Don't Miss!
- News ಮಹಾರಾಜರು ಬೆಂಗಳೂರು ಅರಮನೆ ಮೈದಾನ ಜಾಗ ಬಿಟ್ಟು ಕೊಡುವಂತೆ ಎಎಪಿ ಆಗ್ರಹ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ರೈತ' ಗಣಪತಿಯನ್ನ ಪ್ರತಿಷ್ಠಾಪಿಸಿ, ಪೂಜೆ ಸಲ್ಲಿಸಿದ ಅಮೂಲ್ಯ ದಂಪತಿ
ಇಂದು ಸಂಕಷ್ಟ ಹರ ಗಣೇಶ ಚತುರ್ಥಿ.. ನಾಡಿನ ಮನೆ ಮನೆಯಲ್ಲೂ ಗಣೇಶ ಹಬ್ಬವನ್ನ ಜೋರಾಗಿ ಆಚರಿಸಲಾಗುತ್ತಿದೆ. ನಟಿ ಅಮೂಲ್ಯ ಮನೆಯಲ್ಲೂ ಗೌರಿ-ಗಣೇಶ ಹಬ್ಬದ ಸಂಭ್ರಮ ಅದ್ಧೂರಿಯಾಗಿದೆ.
ಹೇಳಿ ಕೇಳಿ ನಟಿ ಅಮೂಲ್ಯ ಹಾಗೂ ಪತಿ ಜಗದೀಶ್ ಅವರಿಗೆ ಪರಿಸರ ಕಾಳಜಿ ಹೆಚ್ಚು. ಪರಿಸರ ಪ್ರೇಮಿಗಳಾಗಿರುವ ಈ ದಂಪತಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮೇಲೆ ಸಸಿ ನೆಟ್ಟಿದ್ದು ನಿಮಗೆ ನೆನಪಿರಬಹುದು.
ಇದೀಗ ಪರಿಸರ ಸ್ನೇಹಿಯಾಗಿ ಗಣೇಶ ಹಬ್ಬವನ್ನ ಅಮೂಲ್ಯ-ಜಗದೀಶ್ ದಂಪತಿ ಆಚರಿಸಿದ್ದಾರೆ. ಜೇಡಿ ಮಣ್ಣಿನಿಂದ ತಯಾರಿಸಲಾದ ವಿಶೇಷ ರೈತ ಗಣಪತಿಯನ್ನ ಮನೆಯಲ್ಲಿ ಪ್ರತಿಷ್ಠಾಪಿಸಿ, ಅಮೂಲ್ಯ-ಜಗದೀಶ್ ಪೂಜೆ ಸಲ್ಲಿಸಿದ್ದಾರೆ.
ನಟ ದರ್ಶನ್ ಮನೆಯ ಮಣ್ಣಿನ ಗಣೇಶ ನೋಡಿ
ಅಂದ್ಹಾಗೆ, ಈ ರೈತ ಗಣಪನನ್ನು ಜೇಡಿ ಮಣ್ಣು ಹಾಗೂ ಸಗಣಿಯಿಂದ ತಯಾರಿಸಲಾಗಿದೆ. ಇದರಲ್ಲಿ ಕಾಳುಗಳನ್ನೂ ಸೇರಿಸಲಾಗಿದೆ. ರೈತ ಗಣಪತಿಯನ್ನ ಕುಂಡದಲ್ಲಿ ಅಥವಾ ತೋಟದಲ್ಲಿ ವಿಸರ್ಜಿಸಿದರೆ, ಮೂರ್ತಿಯಲ್ಲಿದ್ದ ಕಾಳುಗಳು ಮೊಳಕೆಯೊಡೆದು ಸಸಿಯಾಗಿ ಬೆಳೆಯುತ್ತದೆ.
'ದಿ ವಿಲನ್' ತಂಡದ ಗಣೇಶ ಆಚರಣೆ ಸಖತ್ ವಿಶೇಷವಾಗಿತ್ತು
''ನೀವೂ ಕೂಡ ನಿಮ್ಮ ಮನೆಯಲ್ಲಿ ಪರಿಸರ ಸ್ನೇಹಿ ಗಣೇಶನನ್ನು ಕೂರಿಸಿ, ಪರಿಸರ ಉಳಿಸಿ... ನಮ್ಮ ಗಣಪ.. ರೈತ ಗಣಪ'' ಅಂತ ಹೇಳುವ ಮೂಲಕ ಗಣೇಶ ಹಬ್ಬದ ಪ್ರಯುಕ್ತ ಎಲ್ಲರಿಗೂ ಶುಭ ಕೋರುವುದರ ಜೊತೆಗೆ ಜಾಗೃತಿಯನ್ನೂ ಮೂಡಿಸಿದ್ದಾರೆ ಅಮೂಲ್ಯ ದಂಪತಿ.
Happy Gowri Ganesha habba ❤️😍 pic.twitter.com/p9hwNQ3Yps
— Amulya (@Amulya_moulya) September 13, 2018