Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂಬಿ ವರ್ಷದ ಪುಣ್ಯ ತಿಥಿ: ಸುಮಲತಾ, ಅಭಿ ಜೊತೆ ದರ್ಶನ್ ಭಾಗಿ
Recommended Video
ರೆಬೆಲ್ ಸ್ಟಾರ್ ಅಂಬರೀಶ್ ಮೊದಲನೇ ವರ್ಷದ ಪುಣ್ಯ ತಿಥಿ ಕಾರ್ಯ ಇಂದು (ನವೆಂಬರ್ 14) ನಡೆಯಿತು. ಸುಮಲತಾ ಅಂಬರೀಶ್ ಹಾಗೂ ಪುತ್ರ ಅಭಿಷೇಕ್, ಅಂಬಿ ಸಮಾಧಿ ಬಳಿ ಭೇಟಿ ನೀಡಿ ವರ್ಷದ ಪುಣ್ಯ ತಿಥಿ ಕಾರ್ಯವನ್ನ ನೆರವೇರಿಸಿದರು.
ವರ್ಷ ತುಂಬುವ ಮೊದಲು ಪುಣ್ಯ ತಿಥಿ ಮಾಡಬೇಕಿದ್ದ ಕಾರಣ, ಅಂಬರೀಶ್ ಅವರ ನಕ್ಷತ್ರದ ಪ್ರಕಾರ 10 ದಿನಗಳ ಮೊದಲೇ ವರ್ಷದ ತಿಥಿ ಕಾರ್ಯ ಮಾಡಲಾಗಿದೆ.
ಅಂಬಿ ಸಮಾಧಿಗೆ ನಮನ ಸಲ್ಲಿಸಿದ ದರ್ಶನ್, ಸುಮಲತಾ
ಸುಮಲತಾ ಅಂಬರೀಶ್ ಹಾಗೂ ಪುತ್ರ ಅಭಿಷೇಕ್ ಜೊತೆ ಚಾಲೆಂಜಿಂಗ್ ಸ್ಟಾರ್ ದರ್ಶನ್, ನಿರ್ಮಾಪಕ್ ರಾಕ್ ಲೈನ್ ವೆಂಕಟೇಶ್, ಹಿರಿಯ ನಟ ದೊಡ್ಡಣ್ಣ ಅಂಬಿ ಸಮಾಧಿ ಬಳಿ ಭೇಟಿ ನೀಡಿ ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಅಂಬಿ ಅವರ ಮೊದಲನೇ ವರ್ಷದ ಪುಣ್ಯ ತಿಥಿಯ ಅಂಗವಾಗಿ ಇಂದು ರೆಬೆಲ್ ಸ್ಟಾರ್ 'ಅಂಬಿ ಅಪ್ಪಾಜಿ' ಸಮಾಧಿ ಮುಂದೆ ಏರ್ಪಡಿಸಿದ್ದ ಡೆಂಟಲ್'ಕ್ಯಾಂಪ್'ಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಮಂಡ್ಯ ಸಂಸದೆ ಸುಮಲತಾ ಚಾಲನೆ ನೀಡಿದರು.
ಅಂಬರೀಶ್ ಜೊತೆ ಆಕ್ಟ್ ಮಾಡಬಾರದೆಂದು ನಿರ್ಧರಿಸಿದ್ದರಂತೆ ಸುಮಲತಾ
ಅಂಬರೀಶ್ ಅವರ ಸ್ಮಾರಕ ವಿಚಾರವಾಗಿ ಮಾತನಾಡಿದ ಸುಮಲತಾ ಅಂಬರೀಶ್ ''ರಾಜ್ಯ ಸರ್ಕಾರ ಬದಲಾದ ಕಾರಣ ಸ್ಮಾರಕ ಕೆಲಸ ವಿಳಂಬ ಆಗುತ್ತಿದೆ. ಫಿಲಂ ಚೇಂಬರ್ ಮೂಲಕ ಈಗಿನ ರಾಜ್ಯ ಸರ್ಕಾರಕ್ಕೆ ಈ ಕುರಿತು ಮನವಿ ಮಾಡಲು ತೀರ್ಮಾನಿಸಲಾಗಿದೆ. ಆದಷ್ಟೂ ಬೇಗ ಕೆಲಸ ಆರಂಭವಾಗುತ್ತೆ'' ಎಂದು ತಿಳಿಸಿದರು.
ಇನ್ನು ರೆಬೆಲ್ ಸ್ಟಾರ್ ಪುಣ್ಯ ಸ್ಮರಣೆಯ ಪ್ರಯುಕ್ತ ಅರಮನೆ ಮೈದಾನದಲ್ಲಿ ಅಭಿಮಾನಿಗಳಿಗೆ ಭೋಜನಕೂಟ ಆಯೋಜಿಸಲಾಗಿತ್ತು.