Don't Miss!
- Automobiles Bullet Train: ಭಾರತದಲ್ಲಿ ಮೊದಲ ಬಾರಿಗೆ ನವೀನ ರೀತಿಯ ಹಳಿ ಬಳಕೆ.. 320 ಕಿ.ಮೀ ವೇಗದಲ್ಲಿ ಓಡುತ್ತೆ ರೈಲು!
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿರಂಜೀವಿ 151ನೇ ಚಿತ್ರದಲ್ಲಿ ಅಮಿತಾಬ್ ಪಾತ್ರದ ಗುಟ್ಟು ಈಗ ರಟ್ಟು.!
ಮೆಗಾ ಸ್ಟಾರ್ ಚಿರಂಜೀವಿ ರವರ 151ನೇ ಸಿನಿಮಾದಲ್ಲಿ (ಸೈರಾ ನರಸಿಂಹ ರೆಡ್ಡಿ) ಕಿಚ್ಚ ಸುದೀಪ್ ಹಾಗೂ ಅಮಿತಾಬ್ ಬಚ್ಚನ್ ರವರಿಗೂ ಬಹು ಮುಖ್ಯ ಪಾತ್ರಗಳಿವೆ.
ತೆಲುಗಿನ ಸ್ವಾತಂತ್ರ್ಯ ಹೋರಾಟಗಾರ 'ಉಯ್ಯಲವಾಡ ನರಸಿಂಹ ರೆಡ್ಡಿ' ಪಾತ್ರದಲ್ಲಿ ಚಿರಂಜೀವಿ ಕಾಣಿಸಿಕೊಂಡರೆ, ಕನ್ನಡ ಹಾಗೂ ತೆಲುಗಿನಲ್ಲಿ ಮಾತನಾಡುವ ಪರಿಣಾಮಕಾರಿ ವ್ಯಕ್ತಿಯ ಪಾತ್ರದಲ್ಲಿ ಸುದೀಪ್ ಮಿಂಚಲಿದ್ದಾರೆ ಎಂಬ ಸಂಗತಿ ಈಗಾಗಲೇ ಬಹಿರಂಗವಾಗಿದೆ.
Recommended Video
ಯಾರ್ರೀ ಹೇಳಿದ್ದು ಸುದೀಪ್ ಗೆ 'ಮೆಗಾ' ಆಫರ್ ಕೈತಪ್ಪಿ ಹೋಯ್ತು ಅಂತ.?!
ಈ ನಡುವೆ ಅಮಿತಾಬ್ ಬಚ್ಚನ್ ರವರ ಪಾತ್ರವೇನಿರಬಹುದು ಎಂದು ಕುತೂಹಲದಿಂದ ಕಾಯುತ್ತಿದ್ದವರಿಗೆ ಇದೋ ಇಲ್ಲಿದೆ ಉತ್ತರ....
'ಸೈರಾ ನರಸಿಂಹ ರೆಡ್ಡಿ' ಚಿತ್ರದಲ್ಲಿ ಅಮಿತಾಬ್ ಬಚ್ಚನ್ ಪಾತ್ರವೇನು.?
ವರದಿಗಳ ಪ್ರಕಾರ, 'ಸೈರಾ ನರಸಿಂಹ ರೆಡ್ಡಿ' ಚಿತ್ರದಲ್ಲಿ 'ಗೋಸಾಯಿ ವೆಂಕಣ್ಣ' ಪಾತ್ರದಲ್ಲಿ ಅಮಿತಾಬ್ ಬಚ್ಚನ್ ಕಾಣಿಸಿಕೊಳ್ಳಲಿದ್ದಾರೆ.
ಅಮಿತಾಬ್ ಸೂಕ್ತ
ಬ್ರಿಟೀಷರ ವಿರುದ್ಧ ಉಯ್ಯಲವಾಡ ನರಸಿಂಹ ರೆಡ್ಡಿ ದಂಗೆ ಎದ್ದಾಗ, ಅವರಿಗೆ ಸೂಕ್ತ ಸಲಹೆ, ಸೂಚನೆಗಳನ್ನು ನೀಡಿದ್ದೇ 'ಗೋಸಾಯಿ ವೆಂಕಣ್ಣ'. ಹೀಗಾಗಿ, ಗತ್ತು ಗೈರತ್ತಿರುವ 'ಗೋಸಾಯಿ ವೆಂಕಣ್ಣ' ರವರ ಪಾತ್ರದಲ್ಲಿ ಅಮಿತಾಬ್ ಬಚ್ಚನ್ ನ್ಯಾಯ ಸಲ್ಲಿಸುತ್ತಾರೆ ಎಂಬ ನಂಬಿಕೆ ಚಿತ್ರತಂಡಕ್ಕಿದೆ.
ಸಿನಿಮಾದಲ್ಲಿದೆ ದೊಡ್ಡ ತಾರಾಬಳಗ
'ಸೈರಾ ನರಸಿಂಹ ರೆಡ್ಡಿ' ಚಿತ್ರದಲ್ಲಿ ಸುದೀಪ್, ಅಮಿತಾಬ್ ಬಚ್ಚನ್ ಜೊತೆಗೆ ವಿಜಯ್ ಸೇತುಪತಿ ಹಾಗೂ ಜಗಪತಿ ಬಾಬು ಕೂಡ ಇದ್ದಾರೆ. ಚಿತ್ರಕ್ಕೆ ಎ.ಆರ್.ರೆಹಮಾನ್ ಸಂಗೀತ ಇರಲಿದೆ.
ನಾಯಕಿ ನಯನತಾರಾ
'ಸೈರಾ ನರಸಿಂಹ ರೆಡ್ಡಿ' ಚಿತ್ರಕ್ಕೆ ನಯನತಾರಾ ನಾಯಕಿ. ಬರೋಬ್ಬರಿ 150 ಕೋಟಿ ರೂಪಾಯಿಯಲ್ಲಿ ಚಿತ್ರ ತಯಾರಾಗಲಿದ್ದು, ರಾಮ್ ಚರಣ್ ಬಂಡವಾಳ ಹಾಕಲಿದ್ದಾರೆ.