Don't Miss!
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- News Raichur: ರಾಯಚೂರಿನಲ್ಲಿ ತಣ್ಣಗಾಗದ ಬಂಡಾಯದ ಬೆಂಕಿ: ಬಿವಿ ನಾಯಕ್, ತಿಪ್ಪರಾಜು ಜೊತೆ ಬಿಜೆಪಿ ಸಂಧಾನ ವಿಫಲ!
- Technology Tecno: ಬಹುನಿರೀಕ್ಷಿತ ಟೆಕ್ನೋ ಪೋವಾ 6 ಪ್ರೊ ಲಾಂಚ್! 12GB RAM.. 6000mAh ಬ್ಯಾಟರಿ.. ಬೆಲೆ ಎಷ್ಟು?
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದೇವರನಾಡಿನತ್ತ ಅಂಬಿ ಪ್ರಯಾಣ, ಏನಿದರ ಕಾರಣ?
Recommended Video
ರೆಬಲ್ ಸ್ಟಾರ್ ಅಂಬರೀಶ್. ಸದ್ಯ ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆದುಕೊಂಡು ಆರಾಮಾಗಿ ಸ್ನೇಹಿತರ ಮನೆಗೆ ಭೇಟಿ ನೀಡುತ್ತಾ. ಆಪ್ತರನ್ನು ಮನೆಗೆ ಕರೆಸಿಕೊಂಡು ಔತಣ ಕೊಟ್ಟು ಕುಟುಂಬದ ಜೊತೆಯಲ್ಲಿ ಸಮಯ ಕಳೆಯುತ್ತಿದ್ದಾರೆ.
ಇವುಗಳ ಜೊತೆಯಲ್ಲಿ ಮಗನ ಸಿನಿಮಾಗಾಗಿ ಬೇಕಿರುವ ಎಲ್ಲಾ ರೀತಿಯ ತಯಾರಿಗಳನ್ನೂ ಮಾಡಿಕೊಳ್ಳುತ್ತಿದ್ದಾರೆ. ಸದ್ಯ ಅಂಬರೀಶ್ ದೇವರನಾಡಿನತ್ತ ಪ್ರಯಾಣ ಬೆಳೆಸಿದ್ದಾರಂತೆ. ಅರೆ ದೇವರ ನಾಡು ಅಂದರೆ ಯಾವುದು ಎಂದು ತಲೆ ಕೆಡಿಸಿಕೊಳ್ಳಬೇಡಿ.
ಅಂಬಿ ಪ್ರಯಾಣ ಬೆಳೆಸಿರುವ ದೇವರ ನಾಡು ಕೇರಳ. ಅಂಬಿ ನಿಂಗ್ ವಯಸ್ಸಾಯ್ತೋ ಚಿತ್ರತಂಡ ಸಿನಿಮಾದ ಕೊನೆಹಂತದ ಚಿತ್ರೀಕರಣಕ್ಕಾಗಿ ಕೇರಳಾಗೆ ಇಂದು ಪ್ರಯಾಣ ಬೆಳೆಸಿದೆ.
ಫೋಟೋ ಶೂಟ್ ಮುಗಿಸಿದ ಅಭಿಷೇಕ್ : ಅಂಬಿ ಬರ್ತ್ ಡೇಗೆ ಚಿತ್ರ ಲಾಂಚ್
ಅಂಬರೀಶ್ ಹಾಗೂ ಸುಹಾಸಿನಿ ಅಭಿನಯದ ಹಾಡಿನ ಚಿತ್ರೀಕರಣ ಕೇರಳದ ಸುಂದರ ತಾಣಗಳಲ್ಲಿ ಚಿತ್ರೀಕರಿಸಲು ಸಿನಿಮಾತಂಡ ನಿರ್ಧರಿಸಿದ್ದು ನಿರ್ಮಾಪಕ ಜಾಕ್ ಮಂಜು, ನೃತ್ಯ ನಿರ್ದೇಶಕ ಇಮ್ರಾನ್ ಸರ್ದಾರಿಯಾ ಹಾಗೂ ಅಂಬರೀಶ್ ಮುಂಜಾನೆಯೇ ವಿಮಾನ ಏರಿದ್ದಾರೆ.
ನವ ನಿರ್ದೇಶಕ ಗುರುದತ್ ಗಾಣಿಗ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು ಅಂಬರೀಶ್, ಸುಹಾಸಿನಿ, ಸೇರಿದಂತೆ ಕಿಚ್ಚ ಸುದೀಪ್ ಹಾಗೂ ಶೃತಿ ಹರಿಹರನ್ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ.