Don't Miss!
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Automobiles ಓಲಾ ಎಸ್ 1 ಪ್ರೋ VS ಏಥರ್ 450X: ಮದಗಜಗಳ ಹಣಾಹಣಿಯಲ್ಲಿ ಯಾರು ಬೆಸ್ಟ್?
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- News Government Employees; ಸರ್ಕಾರಿ ನೌಕರರ ಜೀವ ವಿಮೆ ಪಾಲಿಸಿ ಅವಧಿ ಏರಿಕೆ
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೇರಳ ಸಂತ್ರಸ್ಥರಿಗೆ ದೊಡ್ಡ ಸಹಾಯ ಮಾಡಿದ ಅಮಿತಾಬ್ ಬಚ್ಚನ್
ಕೇರಳದಲ್ಲಿ ಪ್ರವಾಹ ಉಂಟಾಗಿ ಜನರ ಜೀವನ ಬೀದಿಗೆ ಬಂದಿದ್ದರೂ, ಬಾಲಿವುಡ್ ಸೂಪರ್ ಸ್ಟಾರ್ ಗಳು ಎಂದುಕೊಂಡ ಕೆಲವರು ಯಾವುದೇ ರೀತಿಯ ನೆರವು ನೀಡಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರು ಕಿಡಿಕಾರಿದ್ದರು.
ಅದರಲ್ಲೂ ಬಿಗ್ ಬಿ ಅಮಿತಾಬ್ ಬಚ್ಚನ್ ಅವರನ್ನ ಟಾರ್ಗೆಟ್ ಮಾಡಿ ಕೆಲವರು ತಮ್ಮ ಆಕ್ರೋಶವನ್ನ ಹೊರಹಾಕಿದ್ದರು. ಮೊದ ಮೊದಲು ಕೇವಲ ಟ್ವೀಟ್ ಮೂಲಕ ಕೇರಳಿಗರಿಗೆ ಸಾಂತ್ವನ ಹೇಳಿ ಸುಮ್ಮನಾಗಿದ್ದ ಬಿಗ್ ಬಿ ಈಗ ದೊಡ್ಡ ಮೊತ್ತವನ್ನ ನೀಡುವ ಮೂಲಕ ನೆರವಾಗಿದ್ದಾರೆ.
ಹೌದು, ಕೇರಳ ಸಂತ್ರಸ್ಥರ ಪರಿಹಾರ ನಿಧಿಗೆ ಅಮಿತಾಬ್ ಬಚ್ಚನ್ 51 ಲಕ್ಷ ರೂಪಾಯಿ ನೀಡಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ಕೇರಳ ಜನತೆಗಾಗಿ ಗರಿಷ್ಠ ಮೊತ್ತ ನೀಡಿದ್ರಾ ಸನ್ನಿ: ನೀಲಿತಾರೆಯ ಈ ಕೆಲಸಕ್ಕೆ ಭಾರಿ ಮೆಚ್ಚುಗೆ.!
ಕೇವಲ 51 ಲಕ್ಷ ಹಣಮಾತ್ರವಲ್ಲ, ಅಗತ್ಯವಸ್ತುಗಳು ಹಾಗೂ ಬಟ್ಟೆಗಳನ್ನ ಕೂಡ ಕಳುಹಿಸಿದ್ದಾರಂತೆ. 80 ಜಾಕೆಟ್, 25 ಪ್ಯಾಂಟ್, 20 ಶರ್ಟ್, 40 ಜೋಡಿಯ ಶೂಗಳು, ಹಾಗೂ ಇತರೆ ಆಹಾರ ಸಾಮಾಗ್ರಿಗಳನ್ನ ಬಿಗ್ ಬಿ ಕೇರಳ ಸಂತ್ರಸ್ಥರಿಗಾಗಿ ನೀಡಿದ್ದಾರೆ ಎನ್ನಲಾಗಿದೆ.
ತಮಿಳು ನಟ ವಿಜಯ್ ಕೇರಳಗೆ ಕೊಟ್ಟಿದ್ದು 14 ಕೋಟಿಯಲ್ಲ.! ಮತ್ತೆಷ್ಟು.?
ಬಾಲಿವುಡ್ ಯುವ ನಟ ಸುಶಾಂತ್ ಸಿಂಗ್ ರಜಪೂತ್ 1 ಕೋಟಿ ನೀಡುವ ಮೂಲಕ ತಮ್ಮ ಸಹಾಯ ನೀಡಿದ್ದರು. ಇನ್ನು ಶಾರೂಖ್ ಖಾನ್ ಅಭಿಮಾನಿಗಳು ಕೇರಳ ಜನತೆಗೆ ದೊಡ್ಡ ಮಟ್ಟದಲ್ಲಿ ಸಹಾಯ ಮಾಡಿದ್ದಾರೆ.
ಇವರ ಜೊತೆ ಆಲಿಯಾ ಭಟ್, ವಿದ್ಯಾ ಬಾಲನ್, ಅಭಿಷೇಕ್ ಬಚ್ಚನ್, ರಣ್ಬೀರ್ ಕಪೂರ್, ರಿಷಿ ಕಪೂರ್ ಸೇರಿದಂತೆ ಹಲವರು ಕೇರಳಗೆ ನೆರವು ನೀಡಿದ್ದಾರೆ ಎನ್ನಲಾಗಿದೆ.