ಅಡ್ಡಿ ಬಂದ ಹಿನ್ನಲ್ಲೆ ಕುಟುಂಬದವರು ಮಾತ್ರ ಪುಣ್ಯ ತಿಥಿ ಕಾರ್ಯ ಮಾಡಲಿದ್ದಾರೆ.
Recommended Video
ಅಂಬರೀಶ್ ಹಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೆ 2018 ನವೆಂಬರ್ 24 ರಂದು ಅನಾರೋಗ್ಯದ ಹಿನ್ನಲೆ ಆಸ್ಪತ್ರೆ ಸೇರಿದ ರೆಬಲ್ ಸ್ಟಾರ್ ಮತ್ತೆ ವಾಪಸ್ ಬರಲೇ ಇಲ್ಲ. ತೀವ್ರ ಉಸಿರಾಟ ತೊಂದರೆ ಮತ್ತು ಎದೆ ನೋವು ಕಾಣಿಸಿಕೊಂಡ ಅಂಬಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ರೆಬಲ್ ಸ್ಟಾರ್ ಕೊನೆಯುಸಿರೆಳೆದಿದ್ದರು.