Don't Miss!
- News ಚುನಾವಣೆ ಹೊತ್ತಲ್ಲೇ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ಗೆ ಕೋರ್ಟ್ ಸಮನ್ಸ್: ಯಾಕೆ?
- Sports IPL 2024: RCB vs KKR ಹೆಡ್-ಟು-ಹೆಡ್ ದಾಖಲೆ, ಪಿಚ್ ವರದಿ; ಚಿನ್ನಸ್ವಾಮಿಯಲ್ಲಿ ಗೆಲುವು ಯಾರಿಗೆ?
- Finance ವಿವಿಧ ರಾಜ್ಯಗಳ ನರೇಗಾ ಕಾರ್ಮಿಕರ ವೇತನ ದರ ಪರಿಷ್ಕರಣೆ, ವಿವರ
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ರೈತ' ಗಣಪತಿಯನ್ನ ಪ್ರತಿಷ್ಠಾಪಿಸಿ, ಪೂಜೆ ಸಲ್ಲಿಸಿದ ಅಮೂಲ್ಯ ದಂಪತಿ
ಇಂದು ಸಂಕಷ್ಟ ಹರ ಗಣೇಶ ಚತುರ್ಥಿ.. ನಾಡಿನ ಮನೆ ಮನೆಯಲ್ಲೂ ಗಣೇಶ ಹಬ್ಬವನ್ನ ಜೋರಾಗಿ ಆಚರಿಸಲಾಗುತ್ತಿದೆ. ನಟಿ ಅಮೂಲ್ಯ ಮನೆಯಲ್ಲೂ ಗೌರಿ-ಗಣೇಶ ಹಬ್ಬದ ಸಂಭ್ರಮ ಅದ್ಧೂರಿಯಾಗಿದೆ.
ಹೇಳಿ ಕೇಳಿ ನಟಿ ಅಮೂಲ್ಯ ಹಾಗೂ ಪತಿ ಜಗದೀಶ್ ಅವರಿಗೆ ಪರಿಸರ ಕಾಳಜಿ ಹೆಚ್ಚು. ಪರಿಸರ ಪ್ರೇಮಿಗಳಾಗಿರುವ ಈ ದಂಪತಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮೇಲೆ ಸಸಿ ನೆಟ್ಟಿದ್ದು ನಿಮಗೆ ನೆನಪಿರಬಹುದು.
ಇದೀಗ ಪರಿಸರ ಸ್ನೇಹಿಯಾಗಿ ಗಣೇಶ ಹಬ್ಬವನ್ನ ಅಮೂಲ್ಯ-ಜಗದೀಶ್ ದಂಪತಿ ಆಚರಿಸಿದ್ದಾರೆ. ಜೇಡಿ ಮಣ್ಣಿನಿಂದ ತಯಾರಿಸಲಾದ ವಿಶೇಷ ರೈತ ಗಣಪತಿಯನ್ನ ಮನೆಯಲ್ಲಿ ಪ್ರತಿಷ್ಠಾಪಿಸಿ, ಅಮೂಲ್ಯ-ಜಗದೀಶ್ ಪೂಜೆ ಸಲ್ಲಿಸಿದ್ದಾರೆ.
ನಟ ದರ್ಶನ್ ಮನೆಯ ಮಣ್ಣಿನ ಗಣೇಶ ನೋಡಿ
ಅಂದ್ಹಾಗೆ, ಈ ರೈತ ಗಣಪನನ್ನು ಜೇಡಿ ಮಣ್ಣು ಹಾಗೂ ಸಗಣಿಯಿಂದ ತಯಾರಿಸಲಾಗಿದೆ. ಇದರಲ್ಲಿ ಕಾಳುಗಳನ್ನೂ ಸೇರಿಸಲಾಗಿದೆ. ರೈತ ಗಣಪತಿಯನ್ನ ಕುಂಡದಲ್ಲಿ ಅಥವಾ ತೋಟದಲ್ಲಿ ವಿಸರ್ಜಿಸಿದರೆ, ಮೂರ್ತಿಯಲ್ಲಿದ್ದ ಕಾಳುಗಳು ಮೊಳಕೆಯೊಡೆದು ಸಸಿಯಾಗಿ ಬೆಳೆಯುತ್ತದೆ.
'ದಿ ವಿಲನ್' ತಂಡದ ಗಣೇಶ ಆಚರಣೆ ಸಖತ್ ವಿಶೇಷವಾಗಿತ್ತು
''ನೀವೂ ಕೂಡ ನಿಮ್ಮ ಮನೆಯಲ್ಲಿ ಪರಿಸರ ಸ್ನೇಹಿ ಗಣೇಶನನ್ನು ಕೂರಿಸಿ, ಪರಿಸರ ಉಳಿಸಿ... ನಮ್ಮ ಗಣಪ.. ರೈತ ಗಣಪ'' ಅಂತ ಹೇಳುವ ಮೂಲಕ ಗಣೇಶ ಹಬ್ಬದ ಪ್ರಯುಕ್ತ ಎಲ್ಲರಿಗೂ ಶುಭ ಕೋರುವುದರ ಜೊತೆಗೆ ಜಾಗೃತಿಯನ್ನೂ ಮೂಡಿಸಿದ್ದಾರೆ ಅಮೂಲ್ಯ ದಂಪತಿ.
Happy Gowri Ganesha habba ❤️😍 pic.twitter.com/p9hwNQ3Yps
— Amulya (@Amulya_moulya) September 13, 2018