Don't Miss!
- News Hubballi: ರಾಜ್ಯ ಸರ್ಕಾರದ ವಿರುದ್ಧ ಭಾರೀ ಪ್ರತಿಭಟನೆ: ನೇಹಾ ನಿವಾಸಕ್ಕೆ ಶ್ರೀಗಳು, ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಪೊಲೀಸ್ ಅಭಯ
- Technology ನಿಮ್ಮ ಬಳಿ ರೆಡ್ಮಿಯ ಈ ಫೋನ್ ಇದ್ರೆ, ಇಲ್ಲಿದೆ ನಿಮಗೆ ಗುಡ್ನ್ಯೂಸ್!
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Sports LSG vs CSK IPL 2024: ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಪಾರ್ವತಮ್ಮ ಬೇಗ ಗುಣಮುಖರಾಗಲಿ' ಎಂದು ಪ್ರಾರ್ಥಿಸಿದ ಅಂಬರೀಶ್
ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ಪಾರ್ವತಮ್ಮ ರಾಜ್ ಕುಮಾರ್ ರವರಿಗೆ ಇಂದು ಸಹ ಚಿಕಿತ್ಸೆ ಮುಂದುವರೆದಿದೆ.
ಇವತ್ತು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಆಗಮಿಸಿದ ನಟ ಅಂಬರೀಶ್, ಹಿರಿಯ ನಟಿ ಬಿ.ಸರೋಜದೇವಿ ಮತ್ತು ನಿರ್ಮಾಪಕ ರಾಕ್ ಲೈಕ್ ವೆಂಕಟೇಶ್, ಪಾರ್ವತಮ್ಮ ಅವರ ಆರೋಗ್ಯ ವಿಚಾರಿಸಿದರು.
ಆರೋಗ್ಯ ವಿಚಾರಿಸಿ ಬಂದ ಬಳಿಕ ಅಂಬರೀಶ್, ಪಾರ್ವತಮ್ಮ ಅವರ ಬಗ್ಗೆ ಮಾತನಾಡಿದ್ರು. ''ಅಣ್ಣಾವ್ರಿಗೆ ಕಲೆ ಬಿಟ್ಟು ಬೇರೇನೂ ಗೊತ್ತಿರಲಿಲ್ಲ. ಅವರಿಗೆ ಸಂಬಂಧಿಸಿದ ಎಲ್ಲ ಕೆಲಸಗಳನ್ನು ಪಾರ್ವತಮ್ಮ ಅವರೇ ನೋಡಿಕೊಳ್ಳುತ್ತಿದ್ದರು. ಒಂದು ಹಳ್ಳಿಯಿಂದ ಬಂದ ಹೆಂಗಸು ರಾಜ್ ಕುಮಾರ್ ಸಾಮ್ರಾಜ್ಯವನ್ನೇ ಕಟ್ಟಿದ್ದಾರೆ ಅಂದ್ರೆ... ಅದು ದೇವರು ಅವರಿಗೆ ಕೊಟ್ಟಿರುವ ಆಶೀರ್ವಾದ. ಅವರ ಮನೆಯವರು ತಾಯಿ ಗುಣವಾಗಲಿ ಅಂತ ಎಷ್ಟು ಆಸೆ ಪಡುತ್ತಾರೋ, ನಾನು ಒಬ್ಬ ತಮ್ಮನಾಗಿ ಅಷ್ಟೇ ದೇವರಲ್ಲಿ ಪ್ರಾರ್ಥಿಸುತ್ತಿದ್ದೇನೇ'' ಅಂತ ಹೇಳಿದರು.
ಹಿರಿಯ ನಟಿ ಬಿ.ಸರೋಜ ದೇವಿ ಮತ್ತು ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸಹ ಇಂದು ಆಸ್ಪತ್ರೆಗೆ ಭೇಟಿ ನೀಡಿ ಪಾರ್ವತಮ್ಮ ಆರೋಗ್ಯ ವಿಚಾರಿಸಿದರು. ಸದ್ಯ ಪಾರ್ವತಮ್ಮ ಅವರು ವೆಂಟಿಲೇಟರ್ ಮೂಲಕ ಉಸಿರಾಟ ನೆಡೆಸುತ್ತಿದ್ದು, ಅವರಿಗೆ ದಿನಕ್ಕೆ ಮೂರು ಬಾರಿ ಡಯಾಲಿಸಿಸ್ ಮಾಡಲಾಗುತ್ತಿದೆ.