twitter
    For Quick Alerts
    ALLOW NOTIFICATIONS  
    For Daily Alerts

    ರಾಜ್ ಸ್ಮಾರಕ ಲೋಕಾರ್ಪಣೆಗೆ ಬಿಗ್ ಬಿ, ರಜನಿ, ಚಿರು

    By Rajendra
    |

    ವರನಟ ಡಾ. ರಾಜ್‌ಕುಮಾರ್ ಸ್ಮಾರಕವನ್ನು ನವೆಂಬರ್ 29ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಸ್ವಾಗತ ಸಮಿತಿಯ ಅಧ್ಯಕ್ಷರು ಹಾಗೂ ಮೂಲಸೌಕರ್ಯ ಅಭಿವೃದ್ಧಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಹಾಗೂ ಹಜ್ ಸಚಿವ ಆರ್. ರೋಷನ್ ಬೇಗ್ ಅವರು ತಿಳಿಸಿದರು.

    ಸೋಮವಾರ (ಅ.27) ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಬೆಳಿಗ್ಗೆ ಡಾ. ರಾಜ್‌ಕುಮಾರ್ ಅವರ ಸಮಾಧಿಯ ಬಳಿ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಸಂಜೆ ಅರಮನೆ ಮೈದಾನದಲ್ಲಿ ಸಭಾ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದರು.


    ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಖ್ಯಾತ ನಟರಾದ ಅಮಿತಾಬ್ ಬಚ್ಚನ್, ರಜನೀಕಾಂತ್, ಕಮಲಹಾಸನ್, ಚಿರಂಜೀವಿ, ಮುಮ್ಮುಟ್ಟಿ, ವಸತಿ ಸಚಿವರೂ ಆಗಿರುವ ಅಂಬರೀಶ್ ಹಾಗೂ ಬಿ. ಸರೋಜಾದೇವಿ ಅವರನ್ನು ಆಹ್ವಾನಿಸಲು ಸಮಿತಿಯು ತೀರ್ಮಾನಿಸಿತು.

    ಸ್ಮಾರಕ ಉದ್ಘಾಟನೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ನೆರವೇರಿಸುವ ಸಂಬಂಧ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಸಚಿವ ಆರ್. ರೋಷನ್ ಬೇಗ್ ಅಧ್ಯಕ್ಷತೆಯಲ್ಲಿ ಸ್ವಾಗತ ಸಮಿತಿ ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಗಂಗರಾಜು ಅವರ ಅಧ್ಯಕ್ಷತೆಯಲ್ಲಿ ಸಾಂಸ್ಕೃತಿಕ ಸಮಿತಿಗಳನ್ನು ರಚಿಸಲಾಗಿದೆ.

    ಸ್ವಾಗತ ಸಮಿತಿಯಲ್ಲಿ ವಸತಿ ಸಚಿವ ಎಂ.ಎಚ್. ಅಂಬರೀಶ್, ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ, ವಿಧಾನ ಸಭಾ ಸದಸ್ಯ ಮುನಿರತ್ನ, ವಿಧಾನಪರಿಷತ್ ಸದಸ್ಯರಾದ ಜಯಮಾಲಾ, ತಾರಾ ಅನೂರಾಧ, ಜಗ್ಗೇಶ್, ಸಂದೇಶ್ ನಾಗರಾಜ್, ಇ. ಕೃಷ್ಣಪ್ಪ, ಎಚ್.ಡಿ. ಗಂಗರಾಜು, ಪ್ರೊ. ಬರಗೂರು ರಾಮಚಂದ್ರಪ್ಪ, ರಾಘವೇಂದ್ರ ರಾಜ್ ಕುಮಾರ್, ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕರು ಹಾಗೂ ಎಂ. ರವಿ ಕುಮಾರ್ ಅವರು ಸದಸ್ಯರಾಗಿದ್ದಾರೆ.

    ಸಾಂಸ್ಕೃತಿಕ ಸಮಿತಿಯಲ್ಲಿ ಕಾರ್ಯಾಧ್ಯಕ್ಷರಾಗಿ ಸಾ.ರಾ. ಗೋವಿಂದ್, ಸಂಚಾಲಕರಾಗಿ ಎಸ್. ನಾರಾಯಣ್, ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕರು, ರಾಘವೇಂದ್ರ ರಾಜ್‌ಕುಮಾರ್, ಪ್ರೊ. ಬರಗೂರು ರಾಮಚಂದ್ರಪ್ಪ, ಅಧ್ಯಕ್ಷರು, ಚಲನಚಿತ್ರ ನಿರ್ಮಾಪಕರ ಸಂಘ, ಅಧ್ಯಕ್ಷರು, ಚಲನಚಿತ್ರ ನಿರ್ದೇಶಕರ ಸಂಘ, ಅಧ್ಯಕ್ಷರು, ಚಲನಚಿತ್ರ ಕಲಾವಿದರ ಸಂಘ, ಅಧ್ಯಕ್ಷರು, ಚಲನಚಿತ್ರ ಕಾರ್ಮಿಕರ ಸಂಘ, ಅಧ್ಯಕ್ಷರು, ಚಲನಚಿತ್ರ ತಂತ್ರಜ್ಞರ ಸಂಘ, ಅಧ್ಯಕ್ಷರು, ಕಿರು ಚಲನಚಿತ್ರ ಸಂಘ, ಅಧ್ಯಕ್ಷರು, ಛಾಯಾಚಿತ್ರ ಸಂಘ, ಸದಸ್ಯ ಕಾರ್ಯದರ್ಶಿ, ಡಾ. ರಾಜ್‌ಕುಮಾರ್ ಪ್ರತಿಷ್ಠಾನ ಇವರು ಸದಸ್ಯರಾಗಿದ್ದಾರೆ.

    ಸಭೆಯಲ್ಲಿ ವಸತಿ ಸಚಿವ ಅಂಬರೀಶ್, ವಿಧಾನ ಪರಿಷತ್ ಸದಸ್ಯರಾದ ಜಗ್ಗೇಶ್, ಜಯಮಾಲಾ, ತಾರಾ ಅನುರಾಧ, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಗಂಗರಾಜು, ನಟ ರಾಘವೇಂದ್ರ ರಾಜ್‌ಕುಮಾರ್, ನಿರ್ದೇಶಕ ಎಸ್. ನಾರಾಯಣ್, ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ, ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕ ಎನ್.ಆರ್. ವಿಶುಕುಮಾರ್, ಡಾ. ರಾಜ್‌ಕುಮಾರ್ ಪ್ರತಿಷ್ಠಾನದ ಸದಸ್ಯ ಕಾರ್ಯದರ್ಶಿ ಹಾಗೂ ಕಂಠೀರವ ಸ್ಟುಡಿಯೋ ವ್ಯವಸ್ಥಾಪಕ ನಿರ್ದೇಶಕ ಎಂ. ರವಿಕುಮಾರ್ ಉಪಸ್ಥಿತರಿದ್ದರು. (ಫಿಲ್ಮಿಬೀಟ್ ಕನ್ನಡ)

    English summary
    Bollywood legend Amitabh Bachchan and superstar Rajinikanth, Kamal Haasan, Tollywood superstar Chiranjeevi, Mollywood stars Mamooty and Mohanlal among other stalwarts of Indian cinema would be invited to attend the unveiling ceremony of matinee idol Dr Rajkumar’s memorial in Bangalore on 29th November, 2014.
    Tuesday, October 28, 2014, 14:25
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X