Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಪಾರ್ವತಮ್ಮ ಬೇಗ ಗುಣಮುಖರಾಗಲಿ' ಎಂದು ಪ್ರಾರ್ಥಿಸಿದ ಅಂಬರೀಶ್
ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ಪಾರ್ವತಮ್ಮ ರಾಜ್ ಕುಮಾರ್ ರವರಿಗೆ ಇಂದು ಸಹ ಚಿಕಿತ್ಸೆ ಮುಂದುವರೆದಿದೆ.
ಇವತ್ತು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಆಗಮಿಸಿದ ನಟ ಅಂಬರೀಶ್, ಹಿರಿಯ ನಟಿ ಬಿ.ಸರೋಜದೇವಿ ಮತ್ತು ನಿರ್ಮಾಪಕ ರಾಕ್ ಲೈಕ್ ವೆಂಕಟೇಶ್, ಪಾರ್ವತಮ್ಮ ಅವರ ಆರೋಗ್ಯ ವಿಚಾರಿಸಿದರು.
ಆರೋಗ್ಯ ವಿಚಾರಿಸಿ ಬಂದ ಬಳಿಕ ಅಂಬರೀಶ್, ಪಾರ್ವತಮ್ಮ ಅವರ ಬಗ್ಗೆ ಮಾತನಾಡಿದ್ರು. ''ಅಣ್ಣಾವ್ರಿಗೆ ಕಲೆ ಬಿಟ್ಟು ಬೇರೇನೂ ಗೊತ್ತಿರಲಿಲ್ಲ. ಅವರಿಗೆ ಸಂಬಂಧಿಸಿದ ಎಲ್ಲ ಕೆಲಸಗಳನ್ನು ಪಾರ್ವತಮ್ಮ ಅವರೇ ನೋಡಿಕೊಳ್ಳುತ್ತಿದ್ದರು. ಒಂದು ಹಳ್ಳಿಯಿಂದ ಬಂದ ಹೆಂಗಸು ರಾಜ್ ಕುಮಾರ್ ಸಾಮ್ರಾಜ್ಯವನ್ನೇ ಕಟ್ಟಿದ್ದಾರೆ ಅಂದ್ರೆ... ಅದು ದೇವರು ಅವರಿಗೆ ಕೊಟ್ಟಿರುವ ಆಶೀರ್ವಾದ. ಅವರ ಮನೆಯವರು ತಾಯಿ ಗುಣವಾಗಲಿ ಅಂತ ಎಷ್ಟು ಆಸೆ ಪಡುತ್ತಾರೋ, ನಾನು ಒಬ್ಬ ತಮ್ಮನಾಗಿ ಅಷ್ಟೇ ದೇವರಲ್ಲಿ ಪ್ರಾರ್ಥಿಸುತ್ತಿದ್ದೇನೇ'' ಅಂತ ಹೇಳಿದರು.
ಹಿರಿಯ ನಟಿ ಬಿ.ಸರೋಜ ದೇವಿ ಮತ್ತು ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸಹ ಇಂದು ಆಸ್ಪತ್ರೆಗೆ ಭೇಟಿ ನೀಡಿ ಪಾರ್ವತಮ್ಮ ಆರೋಗ್ಯ ವಿಚಾರಿಸಿದರು. ಸದ್ಯ ಪಾರ್ವತಮ್ಮ ಅವರು ವೆಂಟಿಲೇಟರ್ ಮೂಲಕ ಉಸಿರಾಟ ನೆಡೆಸುತ್ತಿದ್ದು, ಅವರಿಗೆ ದಿನಕ್ಕೆ ಮೂರು ಬಾರಿ ಡಯಾಲಿಸಿಸ್ ಮಾಡಲಾಗುತ್ತಿದೆ.