Don't Miss!
- News ಬೆಂಗಳೂರು ನಮ್ಮ ಮೆಟ್ರೋ ಬೆಳಗ್ಗೆ 03:35ಕ್ಕೆ ಆರಂಭ: ಏಕೆ? ಕಾರಣ ಇಲ್ಲಿದೆ
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಭಾವನೆ ಪಡೆಯದೇ ಕೆಲಸ ಮುಗಿಸಿಕೊಟ್ಟ ಅಂಬರೀಶ್: ಮುನಿರತ್ನ
Recommended Video
ರೆಬೆಲ್ ಸ್ಟಾರ್ ಅಂಬರೀಶ್ ಅವರ ಕೊನೆಯ ಸಿನಿಮಾ ಕುರುಕ್ಷೇತ್ರ ಬಿಡುಗಡೆಗೆ ಸಜ್ಜಾಗಿದೆ. ದರ್ಶನ್ ದುರ್ಯೋಧನನಾಗಿ ನಟಿಸಿರುವ ಈ ಚಿತ್ರದಲ್ಲಿ ಅಂಬರೀಶ್ ಭೀಷ್ಮನ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಎಲ್ಲ ಅಂದುಕೊಂಡಂತೆ ಆಗಿದ್ದರೇ ಅಂಬಿ ಇದ್ದಾಗಲೇ ಈ ಚಿತ್ರ ತೆರೆಕಾಣಬೇಕಿತ್ತು. ಆದ್ರೆ, ಪೋಸ್ಟ್ ಪ್ರೊಡಕ್ಷನ್ ಕೆಲಸದ ವಿಳಂಬದಿಂದ ಸಾಧ್ಯವಾಗಿರಲಿಲ್ಲ.
ಈಗ ಆಗಸ್ಟ್ 9 ರಂದು ಕುರುಕ್ಷೇತ್ರ ಪ್ರಪಂಚದಾದ್ಯಂತ ಬಿಡುಗಡೆಯಾಗುತ್ತಿದೆ. ವಿಶೇಷ ಅಂದ್ರೆ ಅಂಬರೀಶ್ ಅವರು ಈ ಸಿನಿಮಾದಲ್ಲಿ ಸಂಭಾವನೆ ಪಡೆಯದೇ ನಟಿಸಿದ್ದಾರಂತೆ. ಹೀಗಂತ ಸ್ವತಃ ನಿರ್ಮಾಪಕ ಮುನಿರತ್ನ ಅವರೇ ಬಹಿರಂಗಪಡಿಸಿದ್ದಾರೆ.
'ಕುರುಕ್ಷೇತ್ರ' ಸುದ್ದಿಗೋಷ್ಠಿಗೆ ದರ್ಶನ್-ನಿಖಿಲ್ ಬರಲಿಲ್ಲ: ಮುನಿರತ್ನ ಕೊಟ್ಟ ಕಾರಣವೇನು?
'ಭೀಷ್ಮನ ಪಾತ್ರವನ್ನ ಅಂಬರೀಶ್ ಅವರಿಂದಲೇ ಮಾಡಿಸಬೇಕು ಎಂಬ ಆಸೆ ನನಗಿತ್ತು. ಆರಂಭದಲ್ಲಿ ಅವರು ಒಪ್ಪಿಲಿಲ್ಲ. ನನ್ನಿಂದ ಕಷ್ಟವಾಗುತ್ತೆ, ಮಾಡೋಕೆ ಆಗಲ್ಲ ಎಂದಿದ್ದರು. ನಂತರ ಒತ್ತಾಯಕ್ಕೆ ಮಣಿದು ನಟಿಸಲು ಒಪ್ಪಿಕೊಂಡರು' ಎಂದು ಮುನಿರತ್ನ ತಿಳಿಸಿದರು.
ಮಾತು ಮುಂದುವರಿಸಿದ ನಿರ್ಮಾಪಕ 'ಸುಮಾರು 15 ರಿಂದ 20 ದಿನಗಳ ಕಾಲ ಅಂಬರೀಶ್ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಡಬ್ಬಿಂಗ್ ಮಾಡುವಾಗಲು ಅಷ್ಟೇ, ತಾವಾಗಿಯೇ ಫೋನ್ ಮಾಡಿ ನಾನು ಡಬ್ಬಿಂಗ್ ಮಾಡ್ತೀನಿ, ರೆಡಿ ಮಾಡ್ಕೊಳ್ಳಿ ಎಂದು ಹೇಳಿದ್ರು. ನಾವು ಈಗಲೇ ಬೇಡ, 3ಡಿ ಕೆಲಸ ಮುಗಿಸಲಿ ಇಷ್ಟು ಬೇಗ ಯಾಕೆ ಎಂದ್ವಿ. ಅದ್ಯಾಕೋ ಅವರೇ ನಿರ್ಧಾರ ಮಾಡಿ 2 ದಿನ ಡಬ್ಬಿಂಗ್ ಮಾಡಿದ್ರು'' ಎಂದರು.
ಅಂತೂ ದುರ್ಯೋಧನನ ಎಂಟ್ರಿಗೆ ಡೇಟ್ ಫಿಕ್ಸ್: ವರಮಹಾಲಕ್ಷ್ಮಿಗೆ 'ಕುರುಕ್ಷೇತ್ರ' ದರ್ಶನ
ಕುರುಕ್ಷೇತ್ರ ಸಿನಿಮಾ ನೋಡಿದ ಮೇಲೆ ಅಂಬರೀಶ್ ಅವರ ಪಾತ್ರ ತುಂಬಾ ಚೆನ್ನಾಗಿ ಬಂದಿದೆ. ಅವರಿಲ್ಲ ಎಂಬ ಬೇಸರದಲ್ಲಿ ಈ ಸಿನಿಮಾ ತೆರೆಗೆ ಬರ್ತಿದೆ. ಅದೊಂದು ನೋವು ನಮ್ಮನ್ನ ಕಾಡುತ್ತಿದೆ ಎಂದು ಮುನಿರತ್ನ ಬೇಸರ ಹಂಚಿಕೊಂಡರು.