Don't Miss!
- Sports ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಕೆಎಲ್ ರಾಹುಲ್ಗೆ ಸ್ಥಾನ?; ರಾಬಿನ್ ಉತ್ತಪ್ಪ ಹೇಳಿದ್ದೇನು?
- News karnataka Rain: ಬೆಂಗಳೂರಿನಲ್ಲಿ ಏ.23ರವರೆಗೆ ಮಳೆ- ಬೆಳಗಾವಿ ಮಂದಿಗೆ ಕುಂದಾ ಕೊಟ್ಟ ವರುಣ ಧಾರವಾಡ ಮಂದಿಗಿಂದು ಪೇಡಾ ಕೊಡ್ತಾನಾ?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಮಿತಾಭ್ ಬಚ್ಚನ್ ಅಂದು ಹೇಳಿದ್ದ ಮಾತನ್ನ ಚಿರಂಜೀವಿ ಕೇಳಲೇ ಇಲ್ಲ
Recommended Video
ಮೆಗಾಸ್ಟಾರ್ ಚಿರಂಜೀವಿ ನಟನೆಯ 'ಸೈರಾ ನರಸಿಂಹ ರೆಡ್ಡಿ' ಚಿತ್ರದಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಮೊದಲ ಬಾರಿಗೆ ನಟಿಸಿದ್ದಾರೆ. ಆಂಧ್ರಪ್ರದೇಶದ ಮೊದಲ ಸ್ವಾತಂತ್ರ್ಯ ಹೋರಾಟಗಾರ ಉಯ್ಯಾಲವಾಡ ನರಸಿಂಹ ರೆಡ್ಡಿ ಪಾತ್ರದಲ್ಲಿ ಚಿರು ನಟಿಸಿದ್ದು, ಅವರ ಗುರುಗಳ ಪಾತ್ರದಲ್ಲಿ ಅಮಿತಾಭ್ ನಟಿಸಿದ್ದಾರೆ.
ಅಕ್ಟೋಬರ್-2 ರಂದು 'ಸೈರಾ' ಸಿನಿಮಾ ಐದು ಭಾಷೆಯಲ್ಲಿ ತೆರೆಕಾಣುತ್ತಿದ್ದು ಈಗಾಗಲೇ ಎಲ್ಲ ಭಾಷೆಯಲ್ಲೂ ಪ್ರಮೋಷನ್ ಶುರುವಾಗಿದೆ. ಬಾಲಿವುಡ್ ಮಾಧ್ಯಮವೊಂದರಲ್ಲಿ ಅಮಿತಾಭ್ ಮತ್ತು ಚಿರಂಜೀವಿ ಒಟ್ಟಿಗೆ ಸಂದರ್ಶನ ನೀಡಿದ್ದು, ಈ ಸಂದರ್ಶನದಲ್ಲಿ ಚಿರು ಮಾಡಿದ ತಪ್ಪಿನ ಬಗ್ಗೆ ಬಿಗ್ ಬಿ ಸ್ಮರಿಸಿಕೊಂಡಿದ್ದಾರೆ.
ಚಿರಂಜೀವಿ ಅವರಿಗೆ ಹಲವು ವರ್ಷಗಳ ಹಿಂದೆಯೇ ನಾನೊಂದು ಸಲಹೆ ನೀಡಿದ್ದೆ. ಆದರೆ, ಅವರು ಅದನ್ನ ತೆಗೆದುಕೊಂಡಿಲ್ಲ ಎಂದು ಅಮಿತಾಭ್ ಸಂದರ್ಶನದಲ್ಲಿ ಸ್ಮರಿಸಿಕೊಂಡಿದ್ದಾರೆ.
'ಮಾಡಿದ ತಪ್ಪು ಅರಿವಾಯಿತು': ರಜನಿ, ಕಮಲ್ ಆ ತಪ್ಪು ಮಾಡುವುದು ಬೇಡ
''ರಾಜಕೀಯಕ್ಕೆ ಹೋಗಬೇಡಿ, ನಾನೊಮ್ಮೆ ರಾಜಕೀಯಕ್ಕೆ ಹೋಗಿ ಅದರಿಂದ ನಾನು ಎಷ್ಟೆಲ್ಲ ಸವಾಲು ಎದುರಿಸಿದ್ದೇನೆ, ಅದರಿಂದ ಕಳೆದುಕೊಂಡಿದ್ದೇನೆ, ಅಂತಹ ಸ್ಥಿತಿ ನಿಮಗೆ ನಿರ್ಮಾಣವಾಗುವುದು ಬೇಡ ಎಂದು ಸಲಹೆ ನೀಡಿದ್ದೆ. ಆದರೆ ಚಿರಂಜೀವಿ ನನ್ನ ಮಾತು ಕೇಳಲಿಲ್ಲ'' ಎಂದು ಹೇಳಿದ್ದಾರೆ.
ಅಮಿತ್ ಶಾ-ಮೋದಿ ಅವರನ್ನ ರಜನಿಕಾಂತ್ ಹೋಲಿಸಿದ್ದು ಯಾರಿಗೆ?
2008ರಲ್ಲಿ ಆಂಧ್ರ ಪ್ರದೇಶದ ತಿರುಪತಿಯಲ್ಲಿ ಪ್ರಜಾರಾಜ್ಯಂ ಪಕ್ಷ ಸ್ಥಾಪನೆ ಮಾಡಿದ್ದ ಚಿರಂಜೀವಿ 2009ರ ಚುನಾವಣೆಯಲ್ಲಿ ಎರಡು ಕಡೆ ಸ್ಪರ್ಧೆ ಮಾಡಿದ್ದರು. ತಿರುಪತಿಯಲ್ಲಿ ಗೆದ್ದರು, ಪಾಲಕೊಲ್ಲು ಕ್ಷೇತ್ರದಲ್ಲಿ ಸೋಲು ಕಂಡರು.