Don't Miss!
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- News Heavy Rain: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು: ಸಿಡಿಲು ಬಡಿದು 25 ಮೇಕೆಗಳ ಸಾವು
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Finance ಸುಗಮ, ಸುರಕ್ಷಿತ ಸಂಚಾರಕ್ಕಾಗಿ ವಿಶೇಷ ಅಭಿಯಾನ ಆರಂಭಿಸಿದ ಬೆಂಗಳೂರು ಸಂಚಾರಿ ಪೊಲೀಸ್
- Automobiles ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಪಾರ್ವತಮ್ಮ ಬೇಗ ಗುಣಮುಖರಾಗಲಿ' ಎಂದು ಪ್ರಾರ್ಥಿಸಿದ ಅಂಬರೀಶ್
ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ಪಾರ್ವತಮ್ಮ ರಾಜ್ ಕುಮಾರ್ ರವರಿಗೆ ಇಂದು ಸಹ ಚಿಕಿತ್ಸೆ ಮುಂದುವರೆದಿದೆ.
ಇವತ್ತು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಆಗಮಿಸಿದ ನಟ ಅಂಬರೀಶ್, ಹಿರಿಯ ನಟಿ ಬಿ.ಸರೋಜದೇವಿ ಮತ್ತು ನಿರ್ಮಾಪಕ ರಾಕ್ ಲೈಕ್ ವೆಂಕಟೇಶ್, ಪಾರ್ವತಮ್ಮ ಅವರ ಆರೋಗ್ಯ ವಿಚಾರಿಸಿದರು.
ಆರೋಗ್ಯ ವಿಚಾರಿಸಿ ಬಂದ ಬಳಿಕ ಅಂಬರೀಶ್, ಪಾರ್ವತಮ್ಮ ಅವರ ಬಗ್ಗೆ ಮಾತನಾಡಿದ್ರು. ''ಅಣ್ಣಾವ್ರಿಗೆ ಕಲೆ ಬಿಟ್ಟು ಬೇರೇನೂ ಗೊತ್ತಿರಲಿಲ್ಲ. ಅವರಿಗೆ ಸಂಬಂಧಿಸಿದ ಎಲ್ಲ ಕೆಲಸಗಳನ್ನು ಪಾರ್ವತಮ್ಮ ಅವರೇ ನೋಡಿಕೊಳ್ಳುತ್ತಿದ್ದರು. ಒಂದು ಹಳ್ಳಿಯಿಂದ ಬಂದ ಹೆಂಗಸು ರಾಜ್ ಕುಮಾರ್ ಸಾಮ್ರಾಜ್ಯವನ್ನೇ ಕಟ್ಟಿದ್ದಾರೆ ಅಂದ್ರೆ... ಅದು ದೇವರು ಅವರಿಗೆ ಕೊಟ್ಟಿರುವ ಆಶೀರ್ವಾದ. ಅವರ ಮನೆಯವರು ತಾಯಿ ಗುಣವಾಗಲಿ ಅಂತ ಎಷ್ಟು ಆಸೆ ಪಡುತ್ತಾರೋ, ನಾನು ಒಬ್ಬ ತಮ್ಮನಾಗಿ ಅಷ್ಟೇ ದೇವರಲ್ಲಿ ಪ್ರಾರ್ಥಿಸುತ್ತಿದ್ದೇನೇ'' ಅಂತ ಹೇಳಿದರು.
ಹಿರಿಯ ನಟಿ ಬಿ.ಸರೋಜ ದೇವಿ ಮತ್ತು ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸಹ ಇಂದು ಆಸ್ಪತ್ರೆಗೆ ಭೇಟಿ ನೀಡಿ ಪಾರ್ವತಮ್ಮ ಆರೋಗ್ಯ ವಿಚಾರಿಸಿದರು. ಸದ್ಯ ಪಾರ್ವತಮ್ಮ ಅವರು ವೆಂಟಿಲೇಟರ್ ಮೂಲಕ ಉಸಿರಾಟ ನೆಡೆಸುತ್ತಿದ್ದು, ಅವರಿಗೆ ದಿನಕ್ಕೆ ಮೂರು ಬಾರಿ ಡಯಾಲಿಸಿಸ್ ಮಾಡಲಾಗುತ್ತಿದೆ.