Don't Miss!
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- News ಡಿಕೆ ಸುರೇಶ್ ನಿದ್ದೆಗೆಡಿಸಿದ ಡಾಕ್ಟರ್; ಕಾಂಗ್ರೆಸ್ ಅಭ್ಯರ್ಥಿ ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ: ಭವಿಷ್ಯ ನುಡಿದ ಸಿದ್ದರಾಮ
- Sports RR vs DC: ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾದ ರಿಷಭ್ ಪಂತ್
- Technology ಮತ್ತೊಂದು ಅಗ್ಗದ 5G ಫೋನ್ ಲಾಂಚ್ ಮಾಡಲು ಸಜ್ಜಾದ ರಿಯಲ್ಮಿ!..ಫೀಚರ್ಸ್ ಏನು?
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅದ್ಯಾವ ಕೆಟ್ಟ ಘಳಿಗೆಯಲ್ಲಿ 'ಇದೇ ನನ್ನ ಕೊನೆ ಸಿನಿಮಾ' ಅಂತ ಅಂಬಿ ಹೇಳಿದ್ರೋ.!
ಮಂಡ್ಯದ ಗಂಡು ಅಂಬರೀಶ್ ಅವರಿಗೆ ಅನಾರೋಗ್ಯದ ಸಮಸ್ಯೆ ಇಂದು ನಿನ್ನೆಯದ್ದಲ್ಲ. ನಾಲ್ಕು ವರ್ಷಗಳ ಹಿಂದೆಯೇ ಶ್ವಾಸಕೋಶದ ಸೋಂಕಿನಿಂದ ಬಳಲಿದ್ದ ಅಂಬರೀಶ್ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.
ಹೆಚ್ಚಿನ ಚಿಕಿತ್ಸೆಗಾಗಿ ಸಿಂಗಾಪುರಕ್ಕೆ ತೆರಳಿ, ಅಲ್ಲಿನ ಮೌಂಟ್ ಎಲಿಜಬತ್ ಆಸ್ಪತ್ರೆಯಲ್ಲಿ ಚೇತರಿಸಿಕೊಂಡಿದ್ದರು. ಅಲ್ಲಿ ಫಿಟ್ ಅಂಡ್ ಫೈನ್ ಆಗಿ ತಾಯ್ನಾಡಿಗೆ ಮರಳಿದ ಅಂಬರೀಶ್ ಚಿತ್ರೀಕರಣ ಮತ್ತು ರಾಜಕಾರಣದಲ್ಲಿ ತಮ್ಮನ್ನ ತಾವು ತೊಡಗಿಸಿಕೊಂಡಿದ್ದರು.
ಎಲ್ಲವೂ ಸರಾಗವಾಗಿದೆ ಅಂತಿರೋವಾಗಲೇ, ಈ ವರ್ಷದ ಹುಟ್ಟುಹಬ್ಬದಂದು (ಮೇ 29, 2018) ನಟ ಅಂಬರೀಶ್ ಒಂದು ಶಾಕಿಂಗ್ ಹೇಳಿಕೆ ನೀಡಿದ್ದರು. ''ಅಂಬಿ ನಿಂಗ್ ವಯಸ್ಸಾಯ್ತೋ' ನನ್ನ ಕೊನೆಯ ಸಿನಿಮಾ ಆಗಬಹುದು'' ಎಂದು ಜನ್ಮದಿನದಂದು ಅಂಬರೀಶ್ ಹೇಳಿದ್ದರು.
ಅದ್ಯಾವ ಕೆಟ್ಟ ಘಳಿಗೆಯಲ್ಲಿ ಅಂಬರೀಶ್ ಈ ಮಾತು ಹೇಳಿದ್ರೋ, ಏನೋ.. ಆ ಮಾತೇ ನಿಜವಾಗಿದೆ.! ಮುಂದೆ ಓದಿರಿ...
ಹುಟ್ಟುಹಬ್ಬದಂದು ಅಂಬರೀಶ್ ಹೇಳಿದ್ದೇನು.?
ಜನ್ಮದಿನದ ಸಡಗರದಲ್ಲಿ ಇದ್ದ ಅಂಬರೀಶ್, ''ಅಂಬಿ ನಿಂಗ್ ವಯಸ್ಸಾಯ್ತೋ' ಬಳಿಕ ಇನ್ಯಾವುದೇ ಸಿನಿಮಾ ಒಪ್ಪಿಕೊಳ್ಳಬಾರದು ಅಂತ ತೀರ್ಮಾನ ಮಾಡಿದ್ದೇನೆ'' ಎಂದು ಮಾಧ್ಯಮಗಳ ಮುಂದೆ ಹೇಳಿದ್ದರು.
ಅಂಬರೀಶ್ ಗೆ ವಯಸ್ಸಾಯ್ತು: ಇನ್ಮುಂದೆ ಸಿನಿಮಾ ಮಾಡೋದು ಡೌಟು.?
ಆರಾಮಾಗಿ ಇರುತ್ತೇನೆ ಎಂದಿದ್ದ ಅಂಬಿ.!
''ನನಗೂ ವಯಸ್ಸಾಗಿದೆ. ರಾಜಕೀಯ ನಿಲ್ಲಿಸಿದ್ದೇನೆ. ಇನ್ಮೇಲೆ ಮನೆಯಲ್ಲಿ ಆರಾಮಾಗಿ ಇರುತ್ತೇನೆ. ಸಿನಿಮಾ ಸಾಕು. ಇದೇ ನನ್ನ ಕೊನೆಯ ಸಿನಿಮಾ ಆಗಬಹುದು. ನನ್ನ ಸಮಯ ಮುಗಿಯಿತು'' ಎಂದು ಅಂಬರೀಶ್ ಹೇಳಿದ್ದರು.
ಡಾಕ್ಟರ್ ಮಾತು ಕೇಳದೆ ಸಿನಿಮಾ ನೋಡಲು ಬಂದ ಅಂಬರೀಶ್
ಚುನಾವಣೆಯಲ್ಲೂ ಸ್ಪರ್ಧಿಸದ ಅಂಬರೀಶ್
2018 ರ ವಿಧಾನ ಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ರೆಬೆಲ್ ಸ್ಟಾರ್ ಅಂಬರೀಶ್ ಸ್ಪರ್ಧಿಸಬೇಕಿತ್ತು. ಕಾಂಗ್ರೆಸ್ ಪಕ್ಷ ಕೂಡ ಅಂಬರೀಶ್ ಗೆ ಟಿಕೆಟ್ ನೀಡಿತ್ತು. ಆದ್ರೆ, ಚುನಾವಣೆಯಲ್ಲಿ ಸ್ಪರ್ಧಿಸಲು ಅಂಬರೀಶ್ ನಿರಾಕರಿಸಿದ್ದರು.
ಕೊನೆಯ ದಿನಗಳಲ್ಲಿ ಅಂಬಿಗಿದ್ದ ಎರಡು ಆಸೆ ಈಡೇರಲೇ ಇಲ್ಲ.!
ಆಂಬ್ಯುಲೆನ್ಸ್ ನಲ್ಲಿ ಬಂದು ಚಿತ್ರ ನೋಡಿದ್ದ ಅಂಬಿ
ಅನಾರೋಗ್ಯ ಕಾಡುತ್ತಿದ್ದ ಕಾರಣ, ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದರೂ, ಆಂಬ್ಯುಲೆನ್ಸ್ ನಲ್ಲಿ ಕಲಾವಿದರ ಸಂಘಕ್ಕೆ ಬಂದು 'ಅಂಬಿ ನಿಂಗ್ ವಯಸ್ಸಾಯ್ತೋ' ಚಿತ್ರವನ್ನ ಅಂಬರೀಶ್ ವೀಕ್ಷಿಸಿದ್ದರು.
ಇದಕ್ಕೆ ಕಾಕತಾಳೀಯ ಅಂತೀರಾ, ವಿಚಿತ್ರ ಅಂತೀರಾ.?
ಛೇ.. ವಿಧಿ ಎಷ್ಟು ಕ್ರೂರ.!
ಸಿನಿಮಾ ಮತ್ತು ರಾಜಕೀಯ ಜೀವನದಿಂದ ದೂರ ಸರಿದಿದ್ದ ಅಂಬರೀಶ್, ''ನನ್ನ ಸಮಯ ಮುಗಿಯಿತು'' ಅಂತ ಅದ್ಯಾವ ಘಳಿಗೆಯಲ್ಲಿ ಹೇಳಿದ್ರೋ, ಅದೇ ಘಟಿಸಿದೆ. ವಿಧಿಯ ಆಟವೇ ಹೀಗೆ.!