Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟಿಕೆಟ್ ತಗೊಂಡು 'ನಾಗರಹಾವು' ಸಿನಿಮಾ ನೋಡ್ತಿನಿ ಎಂದ ಅಂಬಿ
Recommended Video
ನಿನ್ನೆ 'ನಾಗರಹಾವು' ಸಿನಿಮಾದ ವಿಶೇಷ ಸುದ್ದಿಗೋಷ್ಟಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಗಣ್ಯರು ಹೊಸ ತಂತ್ರಜ್ಙಾನದೊಂದಿಗೆ ಬಂದಿದ್ದ 'ನಾಗರಹಾವು' ಚಿತ್ರದ ಟೀಸರ್ ಹಾಗೂ ಹಾಡುಗಳನ್ನು ನೋಡಿ ಮೆಚ್ಚಿಕೊಂಡರು.
'ನಾಗರಹಾವು' ನಟ ಅಂಬರೀಶ್ ವೃತ್ತಿ ಜೀವನದಲ್ಲಿಯೇ ಮಹತ್ವದ ಸಿನಿಮಾ. ಈ ಸಿನಿಮಾದ ಬಗ್ಗೆ ಮಾತನಾಡಿದ ಅವರು ''ಹೊಸ ರೂಪದ ನಾಗರಹಾವು ತುಂಬ ಚೆನ್ನಾಗಿದೆ. ನಾನು ಈ ಸಿನಿಮಾವನ್ನು ಟಿಕೆಟ್ ತಗೊಂಡು ನೋಡುತ್ತೇನೆ'' ಎಂದು ಹೆಮ್ಮೆಯಿಂದ ಹೇಳಿದರು.
'ನಾಗರಹಾವು' ಚಿತ್ರದ ಹೊಸ ಅವತಾರವನ್ನು ಕೊಂಡಾಡಿದ ಗಣ್ಯರು
''ನಾನು ಒಬ್ಬ ಖಳ ನಟನಾಗಿ ಬಂದು, ಪೋಷಕ ನಟನಾಗಿ, ನಾಯಕ ನಟನಾಗಿ, ಜನನಾಯಕನಾಗಿ, ಅಬ್ದುಲ್ ಕಲಾಂ ಅವರ ಮುಂದೆ ಪ್ರಮಾಣ ವಚನ ಸ್ವೀಕರಿದ್ದೇನೆ ಎಂದರೆ ಅದಕ್ಕೆಲ್ಲ ಮೊದಲ ಮೆಟ್ಟಿಲು 'ನಾಗರಹಾವು' ಸಿನಿಮಾ.'' ಎಂದ ಅಂಬರೀಶ್ ಆ ಚಿತ್ರದ ಅನೇಕ ವಿಚಾರಗಳನ್ನು ಹಂಚಿಕೊಂಡರು.
'ನಾಗರಹಾವು' ಸಿನಿಮಾದ ಜಲೀಲ ಪಾತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿಯಾದ ಅಂಬರೀಶ್ ಮುಂದೆ ರೆಬಲ್ ಸ್ಟಾರ್ ಆಗಿ ಮಿಂಚಿದರು. ಅಂದಹಾಗೆ, ಇಂತಹ 'ನಾಗರಹಾವು' ಸಿನಿಮಾ ಮತ್ತೆ ಈಗ ತೆರೆಗೆ ಬರುತ್ತಿದೆ. ಇದೇ ತಿಂಗಳ 20 ರಂದು ಸಿನಿಮಾ ಮರು ಬಿಡುಗಡೆಯಾಗುತ್ತಿದೆ.