Don't Miss!
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- Technology ಇಂದು 3D ಕರ್ವ್ಡ್ ಡಿಸ್ಪ್ಲೇ ಇರುವ ಈ ಫೋನಿನ ಸೇಲ್!..ಆಫರ್ ಬೆಲೆ ಎಷ್ಟು?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕಿಚ್ಚ'ನಿಂದ ಶುರುವಾಯ್ತು 'ಅಂಬಿ'ಗೆ ವಯಸ್ಸಿನ ಪಾಠ
Recommended Video
ರೆಬೆಲ್ ಸ್ಟಾರ್ ಅಂಬರೀಶ್ ಹಾಗೂ ಕಿಚ್ಚ ಸುದೀಪ್ ಅಭಿನಯದ ಹೊಸ ಸಿನಿಮಾ ಸೆಟ್ಟೇರಿದೆ. ಇಂದಿನಿಂದ ಕಿಚ್ಚ ಅಂಬಿಗೆ ವಯಸ್ಸಿನ ಪಾಠ ಹೇಳಲು ಶುರು ಮಾಡಿದ್ದಾರೆ.
ಟೈಟಲ್ ನಿಂದಲೇ ಕುತೂಹಲ ಮೂಡಿಸಿದ್ದ 'ಅಂಬಿ ನಿಂಗ್ ವಯಸ್ಸಾಯ್ತೋ' ಸಿನಿಮಾದ 'ಮುಹೂರ್ತ' ಇಂದು ನಡೆದಿದೆ. ಇಂದಿನಿಂದಲೇ ಚಿತ್ರೀಕರಣ ಶುರು ಮಾಡಿರುವ ಸಿನಿಮಾತಂಡ ಬೆಳಗ್ಗೆ ರಾಜಾಜಿನಗರದ ಬಳಿ ಇರುವ ಗಣಪತಿ ದೇವಸ್ಥಾನದಲ್ಲಿ ಸಿನಿಮಾದ ಪೂಜೆ ಮಾಡಿ ಮುಗಿಸಿದೆ.
'ಅಂಬಿ ನಿಂಗ್ ವಯಸ್ಸಾಯ್ತೋ' ಎಂದ ಕಿಚ್ಚ
ರೆಬೆಲ್ ಸ್ಟಾರ್ ಅಂಬರೀಶ್ ಹಾಗೂ ಕಿಚ್ಚ ಸುದೀಪ್ ಒಟ್ಟಿಗೆ ಅಭಿನಯಿಸುತ್ತಿರುವ 'ಅಂಬಿ ನಿಂಗ್ ವಯಸ್ಸಾಯ್ತೋ' ಸಿನಿಮಾದ ಮುಹೂರ್ತ ಇಂದು ಬೆಂಗಳೂರಿನಲ್ಲಿ ನಡೆದಿದೆ. 'ದಿ ವಿಲನ್' ಚಿತ್ರೀಕರಣದಲ್ಲಿ ಸುದೀಪ್ ಬ್ಯುಸಿ ಆಗಿರೋದ್ರಿಂದ ಅಂಬರೀಶ್ ಪೂಜೆಯಲ್ಲಿ ಭಾಗಿಯಾಗಿದ್ದಾರೆ.
ಕಿಚ್ಚನ ಫ್ಯಾಮಿಲಿಯಿಂದ ಶುಭ ಹಾರೈಕೆ
ಮೈಸೂರಿನಲ್ಲಿ ಚಿತ್ರೀಕರಣ ಮಾಡುತ್ತಿರುವ ಸುದೀಪ್ ಅನುಪಸ್ಥಿತಿಯಲ್ಲಿ 'ಅಂಬಿ ನಿಂಗ್ ವಯಸ್ಸಾಯ್ತೋ' ಸಿನಿಮಾದ ಮುಹೂರ್ತ ನಡೆದಿದೆ. ಕಿಚ್ಚನ ತಾಯಿ ಸಿನಿಮಾಗೆ ಕ್ಲಾಪ್ ಮಾಡಿ ಶುಭಾಶಯ ಹೇಳಿದ್ದಾರೆ.
ಜಾಕ್ ಮಂಜು ನಿರ್ಮಾಣದಲ್ಲಿ ಸಿನಿಮಾ
'ಅಂಬಿ ನಿಂಗ್ ವಯಸ್ಸಾಯ್ತೋ' ಸಿನಿಮಾವನ್ನ ನವ ನಿರ್ದೇಶಕ 'ಗುರುದತ್ತ್ ಗಾಣಿಗ' ನಿರ್ದೇಶನ ಮಾಡ್ತಿದ್ದಾರೆ. ಮೊದಲ ಸಿನಿಮಾದಲ್ಲೇ ಹೆಚ್ಚಿನ ಜವಾಬ್ದಾರಿ ವಹಿಸಿಕೊಂಡಿದ್ದು 'ಗುರುದತ್ತ್' ಸಾಕಷ್ಟು ವರ್ಷಗಳಿಂದ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. ಇನ್ನು ಚಿತ್ರಕ್ಕೆ 'ಜಾಕ್ ಮಂಜು' ಸಿನಿಮಾಗೆ ಬಂಡವಾಳ ಹಾಕಿದ್ದಾರೆ .
ಶೀಘ್ರದಲ್ಲೇ ಟೀಸರ್ ರಿಲೀಸ್ ಮಾಡಲಿರುವ ತಂಡ
'ದಿ ವಿಲನ್' ಸಿನಿಮಾದ ಹಾಡಿನ ಚಿತ್ರೀಕರಣದಲ್ಲಿರುವ ಕಿಚ್ಚ ಸುದೀಪ್ 'ಟ್ವೀಟ್' ಮಾಡುವ ಮೂಲಕ ಸಿನಿಮಾದ ಬಗ್ಗೆ ಮಾಹಿತಿ ಜೊತೆಯಲ್ಲಿ ಸಂತಸವನ್ನ ವ್ಯಕ್ತ ಪಡಿಸಿದ್ದಾರೆ. ಅಂಬರೀಶ್ ಮಾಮನ ಜೊತೆ ಕೆಲಸ ಮಾಡೋದು ಖುಷಿ ಎಂದಿರೋ ಸುದೀಪ್ ನಿರ್ದೇಶಕ -ನಿರ್ಮಾಕರಿಗೆ ಆಲ್ ದಿ ಬೆಸ್ಟ್ ಹೇಳಿದ್ದಾರೆ.
ನಾಯಕಿ ತಲಾಶ್
ಬೆಳಗ್ಗೆ ಮುಹೂರ್ತ ಮಾಡಿರುವ ನಿರ್ದೇಶಕ 'ಗುರುದತ್ತ್' ಇಂದಿನಿಂದಲೇ ಚಿತ್ರೀಕರಣವನ್ನೂ ಪ್ರಾರಂಭ ಮಾಡಿದ್ದಾರೆ. ಸದ್ಯ ಅಂಬರೀಶ್, ಸುದೀಪ್ ಹಾಗೂ ಸುಹಾಸಿನಿ ಪಾತ್ರಗಳ ಆಯ್ಕೆಯಾಗಿದ್ದು ಚಿತ್ರತಂಡ ನಾಯಕಿಯ ಹುಡುಕಾಟ ಶುರು ಮಾಡಿದೆ.