Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೃತಿಚೌರ್ಯ ಆರೋಪಕ್ಕೆ ರಮೇಶ್ ತಿರುಗೇಟು
ಇದಕ್ಕೆ ಪ್ರತಿಕ್ರಿಯಿಸಿರುವ ರಮೇಶ್, ನಾನು ಯಾರ ಕತೆಯನ್ನೂ ಕದ್ದಿಲ್ಲ. ಗುರುರಾಜ್ ಅವರನ್ನು ನಾನು ಇದುವರೆಗೂ ಭೇಟಿಯಾಗಿಲ್ಲ. ಅವರ ಕೃತಿಯನ್ನೂ ಓದಿಲ್ಲ. ವೀರಪ್ಪನ್ ಬಗ್ಗೆ ಈಗಾಗಲೆ ಹಲವಾರು ಜನ ಹಲವಾರು ಕೃತಿಗಳನ್ನು ಬರೆದಿದ್ದಾರೆ. ಅವರಿಗೆಲ್ಲಾ ಕ್ರೆಡಿಟ್ ಕೊಡುಲು ಸಾಧ್ಯವೆ? ಎಂದಿದ್ದಾರೆ.
ಮುಂದುವರೆದು, 2006ರಿಂದ ವೀರಪ್ಪನ್ ಬಗ್ಗೆ ನಾನು ಅಧ್ಯಯನ ಮಾಡುತ್ತಿದ್ದೇನೆ. ವೀರಪ್ಪನ್ ಜೊತೆಗೆ ಸಂಪರ್ಕವಿದ್ದವರನ್ನು ಸಂದರ್ಶಿಸಿದ್ದೇನೆ. ಇವೆಲ್ಲವನ್ನೂ ರೆಕಾರ್ಡ್ ಮಾಡಿಕೊಂಡಿರುವ ದಾಖಲೆಗಳು ನನ್ನ ಬಳಿ ಇವೆ ಎಂದು ತಿಳಿಸಿದ್ದಾರೆ.
ಆದರೆ ಪತ್ರಕರ್ತ ಗುರುರಾಜ್ ಅವರು ಮಾತ್ರ ತಮ್ಮ ಕೃತಿಯನ್ನು ಬಳಸಿಕೊಂಡಿದಕ್ಕೆ ಕೃತಜ್ಞತೆಗಳನ್ನು ತಿಳಿಸಲೇಬೇಕು ಹಾಗೂ ನನಗೆ ಬರಬೇಕಾಗಿರುವ ಗೌರವಧನ ಬರಲೇಬೇಕು ಎಂದು ಆಗ್ರಹಿಸಿದ್ದಾರೆ. ಒಟ್ಟಿನಲ್ಲಿ ಈ ಸಮಸ್ಯೆ ಸದ್ಯಕ್ಕೆ ಬಗೆಹರಿಯುವ ಲಕ್ಷಣಗಳು ಕಾಣುತ್ತಿಲ್ಲ.
ಈ ಹಿಂದೊಮ್ಮೆ ನಮ್ಮ ಅನುಮತಿ ಪಡೆಯದೆ ಚಿತ್ರವನ್ನು ಎ.ಎಂ.ಆರ್ ರಮೇಶ್ ತೆರೆಗೆ ತರುತ್ತಿದ್ದಾರೆ ಎಂದು 'ನಕ್ಕೀರನ್' ಪತ್ರಿಕೆಯ ಸಂಪಾದಕ ಆರ್ ಆರ್ ಗೋಪಾಲ್ ಕೋರ್ಟ್ ಮೆಟ್ಟಿಲೇರಿದ್ದರು. ಈ ಸಂಬಂಧ 'ಅಟ್ಟಹಾಸ' ಚಿತ್ರ ಬಿಡುಗಡೆಗೆ ಕೋರ್ಟ್ ನಿರ್ಬಂಧ ಹೇರಿ ಬಳಿಕ ತೆರವುಗೊಳಿಸಿತ್ತು.
ಚಿತ್ರವೊಂದು ಇನ್ನೇನು ತೀರಾ ಬಿಡುಗಡೆ ಹಂತಕ್ಕೆ ಬಂದಾಗ ವಿವಾದಕ್ಕೀಡಾಗುವುದು ಕನ್ನಡ ಚಿತ್ರೋದ್ಯಮದಲ್ಲಿ ಇತ್ತೀಚೆಗೆ ಸಾಮಾನ್ಯ ಬೆಳವಣಿಗೆಯಾಗಿದೆ. ಪ್ರಚಾರಕ್ಕಾಗಿ ಹೀಗೆ ಮಾಡಲಾಗುತ್ತಿದೆಯೋ ಅಥವಾ ನಿಜವಾಗಿಯೂ ವಿವಾದ ಎದುರಾಗಿದೆಯೋ ಎಂಬುದು ಮಾತ ನಿಗೂಢವಾಗಿದೆ. (ಏಜೆನ್ಸೀಸ್)